Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆ್ಯಂಕರ್...

ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆ್ಯಂಕರ್ ಬ್ಯಾಂಕ್ ಸ್ಥಾಪನೆ: ಸಿಎಂ ಬೊಮ್ಮಾಯಿ

10 ದಿನಗಳ ಸಂಜೀವಿನಿ ಸರಸ್ ಮೇಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ8 April 2022 10:47 PM IST
share
ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆ್ಯಂಕರ್ ಬ್ಯಾಂಕ್ ಸ್ಥಾಪನೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಎ.8: ರಾಜ್ಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆ್ಯಂಕರ್ ಬ್ಯಾಂಕನ್ನು ಆರಂಭಿಸಲಾಗುವುದು. ಈ ಮೂಲಕ ರಾಜ್ಯದಲ್ಲಿ ದುಡಿಮೆಯ ಕ್ರಾಂತಿ ಸಾಧ್ಯವಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಘೋಷಿಸಿದ್ದಾರೆ.

ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಅಭಿಯಾನದಡಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 10 ದಿನಗಳ `ರಾಷ್ಟ್ರೀಯ ಸಂಜೀವಿನಿ ಸರಸ್ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಸ್ವಸಹಾಯ ಸಂಘಗಳಿಗೆ ಬಲ ತುಂಬಲು ಈ ಸಲದ ಬಜೆಟ್ಟಿನಲ್ಲಿ 500 ಕೋಟಿ ರೂ. ಕೊಡಲಾಗಿದೆ. ಈ ಮೂಲಕ 4 ಲಕ್ಷ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು ಎಂದು ಅವರು ಹೇಳಿದರು.

ಅಲ್ಲದೆ, ಈ ವರ್ಷ ಮಹಿಳಾ ಕಾರ್ಯಕ್ರಮಗಳಿಗೆ 47 ಸಾವಿರ ಕೋಟಿ ರೂ. ಮತ್ತು ಮಕ್ಕಳಿಗೆ ಸಂಬಂಧಿಸಿದ ನಾನಾ ಯೋಜನೆಗಳಿಗೆ 43 ಸಾವಿರ ಕೋಟಿ ರೂ.ಗಳಷ್ಟು ಅಗಾಧ ಮೊತ್ತವನ್ನು ಬಜೆಟ್ಟಿನಲ್ಲಿ ಪ್ರಕಟಿಸಲಾಗಿದೆ. ಇವೆಲ್ಲವುಗಳ ಅನುಷ್ಠಾನದ ಸಂಬಂಧ ಇನ್ನು ಒಂದು ವಾರದಲ್ಲಿ ಸೂಕ್ತ ಆದೇಶಗಳನ್ನು ಹೊರಡಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ನಮ್ಮ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರಿದ್ದರೂ ಅವರ ದುಡಿಮೆಗೆ ಮನ್ನಣೆ ಸಿಗುತ್ತಿಲ್ಲ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಜನಾಂಗಗಳ ಮಹಿಳೆಯರಲ್ಲಿ ಅಪಾರ ಪ್ರತಿಭೆ ಮತ್ತು ಕೌಶಲ್ಯಗಳಿವೆ. ಆದರೆ, ಒಟ್ಟು ಸ್ತ್ರೀಯರ ಪೈಕಿ ಶೇ.5ರಿಂದ 10ರಷ್ಟು ಮಂದಿ ಮಾತ್ರ ಆರ್ಥಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಹೆಣ್ಣು ಮಕ್ಕಳ ದುಡಿಮೆಗೆ ನೆಲೆ-ಬೆಲೆಗಳು ಸಿಕ್ಕಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಇವರನ್ನು ಹೊರಗಿಟ್ಟು ಸಮಗ್ರ ಅಭಿವೃದ್ಧಿ ಬಗ್ಗೆ ಮಾತನಾಡಿದರೆ ಅದಕ್ಕೆ ಯಾವ ಅರ್ಥವೂ ಇಲ್ಲ ಎಂದು ಅವರು ಪ್ರತಿಪಾದಿಸಿದರು.

