Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಲಿ: 300 ನಾಗರಿಕರ ಸಾಮೂಹಿಕ ಹತ್ಯೆಗೆ...

ಮಾಲಿ: 300 ನಾಗರಿಕರ ಸಾಮೂಹಿಕ ಹತ್ಯೆಗೆ ಎಚ್ಆರ್ಡಬ್ಲ್ಯೂ ಖಂಡನೆ

ವಾರ್ತಾಭಾರತಿವಾರ್ತಾಭಾರತಿ5 April 2022 11:07 PM IST
share

ನ್ಯೂಯಾರ್ಕ್, ಎ.5: ಮಾಲಿ ದೇಶದ ಸೇನೆ ಮತ್ತು ವಿದೇಶದ ಯೋಧರು ಮಾಲಿಯ ಮೌರಾ ನಗರದಲ್ಲಿ ನಡೆಸಿದ ಸೇನಾ ಕಾರ್ಯಾಚರಣೆಯಲ್ಲಿ ಸುಮಾರು 300 ನಾಗರಿಕರ ಸಾಮೂಹಿಕ ಹತ್ಯೆ ಪ್ರಕರಣವನ್ನು ಅಂತರಾಷ್ಟ್ರೀಯ ಮಾನವ ಹಕ್ಕುಗಳ ನಿಗಾ ಸಮಿತಿ(ಎಚ್ಆರ್ಡಬ್ಲ್ಯೂ) ಖಂಡಿಸಿದೆ.

ಮಾಲಿಯಲ್ಲಿ ದಶಕಗಳಿಂದಲೂ ನಡೆಯುತ್ತಿರುವ ಸಂಘರ್ಷದಲ್ಲಿ ವರದಿಯಾದ ಅತ್ಯಂತ ಘೋರ ದೌರ್ಜನ್ಯ ಇದಾಗಿದ್ದು, ಮಾರ್ಚ್ 27ರಿಂದ ಮೌರಾ ನಗರದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಸಶಸ್ತ್ರ ಬಂಡುಗೋರ ಸಂಘಟನೆಯ ಶಂಕಿತ ಸದಸ್ಯರು ಸೇರಿದಂತೆ 300 ನಾಗರಿಕರ ಸಾಮೂಹಿಕ ಹತ್ಯೆಯಾಗಿದೆ ಎಂದು ಎಚ್ಆರ್ಡಬ್ಲ್ಯೂ ಹೇಳಿದೆ. ‘ಆರ್ಮ್ಡ್ ಇಸ್ಲಾಮಿಸ್ಟ್ ಗ್ರೂಫ್’  (ಜಿಐಎ)ನ ಕೃತ್ಯಗಳಿಗೆ ಪ್ರತಿಕ್ರಿಯೆ ಎಂಬ ಕಾರಣ ನೀಡಿ ಜನರನ್ನು ಕಸ್ಟಡಿಯಲ್ಲಿ ಉದ್ದೇಶಪೂರ್ವಕ ಹತ್ಯೆ ನಡೆಸಿರುವ ಸೇನೆಯ ಕ್ರಮ ಸಮರ್ಥನೀಯವಲ್ಲ . ಈ ದೌರ್ಜನ್ಯವನ್ನು ಮಾಲಿಯ ಸೇನೆ ಅಥವಾ ಸೇನೆಗೆ ಬೆಂಬಲ ನೀಡುತ್ತಿರುವ ವಿದೇಶದ ಯೋಧರು ನಡೆಸಿರಲಿ, ಇದಕ್ಕೆ ಮಾಲಿಯ ಸರಕಾರ ಹೊಣೆಯಾಗಿದೆ ಎಂದು ಎಚ್ಆರ್ಡಬ್ಲ್ಯೂನ ಸಹೇಲ್ ವಿಭಾಗದ ನಿರ್ದೇಶಕಿ ಕೊರಿನೆ ಡುಫ್ಕಾ ಹೇಳಿದ್ದಾರೆ.

ಮಾರ್ಚ್ 23ರಿಂದ ಎಪ್ರಿಲ್ 3ರವರೆಗೆ ಮೌರಾ ನಗರದಲ್ಲಿ ಸೇನೆ ಮತ್ತು ವಾಯುಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 203 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಮಾಲಿಯ ರಕ್ಷಣಾ ಸಚಿವರು ಹೇಳಿಕೆ ನೀಡಿದ್ದರು. ಮೃತರಲ್ಲಿ ಸಮುದಾಯ ಮುಖಂಡರು, ರಾಜತಾಂತ್ರಿಕರು, ಭದ್ರತಾ ವಿಶ್ಲೇಷಕರು, ಪ್ರತ್ಯಕ್ಷದರ್ಶಿಗಳು ಸೇರಿದ್ದಾರೆ ಎಂದು ಮಾನವ ಹಕ್ಕು ನಿಗಾ ಸಮಿತಿ ಹೇಳಿದೆ. ಮಾಲಿ ಸೇನೆ ಮತ್ತು ಬಿಳಿ ವರ್ಣೀಯರಾದ ಫ್ರೆಂಚ್ ಮಾತನಾಡದ ಯೋಧರು ಸಾಮೂಹಿಕ ಹತ್ಯೆ ನಡೆಸಿದ್ದಾರೆ. ಸೆರೆಸಿಕ್ಕವರನ್ನು 10 ಮಂದಿಯ ಒಂದು ತಂಡವನ್ನಾಗಿ ವಿಭಾಜಿಸಿ, ಅವರನ್ನು ಸುಮಾರು 1 ಕಿಮೀ ದೂರದಿಂದ ನಡೆದುಕೊಂಡು ಬರುವಂತೆ ಆದೇಶಿಸಲಾಗಿದೆ. ಹೀಗೆ ಬರುತ್ತಿದ್ದವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಎಚ್ಆರ್ಡಬ್ಲ್ಯೂ ವರದಿ ಮಾಡಿದೆ. ಜಿನೆವಾ ಒಪ್ಪಂದದ 3ನೇ ಪರಿಚ್ಛೇದದ ಪ್ರಕಾರ, ಯುದ್ಧದ ಸಂದರ್ಭ ಸೆರೆಸಿಕ್ಕ ಯೋಧರು ಅಥವಾ ನಾಗರಿಕರ ಸಾಮೂಹಿಕ ಹತ್ಯೆ ಅಂತರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X