Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂಪಾಯಿ:...

ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂಪಾಯಿ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ3 April 2022 10:17 PM IST
share
ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂಪಾಯಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಎ.3: ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.  

ನಗರದ ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಶನಿವಾರ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೊಲೀಸರಿಗಾಗಿ ರಾಜ್ಯ ಸರಕಾರ ಹಲವು ಕಲ್ಯಾಣ ಯೋಜನೆಗಳನ್ನು ಜಾರಿ ಮಾಡಿದೆ. ಆರೋಗ್ಯ ಸೇವೆ, ಬಂದೋಬಸ್ತ್ ಗೆ ಭತ್ತೆ, ಭಡ್ತಿಗಳನ್ನೂ ನೀಡಿದೆ. ಪೊಲೀಸರಿಗೆ ವಸತಿಗಾಗಿ 10 ಸಾವಿರ ಮನೆಗಳ ನಿರ್ಮಾಣಕ್ಕೂ ಅನುದಾನ ನೀಡಲಾಗಿದೆ. ಪೊಲೀಸರ ಆರೋಗ್ಯಕ್ಕಾಗಿ 100 ಕೋಟಿ ರೂ.ಗಳನ್ನು ಮೀಸಲಿರಿಸಿದೆ ಎಂದು ಹೇಳಿದರು. 

ಅಪರಾಧ ಮತ್ತು ಅಪರಾಧಿಗಳೊಂದಿಗೆ ರಾಜಿ ಇಲ್ಲದೆ ಕರ್ತವ್ಯ ನಿರ್ವಹಿಸಿ ಎಂದು ಪೊಲೀಸರಿಗೆ ಕರೆ ನೀಡಿದ ಅವರು, ಪೊಲೀಸರು ಯಾವುದೇ ಮುಲಾಜಿಲ್ಲದೆ ಕೆಲಸ ಮಾಡಿದರೆ ಅಪರಾಧಗಳು ತನ್ನಿಂದ ತಾನೇ ಕಡಿಮೆಯಾಗುತ್ತದೆ. ಅಲ್ಲದೆ, ಪೊಲೀಸರು ನಿಷ್ಠೆ ಮತ್ತು ದಕ್ಷತೆಯಿಂದ ಕೆಲಸ ಮಾಡಿದರೆ ಪ್ರಗತಿಪರ ಸಮಾಜ ನಿರ್ಮಾಣದ ಜತೆಗೆ ಮಹಿಳೆಯರಿಗೂ ಸುರಕ್ಷಿತ ವಾತಾವರಣ ದೊರೆಯಲಿದೆ ಎಂದು ತಿಳಿಸಿದರು. 

ಶಿಸ್ತು, ದಕ್ಷತೆ, ನಿಷ್ಠೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕರ್ನಾಟಕ ಪೊಲೀಸ್ ಉನ್ನತ ಸ್ಥಾನದಲ್ಲಿದೆ. ಚುನಾವಣಾ ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಪೊಲೀಸ್ ತುಕಡಿ ಕರೆಸುವಾಗ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಮಾಜದ ಸ್ವಾಸ್ಥ್ಯ ಮತ್ತು ಶಾಂತಿ ಕಾಪಾಡಲು ಪೊಲೀಸರಿಗೆ ಅಂತಃಕರಣ ಬಹಳ ಮುಖ್ಯ, ಪೊಲೀಸರು ನ್ಯಾಯ ನಿಷ್ಠೂರವಾಗಿ ಕೆಲಸ ಮಾಡಬೇಕು ಎಂದು ಹೇಳಿದರು. 

ಅಪರಾಧಿಗಳ ಶೋಧನೆಯಲ್ಲಿ ಫೋರೆನ್ಸಿಕ್ ಪ್ರಯೋಗಾಲಯ ಮಹತ್ವದ ಪಾತ್ರ ವಹಿಸುತ್ತದೆ. ನ್ಯಾಯಾಲಯಗಳು ಫೋರೆನ್ಸಿಕ್ ವರದಿಗೆ ಮಹತ್ವ ನೀಡುತ್ತದೆ. ಹೀಗಾಗಿ, ಬೆಂಗಳೂರಿನಲ್ಲಿ ನ್ಯಾರ್ಕೊಟಿಕ್ಸ್ ಸೈಬರ್ ಹಾಗೂ ಫೋರೆನ್ಸಿಕ್ ಲ್ಯಾಬ್‍ವುಳ್ಳ ಠಾಣೆಗಳನ್ನು ತೆರೆಯಲಾಗಿದೆ. ಹುಬ್ಬಳ್ಳಿ, ಬಳ್ಳಾರಿಗಳಲ್ಲಿಯೂ ಫೋರೆನ್ಸಿಕ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿವಮೊಗ್ಗ ಸೇರಿದಂತೆ ಇನ್ನಿತರ ಕಡೆಯೂ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಮೇಲ್ದೆರ್ಜೆಗೇರಿಸಲು ಅವರು ಸೂಚನೆ ನೀಡಿದರು. ರಾಜ್ಯದ ಇಂಟಲಿಜೆನ್ಸ್‍ನ್ನು ಮತ್ತಷ್ಟು ಸದೃಢಗೊಳಿಸಲು ಕ್ರಮವಹಿಸಲಾಗಿದೆ ಎಂದರು. 

ಪೊಲೀಸ್ ಆಧುನೀಕರಣಕ್ಕೆ ಕೇಂದ್ರ ಸರಕಾರ ನೀಡುವ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗಿದೆ. ಸೈಬರ್ ಮತ್ತು ನ್ಯಾರ್ಕೊಟಿಕ್ಸ್ ತಡೆಯಲು ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಇಲಾಖೆಯನ್ನು ಆಧುನೀಕರಣ ಮಾಡುವ ಅಗತ್ಯವಿದ್ದು, ಇದಕ್ಕಾಗಿ ಸಿಬ್ಬಂದಿಗಳ ತರಬೇತಿ ಮತ್ತು ಆಧುನಿಕ ತಂತ್ರಜ್ಞಾನ ಬಳಕೆಗೂ ಒತ್ತು ನೀಡಲಾಗಿದೆ ಎಂದು ಹೇಳಿದರು. 

ಮಾದಕವಸ್ತು ಮಾರಾಟದ ವಿರುದ್ಧವೂ ಸಮರ ಸಾರಿ ದೊಡ್ಡ ಪ್ರಮಾಣದಲ್ಲಿ ಮಾದಕವಸ್ತುಗಳನ್ನುವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ವಿರುದ್ಧದ ಸಮರ ನಿರಂತರವಾಗಿ ನಡೆಯಬೇಕು. ಶಾಲಾ-ಕಾಲೇಜು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಬೇಕು. ಸೈಬರ್ ಅಪರಾಧವನ್ನು ಕಂಡು ಹಿಡಿಯಲು ಪೊಲೀಸರಿಗೆ ವಿಶೇಷ ತರಬೇತಿಯನ್ನೂ ನೀಡಲಾಗುತ್ತಿದೆ ಎಂದು ಅವರು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X