Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಹಿಳಾ...

ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಹಿಳಾ ಕ್ರಿಯಾಶೀಲತೆಯ ದರ್ಶನ: ಡಾ.ಅಶ್ವತ್ಥ ನಾರಾಯಣ

ಎ.8ರಿಂದ 18ರ ವರೆಗೆ ರಾಷ್ಟ್ರೀಯ ‘ಸಂಜೀವಿನಿ ಸರಸ್' ಮೇಳ

ವಾರ್ತಾಭಾರತಿವಾರ್ತಾಭಾರತಿ6 April 2022 6:23 PM IST
share
ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಹಿಳಾ ಕ್ರಿಯಾಶೀಲತೆಯ ದರ್ಶನ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಎ. 6: ‘ಮಹಿಳೆಯರ ಆರ್ಥಿಕ ಸಬಲೀಕರಣದ ಆಶಯವನ್ನುಳ್ಳ ರಾಷ್ಟ್ರೀಯ ‘ಸಂಜೀವಿನಿ ಸರಸ್ ಮೇಳ'ವು ಎ.8ರಿಂದ 18ರವರೆಗೆ ಇಲ್ಲಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಮೇಳವನ್ನು ಎ.8ರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ' ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಬುಧವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರಲಿದ್ದು, 300ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಗಳ ಸಂಯುಕ್ತ ಆಶ್ರಯದಲ್ಲಿ ‘ಸಂಜೀವಿನಿ ಸರಸ್' ಮೇಳ ನಡೆಯುತ್ತಿದ್ದು, ಇದರಲ್ಲಿ ಅಖಿಲ ಭಾರತ ಮಟ್ಟದ ಉತ್ಪನ್ನಗಳು ಗ್ರಾಹಕರಿಗೆ ಸಿಗಲಿವೆ. ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಅಭಿಯಾನದಡಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

‘ಮುಖ್ಯವಾಗಿ ಈ ಮೇಳದಲ್ಲಿ ಕೈಮಗ್ಗದ ಉತ್ಪನ್ನಗಳು, ಕರಕುಶಲ ವಸ್ತುಗಳು, ಬುಡಕಟ್ಟು ಮತ್ತು ಸಾವಯವ ಉತ್ಪನ್ನಗಳು, ಆಲಂಕಾರಿಕ ವಸ್ತುಗಳು, ಮಣ್ಣಿನಿಂದ ತಯಾರಿಸಿದ ಪಾತ್ರೆಗಳು, ಮರದಿಂದ ಮಾಡಿದ ವಸ್ತುಗಳು, ಬಿದಿರು ಮತ್ತು ಸೆಣಬಿನ ವಸ್ತುಗಳು, ಸಾಂಬಾರ ಪದಾರ್ಥಗಳು, ಸಾಂಪ್ರದಾಯಿಕ ವಸ್ತ್ರಗಳು, ಕಲಾಕೃತಿಗಳು, ವರ್ಣಚಿತ್ರಗಳು, ಟೆರ್ರಾಕೋಟ ಮತ್ತು ಪಾರಂಪರಿಕ ಉತ್ಪನ್ನಗಳು ಹಾಗೂ ಸಂಸ್ಕರಿತ ಆಹಾರ ಪದಾರ್ಥಗಳು ಮುಂತಾದವು ಸಿಗಲಿವೆ' ಎಂದು ಅವರು ಮಾಹಿತಿ ನೀಡಿದರು.

‘ಮಹಿಳಾ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಇಲ್ಲಿ ತಮ್ಮ ಕೌಶಲಗಳನ್ನು ಪ್ರದರ್ಶಿಸುವ ಜತೆಗೆ ಗ್ರಾಹಕರೊಂದಿಗೆ ನೇರ ಸಂವಾದ ಮಾಡಬಹುದು. ಅಲ್ಲದೆ, ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯೊಂದಿಗೆ ತರಬೇತಿ, ಕಾರ್ಯಾಗಾರ, ವಿಚಾರ ಸಂಕಿರಣ, ಕಾರ್ಫೋರೇಟ್ ಪ್ರಮುಖರ ಮಾತುಕತೆ ಸಿಎಸ್‍ಆರ್ ದುಂಡು ಮೇಜಿನ ಸಭೆಗಳು ಮತ್ತು ನವೋದ್ಯಮ ಹಾಗೂ ಎನ್‍ಜಿಒ ಅಧಿವೇಶನಗಳನ್ನು ಏರ್ಪಡಿಸಲಾಗಿದೆ' ಎಂದು ಅಶ್ವತ್ಥನಾರಾಯಣ ನುಡಿದರು.

‘ಉದ್ಯಮಶೀಲ ಮಹಿಳೆಯರಿಗೆ ಸರಕಾರದ ವಿವಿಧ ಇಲಾಖೆಗಳು ಮತ್ತು ಬ್ಯಾಂಕುಗಳು ವಿವಿಧ ಸಾಲ ಸೌಲಭ್ಯ ಹಾಗೂ ಸೇವಾ ಉಪಕ್ರಮಗಳನ್ನು ಹೊಂದಿವೆ. ಮೇಳದಲ್ಲಿ ಈ ಬಗ್ಗೆಯೂ ಮಾಹಿತಿ ಒದಗಿಸುವ ಏರ್ಪಾಡನ್ನು ಮಾಡಲಾಗಿದೆ. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಮಂಜುಶ್ರೀ, ಜಂಟಿ ನಿರ್ದೇಶಕಿ ಸ್ವರೂಪಾ, ಉಪ ನಿರ್ದೇಶಕಿ ನಯನಾ ಸೇರಿದಂತೆ ಮತ್ತಿತರರು ಹಾಜರಿದ್ದರು.

‘ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಕಿರು ಉದ್ಯಮಗಳಿದ್ದು, ಈ ವರ್ಷ ಇನ್ನೂ 30 ಸಾವಿರದಷ್ಟು ಕಿರು ಉದ್ದಿಮೆಗಳನ್ನು ಹೆಚ್ಚಿಸುವುದಲ್ಲದೆ, ಈ ವಹಿವಾಟನ್ನು ಡಿಜಿಟಲೀಕರಣಗೊಳಿಸಲಾಗುವುದು. ಕರಕುಶಲ ಉತ್ಪನ್ನಗಳು ಪರಿಸರ ಸ್ನೇಹಿಯಾಗಿವೆ. ಅಲ್ಲದೆ, ಮಹಿಳಾ ಸ್ವಸಹಾಯ ಗುಂಪುಗಳ ಆರ್ಥಿಕ ಸಬಲೀಕರಣಕ್ಕೆ ಎ.8ರಿಂದ ಏರ್ಪಡಿಸಿರುವ ಪ್ರದರ್ಶನ ಮತ್ತು ಮಾರಾಟ ಮೇಳ ನೆರವಾಗಲಿದೆ. ಜತೆಗೆ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಕ್ರಮ ವಹಿಸಲಾಗಿದೆ'

-ಡಾ.ಅಶ್ವತ್ಥ ನಾರಾಯಣ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X