Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ ಮಹಾಪಂಚಾಯತ್:‌ ಮುಸ್ಲಿಮರ ವಿರುದ್ಧ...

ಹಿಂದೂ ಮಹಾಪಂಚಾಯತ್:‌ ಮುಸ್ಲಿಮರ ವಿರುದ್ಧ ಆಯುಧಗಳನ್ನೆತ್ತಿಕೊಳ್ಳುವಂತೆ ನರಸಿಂಹಾನಂದ ಕರೆ

ಕಾರ್ಯಕ್ರಮದಲ್ಲಿ ಮೂವರು ಪತ್ರಕರ್ತರ ಮೇಲೆ ಹಿಂದುತ್ವ ಕಾರ್ಯಕರ್ತರಿಂದ ದಾಳಿ

ವಾರ್ತಾಭಾರತಿವಾರ್ತಾಭಾರತಿ3 April 2022 5:15 PM IST
share
ಹಿಂದೂ ಮಹಾಪಂಚಾಯತ್:‌ ಮುಸ್ಲಿಮರ ವಿರುದ್ಧ ಆಯುಧಗಳನ್ನೆತ್ತಿಕೊಳ್ಳುವಂತೆ ನರಸಿಂಹಾನಂದ ಕರೆ

 ಹೊಸದಿಲ್ಲಿ,ಎ.3: ಇಲ್ಲಿಯ ಬುರಾರಿ ಮೈದಾನದಲ್ಲಿ ರವಿವಾರ ಆಯೋಜಿಸಲಾಗಿದ್ದ ಹಿಂದು ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ನಾಲ್ವರು ಮುಸ್ಲಿಮ್ ಪತ್ರಕರ್ತರು ಸೇರಿದಂತೆ ಐವರು ಪತ್ರಕರ್ತರನ್ನು ಬಲಪಂಥೀಯ ಗುಪೊಂದು ಥಳಿಸಿದೆ ಎಂದು ಆರೋಪಿಸಲಾಗಿದೆ. ಥಳಿತಕ್ಕೊಳಗಾದ ಪತ್ರಕರ್ತರಲ್ಲಿ ಫ್ರೀಲಾನ್ಸರ್ಗಳಾದ ಅರ್ಬಾಬ್ ಅಲಿ ಮತ್ತು ಮೀರ್ ಫೈಸಲ್,ಫೋಟೊಜರ್ನಲಿಸ್ಟ್ ಮುಹಮ್ಮದ್ ಮೆಹೆರಬಾನ್ ಮತ್ತು ದಿ ಕ್ವಿಂಟ್ ಸುದ್ದಿ ಜಾಲತಾಣದ ಮೇಘನಾದ ಬೋಸ್ ಸೇರಿದ್ದಾರೆ. ಐದನೇ ಪತ್ರಕರ್ತ ಬೆದರಿಕೆಯ ಭೀತಿಯಿಂದಾಗಿ ಅನಾಮಿಕರಾಗಿರಲು ಬಯಸಿದ್ದಾರೆ.ನ್ಯೂಸ್ ಲಾಂಡ್ರಿ ಯ ಸುದ್ದಿಗಾರರಾದ ಶಿವಾಂಗಿ ಮತ್ತು ರೋನಕ್ ಭಟ್ಟ್ ಅವರ ಮೇಲೂ ಗುಂಪು ಹಲ್ಲೆ ನಡೆಸಿದೆ ಎನ್ನಲಾಗಿದೆ.

ತಾವು ಕಾರ್ಯಕ್ರಮದ ವರದಿ ಮಾಡಲು ತೆರಳಿದ್ದಾಗ ತಮ್ಮ ಮೇಲೆ ಹಲ್ಲೆಗಳು ನಡೆದಿವೆ. ಗುಂಪು ತಮ್ಮ ಉಪಕರಣಗಳನ್ನು ಕಿತ್ತುಕೊಂಡಿದ್ದು, ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಅಳಿಸಲಾಗಿದೆ ಎಂದು ಪತ್ರಕರ್ತರು ತಿಳಿಸಿದ್ದಾರೆ.ವಿವಾದಾತ್ಮಕ ಧಾರ್ಮಿಕ ನಾಯಕ ಯತಿ ನರಸಿಂಹಾನಂದರ ಅನುಯಾಯಿ ಪ್ರೀತ್ ಸಿಂಗ್ ನಡೆಸುತ್ತಿರುವ ಸೇವ್ ಇಂಡಿಯಾ ಫೌಂಡೇಷನ್‌ ನ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸುದರ್ಶನ ನ್ಯೂಸ್‌ ನ ಸಂಪಾದಕ ಸುರೇಶ ಚಾವಂಕೆ ಅವರೂ ಮಹಾ ಪಂಚಾಯತ್ ನ ಮುಖ್ಯ ಅತಿಥಿಗಳಲ್ಲೋರ್ವರಾಗಿದ್ದರು.

