ಮುನಿಯಾಲು ಸಂಸ್ಥೆಯಿಂದ ಮಕ್ಕಳಿಗೆ ಸ್ವರ್ಣಪ್ರಾಶನ
ಉಡುಪಿ : ಮಕ್ಕಳ ಸ್ವಾಸ್ಥ್ಯರಕ್ಷಣೆ ಹಾಗೂ ವ್ಯಾಧಿ ಕ್ಷಮತೆಯ ಅಭಿವೃದ್ಧಿಗಾಗಿ ಮುನಿಯಾಲು ಆಯುರ್ವೇದ ಸಂಶೋಧನಾ ಸಂಸ್ಥೆಯಿಂದ ವಿಶೇಷವಾಗಿ ಸಂಶೋಧಿಸಲ್ಪಟ್ಟ ಹಿರಣ್ಯಪ್ರಾಶದ ಬಿಂದುಗಳನ್ನು ೧೬ ವರ್ಷ ಗಳೊಳಗಿನ ಮಕ್ಕಳಿಗೆ ಈ ತಿಂಗಳ ಪುಷ್ಯ ನಕ್ಷತ್ರವಾದ ಎ. 10 ರಂದು ನೀಡಲಾಗುವುದು.
ಮಕ್ಕಳಿಗೆ ಸ್ವರ್ಣಪ್ರಾಶನ ಕಾರ್ಯಕ್ರಮ ಜನಪ್ರಿಯವಾಗುತ್ತಿದ್ದು ಹೆಚ್ಚು ಹೆಚ್ಚು ಮಕ್ಕಳು ಇದರ ಪ್ರಯೋಜನವನ್ನು ಪಡೆಯಬೇಕೆಂಬ ಉದ್ದೇಶದಿಂದ ಮಣಿಪಾಲದ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಮುನಿಯಾಲು ಆಯುರ್ವೇದ ಕುಟುಂಬ ಚಿಕಿತ್ಸಾಲಯದ ಶಾಖೆಗಳಲ್ಲಿ ಹಿರಣ್ಯಪ್ರಾಶನದ ಸೌಲಭ್ಯವನ್ನು ಒದಗಿಸಲಾಗುತ್ತಿದೆ.
ಪ್ರತೀ ತಿಂಗಳೂ ಸುಮಾರು ಐದು ಸಾವಿರ ಮಕ್ಕಳು ಇದರ ಸದುಪಯೋಗ ವನ್ನು ಪಡೆದುಕೊಳ್ಳುತ್ತಿದ್ದು, ಅಭಿಪ್ರಾಯ ಸಂಗ್ರಹಣೆ ಮಾಡಿದಾಗ ಕನಿಷ್ಠ ಆರು ಬಾರಿ ಉಪಯೋಗಿಸಿದ ಮಕ್ಕಳಲ್ಲಿ ವಿಶೇಷವಾಗಿ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಮತ್ತು ಬುದ್ಧಿಮತ್ತೆಯನ್ನು ವರ್ಧಿಸುವಲ್ಲಿ ಅತ್ಯುಪಯುಕ್ತ ವಾಗಿರುವುದು ಕಂಡು ಬಂದಿದೆ ಮತ್ತು ಯಾವುದೇ ಅಡ್ಡ ಪರಿಣಾಮಗಳು ಕಂಡು ಬಂದಿಲ್ಲ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.