Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮೂಹ ವಿನಾಶದ ಶಸ್ತ್ರಾಸ್ತ್ರಗಳಿಗೆ...

ಸಮೂಹ ವಿನಾಶದ ಶಸ್ತ್ರಾಸ್ತ್ರಗಳಿಗೆ ಹಣಕಾಸು ಪೂರೈಕೆ ನಿಷೇಧಿಸುವ ಮಸೂದೆ ಲೋಕಸಭೆಯಲ್ಲಿ ಮಂಡನೆ

ವಾರ್ತಾಭಾರತಿವಾರ್ತಾಭಾರತಿ5 April 2022 8:34 PM IST
share
ಸಮೂಹ ವಿನಾಶದ ಶಸ್ತ್ರಾಸ್ತ್ರಗಳಿಗೆ ಹಣಕಾಸು ಪೂರೈಕೆ ನಿಷೇಧಿಸುವ ಮಸೂದೆ ಲೋಕಸಭೆಯಲ್ಲಿ ಮಂಡನೆ

ಹೊಸದಿಲ್ಲಿ,ಎ.5: ಸಮೂಹ ವಿನಾಶದ ಶಸ್ತ್ರಾಸ್ತ್ರಗಳಿಗೆ ಹಣಕಾಸು ಪೂರೈಕೆಯನ್ನು ನಿಷೇಧಿಸುವ ಮತ್ತು ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ಹಣಕಾಸು ಆಸ್ತಿಗಳು ಮತ್ತು ಆರ್ಥಿಕ ಸಂಪನ್ಮೂಲಗಳನ್ನು ಸ್ತಂಭನಗೊಳಿಸಲು,ವಶಪಡಿಸಿಕೊಳ್ಳಲು ಅಥವಾ ಜಪ್ತಿ ಮಾಡಲು ಕೇಂದ್ರಕ್ಕೆ ಅಧಿಕಾರವನ್ನು ನೀಡುವ ಮಸೂದೆಯನ್ನು ಸರಕಾರವು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಮಂಡಿಸಿದ ಸಮೂಹ ವಿನಾಶದ ಶಸ್ತ್ರಾಸ್ತ್ರಗಳು ಮತ್ತು ಅವುಗಳ ವಿತರಣೆ ವ್ಯವಸ್ಥೆಗಳ (ಕಾನೂನು ಬಾಹಿರ ಚಟುವಟಿಕೆಗಳ ನಿಷೇಧ) ತಿದ್ದುಪಡಿ ಮಸೂದೆ,2022 ಈ ಸಂಬಂಧ ಭಾರತದ ಅಂತರರಾಷ್ಟ್ರೀಯ ಬದ್ಧತೆಗಳನ್ನು ಪೂರೈಸಲೂ ಉದ್ದೇಶಿಸಿದೆ. ಪದೇ ಪದೇ ಇಂಧನ ಬೆಲೆಗಳನ್ನು ಹೆಚ್ಚಿಸುತ್ತಿರುವ ಕುರಿತು ಸದನದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಜೈಶಂಕರ್ ಮಸೂದೆಯನ್ನು ಮಂಡಿಸಿದರು.
2005ರಲ್ಲಿ ಅಂಗೀಕಾರಗೊಂಡಿದ್ದ ಸಮೂಹ ವಿನಾಶದ ಶಸ್ತ್ರಾಸ್ತ್ರಗಳು ಮತ್ತು ಅವುಗಳ ವಿತರಣೆ ವ್ಯವಸ್ಥೆಗಳ (ಕಾನೂನು ಬಾಹಿರ ಚಟುವಟಿಕೆಗಳ ನಿಷೇಧ) ಕಾಯ್ದೆಯು ಸಮೂಹ ವಿನಾಶದ ಶಸ್ತ್ರಾಸ್ತ್ರಗಳ ತಯಾರಿಕೆಯನ್ನು ಮಾತ್ರ ನಿಷೇಧಿಸಿತ್ತು.


ಇತ್ತೀಚಿನ ದಿನಗಳಲ್ಲಿ ಸಮೂಹ ವಿನಾಶದ ಶಸ್ತ್ರಾಸ್ತ್ರಗಳ ಪ್ರಸರಣ ಮತ್ತು ಅಂತರರಾಷ್ಟ್ರೀಯ ಸಂಘಟನೆಗಳಿಂದ ಅವುಗಳ ವಿತರಣೆ ವ್ಯವಸ್ಥೆಗಳಿಗೆ ಸಂಬಂಧಿಸಿದ ನಿಯಮಗಳು ವಿಸ್ತರಿಸಲ್ಪಟ್ಟಿವೆ ಎಂದು ಜೈಶಂಕರ್ ಮಸೂದೆಯ ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆಯಲ್ಲಿ ತಿಳಿಸಿದರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ದೇಶಿತ ಹಣಕಾಸು ನಿರ್ಬಂಧಗಳು ಮತ್ತು ಹಣಕಾಸು ಕ್ರಿಯಾ ಕಾರ್ಯಪಡೆಯ ಶಿಫಾರಸುಗಳು ಸಮೂಹ ವಿನಾಶದ ಶಸ್ತ್ರಾಸ್ತ್ರಗಳ ಪ್ರಸರಣಕ್ಕೆ ಹಣಕಾಸು ಪೂರೈಕೆ ಮತ್ತು ಅವುಗಳ ವಿತರಣೆ ವ್ಯವಸ್ಥೆಗಳ ವಿರುದ್ಧ ಆದೇಶಿಸಿವೆ. ಈ ಹಿನ್ನೆಲೆಯಲ್ಲಿ ನಮ್ಮ ಅಂತರರಾಷ್ಟ್ರೀಯ ಜವಾಬ್ದಾರಿಗಳನ್ನು ಈಡೇರಿಸಲು ಸಮೂಹ ವಿನಾಶದ ಶಸ್ತ್ರಾಸ್ತ್ರಗಳ ಪ್ರಸರಣಕ್ಕೆ ಹಣಕಾಸು ಪೂರೈಕೆ ಮತ್ತು ಅವುಗಳ ವಿತರಣೆ ವ್ಯವಸ್ಥೆಗಳ ವಿರುದ್ಧ ಸದ್ರಿ ಕಾಯ್ದೆಗೆ ತಿದ್ದುಪಡಿಯನ್ನು ತರುವ ಅಗತ್ಯವಿದೆ ಎಂದು ಜೈಶಂಕರ್ ಹೇಳಿದರು.

