Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಂಸದಂಗಡಿಗಳನ್ನು ಮುಚ್ಚಲು ದಕ್ಷಿಣ...

ಮಾಂಸದಂಗಡಿಗಳನ್ನು ಮುಚ್ಚಲು ದಕ್ಷಿಣ ದಿಲ್ಲಿ ಮೇಯರ್ ಸೂಚನೆ: "ಅಧಿಕೃತ ಆದೇಶವೆಲ್ಲಿ?" ಎಂದು ಕೇಳುತ್ತಿರುವ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ5 April 2022 1:45 PM IST
share
ಮಾಂಸದಂಗಡಿಗಳನ್ನು ಮುಚ್ಚಲು ದಕ್ಷಿಣ ದಿಲ್ಲಿ ಮೇಯರ್ ಸೂಚನೆ: ಅಧಿಕೃತ ಆದೇಶವೆಲ್ಲಿ? ಎಂದು ಕೇಳುತ್ತಿರುವ ಅಧಿಕಾರಿಗಳು

 ಹೊಸದಿಲ್ಲಿ: ಎಪ್ರಿಲ್ 5, ಮಂಗಳವಾರದಿಂದ ಆರಂಭಿಸಿ ಎಪ್ರಿಲ್ 11ರ ತನಕ- ಅಂದರೆ ಹಿಂದುಗಳ ಹಬ್ಬವಾದ ನವರಾತ್ರಿ ಮುಗಿಯುವ ತನಕ  ಮಾಂಸದಂಗಡಿಗಳನ್ನು ತೆರೆಯಲು ಅನುಮತಿಸಲಾಗುವುದಿಲ್ಲ ಎಂದು ದಕ್ಷಿಣ ದಿಲ್ಲಿ ಮುನಿಸಿಪಲ್ ಕಾರ್ಪೊರೇಷನ್ ಮೇಯರ್ ಮುಕೇಶ್ ಸೂರ್ಯನ್  ಹೇಳಿದ್ದಾರೆ. ಆದರೆ ಈ ಕುರಿತು ಅವರು ಯಾವುದೇ ಆದೇಶವನ್ನು ನೀಡದೇ ಇರುವುದನ್ನು ಇತರ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

ಮಾಂಸದಂಗಡಿಗಳು ತೆರೆಯದಂತೆ ನೋಡಿಕೊಳ್ಳಬೇಕೆಂದು ಸೂರ್ಯನ್ ಅವರು ಮುನಿಸಿಪಲ್ ಆಯುಕ್ತರಿಗೆ ಸೂಚಿಸಿದ್ದಾರಾದರೂ ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ನೀಡಬೇಕಿದೆ. ನವರಾತ್ರಿ ಸಂದರ್ಭ ತನ್ನ ವ್ಯಾಪ್ತಿ ಪ್ರದೇಶದಲ್ಲಿ ಮಾಂಸದಂಗಡಿಗಳನ್ನು ಮುಚ್ಚಬೇಕೆಂದು ಸ್ಥಳೀಯಾಡಳಿತ ಹೇಳಿರುವುದು ಇದೇ ಮೊದಲ ಬಾರಿಯಾಗಿದೆ. ಮುನಿಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ 1500 ಮಾಂಸದಂಗಡಿಗಳಿವೆ.

ಅಧಿಕೃತ ಆದೇಶ ಶೀಘ್ರ ನೀಡಲಾಗುವುದೆಂದು ಮೇಯರ್ ಹೇಳಿದ್ದಾರೆ. ಆದರೆ ಇಂತಹ ಒಂದು ಸೂಚನೆಗೆ ಆಯುಕ್ತರ ಅಂಗೀಕಾರ ಹೊಂದಿದ ಆದೇಶ ಇರಬೇಕೆಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಇಂತಹ ಆದೇಶ ನೀಡುವ ಕುರಿತು ಯಾವುದೇ ನಿರ್ದಿಷ್ಟ ನೀತಿಗಳಿಲ್ಲದೇ ಇರುವುದರಿಂದ ಇಂತಹ ಸೂಚನೆಗಳನ್ನು ತಕ್ಷಣ ಜಾರಿಗೊಳಿಸುವಂತಿಲ್ಲ, ಮೇಲಾಗಿ ಇಂತಹ ಆದೇಶ ಜಾರಿಗೊಳಿಸಿದ್ದೇ ಆದಲ್ಲಿ ಕೆಳ ಹಂತದ ಅಧಿಕಾರಿಗಳಿಂದ ವರ್ತಕರಿಗೆ ಕಿರುಕುಳವಾಗುವ ಸಾಧ್ಯತೆಯೂ ಇದೆ ಎಂದು ಕೆಲ ಅಧಿಕಾರಿಗಳು ತಿಳಿಸಿದ್ದಾರೆ.

