ಕರಂಬಾರು ಸರಕಾರಿ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು : ಬಜ್ಪೆ ಸಮೀಪದ ಕರಂಬಾರಿನ ಸರಕಾರಿ ಹಿ.ಪ್ರಾ.ಶಾಲೆಯ ನೂತನ ಕಟ್ಟಡಕ್ಕೆ ಶಾಸಕ ಉಮನಾಥ್ ಕೋಟ್ಯಾನ್ ಬುಧವಾರ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಒಂದು ಕಾಲಕ್ಕೆ ಮಕ್ಕಳ ಕೊರತೆಯಿದ್ದ ಈ ಶಾಲೆಯಲ್ಲಿ ಇದೀಗ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳ ಕಂಡಿವೆ. ಊರಿನ ದಾನಿಗಳ, ಶಿಕ್ಷಣ ಪ್ರೇಮಿಗಳ ನೆರವಿನಿಂದ ೧.೩೪ ಕೋ.ರೂ.ವೆಚ್ಚದಲ್ಲಿ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಶಾಲೆಯ ಅಭಿವೃದ್ಧಿಗೆ ಶ್ರಮಿಸುವ ಹಳೆ ವಿದ್ಯಾರ್ಥಿ ಸಂಘದ ಯುವಶಕ್ತಿಯೇ ಇದಕ್ಕೆ ಪ್ರೇರಣೆಯಾಗಿದೆ ಎಂದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜಾ ಎ.ವಿ., ಬಜ್ಪೆ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಪೂರ್ಣಕಲಾ ವೈ.ಕೆ. ಮಾತನಾಡಿದರು.
ಎಸ್ಡಿಎಂಸಿ ಅಧ್ಯಕ್ಷ ರಾಘವೇಂದ್ರ, ಪ್ರೊ. ಟಿ.ಎಚ್.ಇಬ್ರಾಹೀಂ ಬ್ಯಾರಿ, ಕದ್ರಿ ದೇವಸ್ಥಾನದ ಮೊಕ್ತೇಸರ ಎಚ್.ಕೆ.ಪುರುಷೋತ್ತಮ, ಕರಂಬಾರು ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ಜಗನ್ನಾಥ ಸಾಲ್ಯಾನ್, ಮಳವೂರು ಗ್ರಾಪಂ ಮಾಜಿ ಅಧ್ಯಕ್ಷ ಗಣೇಶ್ ಅರ್ಬಿ, ಪಿ.ಟಿ. ಕೃಷ್ಣಪ್ಪ, ಉದ್ಯಮಿ ಕೃಷ್ಣ ಕಲ್ಲೋಡಿ, ವಿಶ್ವನಾಥ್ಮ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ರಾಕೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ನವೀನ್ಚಂದ್ರ ಸಾಲ್ಯಾನ್, ಶಾಲೆಯ ಮುಖ್ಯಶಿಕ್ಷಕಿ ಉಷಾಕಿರಣ, ಗುತ್ತಿಗೆದಾರ ಮುಹಮ್ಮದ್ ರಫೀಕ್ ಮತ್ತಿತರರು ಉಪಸ್ಥಿತರಿದ್ದರು.