Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 3 ತಿಂಗಳಲ್ಲಿ ಚುನಾವಣೆ ಸಾಧ್ಯವಿಲ್ಲ:...

3 ತಿಂಗಳಲ್ಲಿ ಚುನಾವಣೆ ಸಾಧ್ಯವಿಲ್ಲ: ಪಾಕ್ ಚುನಾವಣಾ ಆಯೋಗದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ5 April 2022 11:04 PM IST
share
3 ತಿಂಗಳಲ್ಲಿ ಚುನಾವಣೆ ಸಾಧ್ಯವಿಲ್ಲ: ಪಾಕ್ ಚುನಾವಣಾ ಆಯೋಗದ ಹೇಳಿಕೆ

ಇಸ್ಲಮಾಬಾದ್, ಎ.5: ಸಂವಿಧಾನಾತ್ಮಕ, ಕಾನೂನು ಮತ್ತು ವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳ ಹಿನ್ನೆಲೆಯಲ್ಲಿ ದೇಶದಲ್ಲಿ 3 ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಸಲು ಸಾಧ್ಯವಾಗದು ಎಂದು ಪಾಕಿಸ್ತಾನದ ಚುನಾವಣಾ ಆಯೋಗ ಮಂಗಳವಾರ ಹೇಳಿದೆ. 3 ತಿಂಗಳೊಳಗೆ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ರವಿವಾರ ಶಿಫಾರಸು ಮಾಡುವ ಮೂಲಕ ಪ್ರಧಾನಿ ಇಮ್ರಾನ್ ಖಾನ್ ತನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ವಿರೋಧ ಪಕ್ಷಗಳನ್ನು ದಿಗ್ಭ್ರಮೆಗೊಳಿಸಿದ್ದರು.

ಚುನಾವಣಾ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಲಾಗಿದ್ದು ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆದ್ದರಿಂದ ಜಿಲ್ಲಾವಾರು, ಕ್ಷೇತ್ರವಾರು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವುದು ಪ್ರಮುಖ ಸವಾಲಾಗಿದೆ. ಸಾರ್ವತ್ರಿಕ ಚುನಾವಣೆಯ ಸಿದ್ಧತೆಗೆ ಕನಿಷ್ಟ 6 ತಿಂಗಳ ಸಮಯದ ಅಗತ್ಯವಿದೆ ಎಂದು ಚುನಾವಣಾ ಆಯೋಗದ ಉನ್ನತ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಪಾಕಿಸ್ತಾನದ ಡಾನ್ ದಿನಪತ್ರಿಕೆ ವರದಿ ಮಾಡಿದೆ. ನೂತನ ಕ್ಷೇತ್ರಗಳ ಗಡಿ ನಿರ್ಣಯ ಪ್ರಕ್ರಿಯೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಆಕ್ಷೇಪಣೆ ಸಲ್ಲಿಕೆಗೇ ಒಂದು ತಿಂಗಳ ಅವಕಾಶ ನೀಡಲಾಗುತ್ತದೆ. ಚುನಾವಣೆಯ ಸಾಮಾಗ್ರಿಗಳ ಪೂರೈಕೆ, ಮತಪತ್ರಗಳ ವ್ಯವಸ್ಥೆ, ಮತದಾನ ಕೇಂದ್ರದ ಸಿಬಂದಿಗಳ ನೇಮಕ ಮತ್ತು ತರಬೇತಿಯೂ ಸವಾಲಿನ ಕಾರ್ಯವಾಗಿದೆ.