ಮೇಯರ್ ಸೂರ್ಯನ್ ಅವರು ಎಸ್‍ಡಿಎಂಸಿ ಆಯುಕ್ತ ಗ್ಯಾನೇಶ್ ಭಾರತಿ ಅವರಿಗೆ ಎಪ್ರಿಲ್ 2ರಂದು ಬರೆದ ಪತ್ರದಲ್ಲಿ "ನವರಾತ್ರಿಯ ಸಂದರ್ಭ ಭಕ್ತರು ದುರ್ಗಾಮಾತೆಗೆ ಪ್ರಾರ್ಥನೆ ಸಲ್ಲಿಸಲು ತೆರಳುವಾಗ ಹಾದಿಯಲ್ಲಿ ಮಾಂಸದಂಗಡಿಗಳಿಂದ ಮಾಂಸದ ಕೆಟ್ಟ ವಾಸನೆ ಎದುರಿಸಬೇಕಾಗಿದೆ ಇದರಿಂದ ಭಕ್ತರ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುತ್ತದೆ" ಎಂದು ವಿವರಿಸಿದ್ದಾರೆ.

"ನವರಾತ್ರಿಯ ಒಂಬತ್ತು ದಿನ ಭಕ್ತರು ಶುದ್ಧ ಸಸ್ಯಾಹಾರಿಗಳಾಗಿರುತ್ತಾರೆ ಹಾಗೂ ಈರುಳ್ಳಿ ಮತ್ತು ಬೆಳ್ಳುಳ್ಳಿ ಸಹ ಸೇವಿಸುವುದಿಲ್ಲ ಹೀಗಿರುವಾಗ ದೇವಸ್ಥಾನಗಳ ಸಮೀಪ ಅಥವಾ ಇತರ ಸ್ಥಳಗಳಲ್ಲಿ ಮಾಂಸ ಮಾರಾಟ ಅವರಿಗೆ ಅನಾನುಕೂಲವಾಗಬಹುದು" ಎಂದು ಪತ್ರದಲ್ಲಿ ಮೇಯರ್ ಬರೆದಿದ್ದಾರೆ.

ದಿಲ್ಲಿಯ ಶೇ 99ರಷ್ಟು ಕುಟುಂಬಗಳು ನವರಾತ್ರಿ ಸಂದರ್ಭ ಈರುಳ್ಳಿ ಮತ್ತು ಬೆಳ್ಳುಳ್ಳಿ ಸಹ ಸೇವಿಸುವುದಿಲ್ಲ ಎಂದು ಮೇಯರ್ ಹೇಳಿದ್ದಾರೆಂದು ಎಎನ್‍ಐ ವರದಿ ಮಾಡಿದೆ. ಹೀಗಿದ್ದರೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಏಕೆ ನಿಷೇಧಿಸಿಲ್ಲ ಎಂದು ಹಲವು ಸಾಮಾಜಿಕ ಜಾಲತಾಣಿಗರು ಪ್ರಶ್ನಿಸಿದ್ದಾರೆ. ನವರಾತ್ರಿ ಸಂದರ್ಭ ಮದ್ಯ ಮಾರಾಟ ಕೂಡ ನಿಷೇಧಿಸಲು ಮುಖ್ಯಮಂತ್ರಿಯನ್ನು ಕೋರುವುದಾಗಿಯೂ ಅವರು ಹೇಳಿದ್ದಾರೆ.

ಎಪ್ರಿಲ್ 1ರಂದು ಗಾಝಿಯಾಬಾದ್ ಮುನಿಸಿಪಲ್ ಕಾರ್ಪೊರೇಷನ್ ಕೂಡ ಇಂತಹುದೇ ಆದೇಶ ಹೊರಡಿಸಿತ್ತಾದರೂ ಮೇಯರ್ ಆಶಾ ಶರ್ಮ ಎಪ್ರಿಲ್ 2ರಂದು ಪ್ರತಿಕ್ರಿಯಿಸಿ ಪರವಾನಗಿ ಹೊಂದಿದ ಮಾಂಸದಂಗಡಿಗಳು ನಿಯಮಾನುಸಾರ ಕಾರ್ಯನಿರ್ವಹಿಸಬಹುದು ಎಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X