Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಎಲ್ಲ ಸಮುದಾಯದವರೊಂದಿಗೂ ವ್ಯಾಪಾರ...

"ಎಲ್ಲ ಸಮುದಾಯದವರೊಂದಿಗೂ ವ್ಯಾಪಾರ ಮಾಡಿ": ಮುಸ್ಲಿಂ ಧರ್ಮ ಗುರುಗಳಿಂದ ಧರ್ಮ ಸಹಿಷ್ಣುತೆಯ ಸಂದೇಶ

ವಾರ್ತಾಭಾರತಿವಾರ್ತಾಭಾರತಿ1 April 2022 7:42 PM IST
share
ಎಲ್ಲ ಸಮುದಾಯದವರೊಂದಿಗೂ ವ್ಯಾಪಾರ ಮಾಡಿ: ಮುಸ್ಲಿಂ ಧರ್ಮ ಗುರುಗಳಿಂದ ಧರ್ಮ ಸಹಿಷ್ಣುತೆಯ ಸಂದೇಶ

ಬೆಂಗಳೂರು, ಎ.1: ಪ್ರಸ್ತುತ ಸಮಾಜದಲ್ಲಿ ಕೋಮುದ್ವೇಷವನ್ನು ಹರಡುವ ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಮುಸ್ಲಿಮರು ಈ ದ್ವೇಷದ ವಾತಾವರಣದಿಂದ ನಿರಾಶರಾಗಬಾರದು. ಎಲ್ಲಾ ಧರ್ಮದವರು ಧರ್ಮ ಸಹಿಷ್ಣುತೆಯನ್ನು ಪ್ರತಿಪಾದಿಸಬೇಕು ಎಂದು ಮುಸ್ಲಿಂ ಧರ್ಮಗುರುಗಳು ಕರೆ ನೀಡಿದ್ದಾರೆ.

ಶುಕ್ರವಾರ ಪ್ರೆಸ್‍ಕ್ಲಬ್‍ನಲ್ಲಿ ಮುಫ್ತಿ ಇಫ್ತೆಖಾರ್ ಅಹ್ಮದ್ ಕಾಸ್ಮಿ ಅವರು ಮಾತನಾಡಿ, ಕೆಲವು ತಿಂಗಳುಗಳ ಹಿಂದೆ ಜನರ ಸಮಸ್ಯೆಗಳನ್ನು ಬಿಟ್ಟು ಇಲ್ಲದ ವಿಷಯಗಳ ಮೇಲೆ ಅಂದರೆ, ಉತ್ಸವಗಳಲ್ಲಿ ವ್ಯಾಪಾರಿಗಳನ್ನು ಬಹಿಷ್ಕರಿಸುವುದು ಅಥವಾ ಹಲಾಲ್ ವಿಷಯದಲಿ ಸುಳ್ಳು ಮತ್ತು ಸಂಬಂಧವಿಲ್ಲದ ಚರ್ಚೆಯನ್ನು ಮಾಡಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯವಾದ್ದು. ಸಮಾಜದಲ್ಲಿ ದ್ವೇಷ ಹರಡುವವರು ಮುಸಲ್ಮಾನರೇ ಆಗಿರಲಿ ಅಥವಾ ಯಾರೇ ಆಗಿರಲಿ ಅವರ ಮಾತುಗಳಿಗೆ ಮರುಳಾಗಬಾರದು ಎಂದು ಕರೆ ನೀಡಿದರು. 

ರಮಝಾನ್ ತಿಂಗಳು ಬರುತ್ತಿದ್ದು,  ರಮಝಾನ್ ನಲ್ಲಿ ಮಸೀದಿಗಳ ಸಮೀಪ ಯಾವುದೇ ಧರ್ಮದ ವ್ಯಾಪಾರಿಗಳು ಹಣ್ಣಗಳನ್ನು ಮಾರಾಟ ಮಾಡುತ್ತಿದ್ದರೆ ಯಾವುದೇ ಧರ್ಮ ಭೇದವಿಲ್ಲದೆ, ಎಲ್ಲಾ ಸಮುದಾಯಗಳ ವ್ಯಾಪಾರಸ್ಥರ ಜೊತೆ ವ್ಯಾಪಾರ ಮಾಡಬೇಕು ಎಂದು ಅವರು ಸಂದೇಶ ರವಾನೆ ಮಾಡಿದರು.

ಗೋಷ್ಠಿಯಲ್ಲಿ ವಹೀದುದ್ದೀನ್ ಖಾನ್, ಮೌಲಾನಾ ಸಯ್ಯದ್ ಶಬ್ಬೀರ್ ಅಹ್ಮದ್ ನದ್ವಿ, ಮೌಲಾನಾ ಮಕ್ಸೂದ್ ಇಮ್ರಾನ್ ರಷಾದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X