ಕಾನೂನಿನ ಪ್ರಕಾರ, ವಾಟರ್ಮಾರ್ಕ್ ಇರುವ ಮತಪತ್ರಗಳನ್ನೇ ಬಳಸಬೇಕು ಮತ್ತು ಅವು ದೇಶದಲ್ಲಿ ಲಭ್ಯವಿರದ ಕಾರಣ ಆಮದು ಮಾಡಿಕೊಳ್ಳಬೇಕು. ಬಿಡ್ ಆಹ್ವಾನ, ಕೊಟೇಷನ್ಗಳ ಆರ್ಥಿಕ ಮತ್ತು ತಾಂತ್ರಿಕ ಅಂಶಗಳ ಪರಿಶೀಲನೆಗೂ ಸಮಯ ಹಿಡಿಯುತ್ತದೆ. ಸುಮಾರು 1 ಲಕ್ಷ ಮತದಾನ ಕೇಂದ್ರಗಳಿಗೆ 2 ಮಿಲಿಯನ್ ಸ್ಟ್ಯಾಂಪ್ ಪ್ಯಾಡ್ಗಳ ಅಗತ್ಯವಿದೆ. ಇನ್ನು ಕಾನೂನಿನ ಅಂಶದ ಪ್ರಕಾರ, ಚುನಾವಣೆಗೆ 4 ತಿಂಗಳ ಮೊದಲು ಆಯೋಗ ಚುನಾವಣೆಯ ಯೋಜನೆಯನ್ನು ಘೋಷಿಸಲು ಸಿದ್ಧವಾಗಿರಬೇಕು ಎಂದು ಚುನಾವಣಾ ಕಾಯ್ದೆಯ ಸೆಕ್ಷನ್ 14ರಲ್ಲಿ ಸೂಚಿಸಲಾಗಿದೆ. ಇವಿಎಂ(ವಿದ್ಯುನ್ಮಾನ ಮತಯಂತ್ರ) ಬಳಕೆಗೆ ಕೋರಿಕೆ ಮತ್ತು ಸಾಗರೋತ್ತರ ಪಾಕಿಸ್ತಾನೀಯರಿಗೆ ಮತದಾನದ ಹಕ್ಕು ನೀಡುವ ಕಾನೂನಿನ ಬಗ್ಗೆಯೂ ಗಮನಹರಿಸುವ ಅಗತ್ಯವಿದೆ ಎಂದವರು ಹೇಳಿದ್ದಾರೆ.

ಸಂಸತ್ತು ವಿಸರ್ಜನೆ ಪ್ರಶ್ನಿಸಿದ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ

ಸಂಸತ್ತನ್ನು ವಿಸರ್ಜಿಸಿ ಅವಧಿಪೂರ್ಣ ಚುನಾವಣೆ ನಡೆಸುವ ಅಧಿಕಾರ ಪ್ರಧಾನಿ ಇಮ್ರಾನ್ ಖಾನ್ ಗೆ ಇದೆಯೇ ಎಂದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಪಾಕಿಸ್ತಾನದ ಸುಪ್ರೀಂಕೋರ್ಟ್ ಮತ್ತೆ ಮುಂದೂಡಿದೆ. ಇಮ್ರಾನ್ಖಾನ್ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಮತದಾನ ನಡೆಯುವ ಮೊದಲೇ ಕಳೆದ ರವಿವಾರ ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯ ಉಪಸ್ಪೀಕರ್ ಸಂಸತ್ತನ್ನು ವಿಸರ್ಜಿಸುವ ಘೋಷಣೆ ಮಾಡಿದ್ದರು. ಆದರೆ ಬಹುಮತ ಕಳೆದುಕೊಂಡಿರುವ ಇಮ್ರಾನ್ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ರದ್ದುಗೊಳಿಸಲು ಉಪಸ್ಪೀಕರ್ಗೆ ಅಧಿಕಾರವಿಲ್ಲ ಎಂದು ವಾದಿಸಿರುವ ಪ್ರತಿಪಕ್ಷಗಳು ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿವೆ. ಇದೀಗ ಇಮ್ರಾನ್ ಖಾನ್-ಪ್ರತಿಪಕ್ಷಗಳ ನಡುವಿನ ಈ ರಾಜಕೀಯ ಸೆಣಸಾಟವು ದೇಶದಲ್ಲಿ ಮತ್ತೊಂದು ಸಾಂವಿಧಾನಿಕ ಬಿಕ್ಕಟ್ಟಿನ ಪರಿಸ್ಥಿತಿಗೆ ಕಾರಣವಾಗಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X