ಎ. 11ರಂದು ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ
ಉಡುಪಿ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಪ್ರಿಲ್ ೧೧ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಅಪರಾಹ್ನ ೧೨:೦೦ ಗಂಟೆಗೆ ಕಾಪು ತಾಲೂಕು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
೩:೦೦ ಗಂಟೆಗೆ ಬನ್ನಂಜೆಯಲ್ಲಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸುವ ಅವರು, ೩:೩೦ಕ್ಕೆ ಬನ್ನಂಜೆಯ ನೂತನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಸಾರ್ವಜನಿಕ ಕಾರ್ಯ ಕ್ರಮದಲ್ಲಿ ಭಾಗವಹಿಸುವರು.
ಸಂಜೆ ೫:೩೦ಕ್ಕೆ ಕುಂಜಿಬೆಟ್ಟುನ ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಣಿಪಾಲದಲ್ಲಿ ವಾಸ್ತವ್ಯ ಮಾಡುವರು.
Next Story