ಮಸೂದೆಯು ಹಾಲಿ ಕಾನೂನಿನಲ್ಲಿ ಹೊಸದಾಗಿ ಕಲಂ 12ಎ ಅನ್ನು ಸೇರಿಸಲು ಉದ್ದೇಶಿಸಿದೆ. ಯಾವುದೇ ವ್ಯಕ್ತಿಯು ಈ ಕಾಯ್ದೆಯಡಿ ಅಥವಾ ವಿಶ್ವಸಂಸ್ಥೆ (ಭದ್ರತಾ ಮಂಡಳಿ) ಕಾಯ್ದೆ,1947ರಡಿ ಅಥವಾ ಸದ್ಯ ಜಾರಿಯಲ್ಲಿರುವ ಯಾವುದೇ ಇತರ ಸಂಬಂಧಿತ ಕಾಯ್ದೆಯಡಿ ಅಥವಾ ಇಂತಹ ಯಾವುದೇ ಕಾಯ್ದೆಯಡಿ ಹೊರಡಿಸಿರುವ ಆದೇಶದಿಂದ ನಿಷೇಧಿಸಲಾಗಿರುವ ಸಮೂಹ ವಿನಾಶದ ಶಸ್ತ್ರಾಸ್ತ್ರಗಳು ಮತ್ತು ಅವುಗಳ ವಿತರಣೆ ವ್ಯವಸ್ಥೆಗಳಿಗೆ ಸಂಬಂಧಿಸಿದ ಯಾವುದೇ ಚಟುವಟಿಕೆಗೆ ಹಣಕಾಸು ನೆರವನ್ನು ಒದಗಿಸುವಂತಿಲ್ಲ ಎಂದು ನೂತನ ಕಲಮ್ನಲ್ಲಿ ಹೇಳಲಾಗಿದೆ.

ಇಂತಹ ವ್ಯಕ್ತಿಯ ಸಂಪೂರ್ಣ ಅಥವಾ ಜಂಟಿ,ನೇರ ಅಥವಾ ಪರೋಕ್ಷ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ,ಇಂತಹ ವ್ಯಕ್ತಿಯ ಪರವಾಗಿ ಅಥವಾ ಇಂತಹ ವ್ಯಕ್ತಿಯ ನಿರ್ದೇಶದ ಮೇರೆಗೆ ಹೊಂದಲಾಗಿರುವ ಅಥವಾ ಇಂತಹ ವ್ಯಕ್ತಿಯ ನೇರ ಅಥವಾ ಪರೋಕ್ಷ ಒಡೆತನ ಅಥವಾ ನಿಯಂತ್ರಣದಲ್ಲಿರುವ ನಿಧಿಗಳು ಅಥವಾ ಇತರ ಆಸ್ತಿಗಳ ಮೂಲಕ ಹೊಂದಲಾದ ಅಥವಾ ಸೃಷ್ಟಿಯಾದ ಹಣಕಾಸುಗಳು ಅಥವಾ ಇತರ ಹಣಕಾಸು ಆಸ್ತಿಗಳು ಅಥವಾ ಆರ್ಥಿಕ ಸಂಪನ್ಮೂಲಗಳನ್ನು ಸ್ತಂಭನಗೊಳಿಸುವ,ವಶಪಡಿಸಿಕೊಳ್ಳುವ ಅಥವಾ ಜಪ್ತಿ ಮಾಡುವ ಅಧಿಕಾರವನ್ನು ಸರಕಾರಕ್ಕೆ ನೀಡಲೂ ಈ ನೂತನ ಕಲಂ ಉದ್ದೇಶಿಸಿದೆ. ಈ ಕಾಯ್ದೆಯಡಿ ನಿಷೇಧಿತ ಯಾವುದೇ ಚಟುವಟಿಕೆಯೊಂದಿಗೆ ಸಂಬಂಧಿತ ವ್ಯಕ್ತಿಗಳ ಲಾಭಕ್ಕಾಗಿ ಹಣಕಾಸು,ಹಣಕಾಸು ಆಸ್ತಿಗಳು ಅಥವಾ ಆರ್ಥಿಕ ಸಂಪನ್ಮೂಲಗಳು ಅಥವಾ ಸಂಬಂಧಿತ ಸೇವೆಗಳನ್ನು ಲಭ್ಯಗೊಳಿಸುವುದರಿಂದ ಯಾವುದೇ ವ್ಯಕ್ತಿಯನ್ನು ನಿಷೇಧಿಸಲೂ ತಿದ್ದುಪಡಿಯು ಉದ್ದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X