ಕಾರ್ಯಕ್ರಮದಲ್ಲಿ ನರಸಿಂಹಾನಂದ ಮಾತನಾಡುತ್ತಿರುವ ವೀಡಿಯೊವನ್ನು ಎಎ ನ್ಯೂಸ್ ಶೇರ್ ಮಾಡಿಕೊಂಡಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದ್ದ ತನ್ನ ಭಾಷಣದಲ್ಲಿ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳುವಂತೆ ಹಿಂದುಗಳನ್ನು ಪ್ರಚೋದಿಸಿರುವ ನರಸಿಂಹಾನಂದ ‘ 20 ವರ್ಷಗಳಲ್ಲಿ ಶೇ.40ರಷ್ಟು ಹಿಂದುಗಳು ಕೊಲ್ಲಲ್ಪಟ್ಟಿದ್ದಾರೆ. ಇದನ್ನು ನೀವು ಬದಲಿಸಲು ಬಯಸಿದ್ದರೆ ನೀವು ಗಂಡಸರಾಗಬೇಕು.ಗಂಡಸರು ತಮ್ಮ ಬಳಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿರುತ್ತಾರೆ ’ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು ಎನ್ನಲಾಗಿದೆ.

ಸೇವ್ ಇಂಡಿಯಾ ಫೌಂಡೇಷನ್ ಕಳೆದ ವರ್ಷ ಜಂತರ್ ಮಂತರ್ನಲ್ಲಿ ಇಂತಹುದೇ ಕಾರ್ಯಕ್ರಮವನ್ನು ಏರ್ಪಡಿಸಿತ್ತು ಮತ್ತು ಅಲ್ಲಿ ಮುಸ್ಲಿಮರ ವಿರುದ್ಧ ದ್ವೇಷಭಾಷಣಗಳನ್ನು ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ನವಂಬರ್ 2021ರಲ್ಲಿ ಪೊಲೀಸರು ಫೌಂಡೇಷನ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.
‘ಗುಂಪು ನಮ್ಮನ್ನು ಕ್ರೂರವಾಗಿ ಥಳಿಸಿತ್ತು. ಮೀರ್ ಕ್ಯಾಮೆರಾದಲ್ಲಿಯ ವೀಡಿಯೊಗಳನ್ನು ಅಳಿಸಲಾಗಿದೆ. ನಮ್ಮನ್ನು ಕೊಲ್ಲುತ್ತಾರೆಂದು ನಾನು ಭಾವಿಸಿದ್ದೆ. ನಮ್ಮನ್ನು ಥಳಿಸುವಾಗ ಅವರು ನಮ್ಮನ್ನು ಜಿಹಾದಿಗಳು ಎಂದು ಕರೆಯುತ್ತಿದ್ದರು. ಪೊಲೀಸರು ನಮ್ಮನ್ನು ಗುಂಪಿನಿಂದ ಪಾರು ಮಾಡಿ ಮುಖರ್ಜಿ ನಗರ ಠಾಣೆಗೆ ಕರೆದೊಯ್ದರು ’ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅಲಿ ತಿಳಿಸಿದರು.ಘಟನೆಯಲ್ಲಿ ಇಬ್ಬರು ಪತ್ರಕರ್ತರು ಗಾಯಗೊಂಡಿದ್ದಾರೆ.ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಡಿಸಿಪಿ ಉಷಾ ರಂಗ್ನಾನಿ ಅವರು,ಹಿಂದು ಮಹಾಪಂಚಾಯತ್ಗೆ ಅನುಮತಿಯನ್ನು ನಿರಾಕರಿಸಲಾಗಿತ್ತು ಎಂದು ತಿಳಿಸಿದರು.

Yati Narsinghanand is at it again, he asks "Hindus" to take up arms against "Muslims" while addressing a crowd gathered at the ongoing "Hindu Mahapanchayat" in Delhi's Burari ground.

"If you want to change the future, become a man,man is the one who has arms in hand," Yati said. pic.twitter.com/ABuX2B58UU

— Mahmodul Hassan (@mhassanism) April 3, 2022

I and @mdmeharban03 were beaten up because of our muslim identity by Hindu mob. Communal slurs were shouted on me at Hindu mahapanchayat at Burari ground in New Delhi. We had gone there to cover the event. We were called jihadis and attacked for being Muslims.

— Meer Faisal (@meerfaisal01) April 3, 2022

Our reporter @shivangi441 and producer Rounak Bhat were manhandled and assaulted today while covering the Hindu Mahasabha event at Burari. They are on their way to file a complaint with the @DelhiPolice. Reports coming in of other journalists also being targeted.

— newslaundry (@newslaundry) April 3, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X