ಮಹಿಳೆಯರಲ್ಲಿ ಅಪಾರ ಪ್ರತಿಭೆ ಇದೆ. ಇವರು ತಯಾರಿಸುವ ಕಸೂತಿ ವಸ್ತ್ರಗಳನ್ನು ಕಡಿಮೆ ಬೆಲೆಗೆ ಖರೀದಿಸಿ, ಅದನ್ನೇ ಅಮೆರಿಕ, ಇಂಗ್ಲೆಂಡ್ ಗಳಲ್ಲಿ ಎಷ್ಟೋ ಜನ ನೂರು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಲಾಭ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಕಸೂತಿಯನ್ನು ರಕ್ತಗತ ಮಾಡಿಕೊಂಡಿರುವ ಮಹಿಳೆಯರಿಗೆ ಗೌರವವೇ ಸಿಕ್ಕುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ವಾರ್ಷಿಕ 3 ಲಕ್ಷ ರೂ. ತಲಾವಾರು ಆದಾಯವಿದ್ದರೆ, ಬೀದರ್ ಜಿಲ್ಲೆಯಲ್ಲಿ ಕೇವಲ 1.50 ಲಕ್ಷ ರೂ. ಇದೆ. ತಲಾವಾರು ಆದಾಯದಲ್ಲಿ ರಾಜ್ಯವು ದೇಶದಲ್ಲಿ 4ನೇ ಸ್ಥಾನದಲ್ಲಿದ್ದರೂ ಒಟ್ಟು ಜನಸಂಖ್ಯೆಯ ಶೇ.30ರಷ್ಟು ಮಂದಿ ಮಾತ್ರ ಆರ್ಥಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಉಳಿದ ಶೇ.70ರಷ್ಟು ಮಂದಿಯನ್ನು ಕೂಡ ಸುಸ್ಥಿರ ಬದುಕಿನ ಜತೆಗೆ ಆರ್ಥಿಕ ಚಟುವಟಿಕೆಗಳ ಭಾಗವಾಗಿಸಬೇಕು ಎನ್ನುವುದು ಸರಕಾರದ ಸಂಕಲ್ಪವಾಗಿದೆ. ಹೀಗಾದರೆ ಮಾತ್ರ ರಾಜ್ಯದ ಜಿಡಿಪಿ ಏರುಗತಿಯಲ್ಲಿ ಸಾಗಲಿದೆ. ಈ ದೇಶ ಮುನ್ನಡೆ ಸಾಧಿಸುತ್ತಿರುವುದು ಬಡವರಿಂದಲೇ ವಿನಾ ಶ್ರೀಮಂತರಿಂದಲ್ಲ ಎಂದು ಅವರು ನುಡಿದರು.

ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಶಯ ನುಡಿಗಳನ್ನಾಡಿ, `ಮಹಿಳಾ ಸ್ತ್ರೀಸಹಾಯ ಸಂಘಗಳ ಸಬಲೀಕರಣಕ್ಕೆ ಕಾರ್ಪೋರೇಟ್ ಸಂಸ್ಥೆಗಳು, ನವೋದ್ಯಮಗಳು, ಎನ್.ಜಿ.ಒ.ಗಳ ನೆರವು ತೆಗೆದುಕೊಳ್ಳಲಾಗುತ್ತಿದೆ. ಜತೆಗೆ ಈ ಸಂಘಗಳ ಉತ್ಪನ್ನಗಳ ಬ್ರ್ಯಾಂಡಿಂಗ್, ಪ್ಯಾಕಿಂಗ್ ಮಾತ್ತು ಮಾರುಕಟ್ಟೆ ವಿಸ್ತರಣೆಗೆ ಒತ್ತು ಕೊಡಲಾಗುತ್ತಿದೆ. ಕೇಂದ್ರ ಸರಕಾರವು ಡಿಜಿಟಲೀಕರಣಕ್ಕೆ ಆದ್ಯತೆ ಕೊಟ್ಟಿದ್ದು, ಸುಗಮ ವಹಿವಾಟಿಗೆ ಆ್ಯಪ್ ಒದಗಿಸಿದೆ. ಸ್ವಸಹಾಯ ಸಂಘಗಳು ಇದರ ಲಾಭ ಪಡೆದುಕೊಳ್ಳಬೇಕು’ ಎಂದರು.

ಈ ವರ್ಷವನ್ನು `ಜೀವನೋಪಾಯ ವರ್ಷ’ವೆಂದು ಘೋಷಿಸಲಾಗಿದ್ದು, ಈ ಕಾರ್ಯಕ್ರಮಗಳಿಗೆ 1,500 ಕೋಟಿ ರೂ. ಒದಗಿಸಲಾಗುತ್ತಿದೆ. ಇದರಿಂದ ಸ್ವಸಹಾಯ ಸಂಘಗಳಲ್ಲಿ ಸಕ್ರಿಯರಾಗಿರುವ 30 ಲಕ್ಷ ಮಹಿಳೆಯರಿಗೆ ಆರ್ಥಿಕ ಚೈತನ್ಯ ಸಿಗಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಎಂ.ಟಿ.ಬಿ.ನಾಗರಾಜ್, ಶಂಕರಗೌಡ ಪಾಟೀಲ ಮುನೇನಕೊಪ್ಪ, ಶಾಸಕರಾದ ಉದಯ್ ಗರುಡಾಚಾರ್ ಮತ್ತು ರವಿ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

23 ರಾಜ್ಯಗಳು ಮೇಳದಲ್ಲಿ ಭಾಗಿ: ಎ.18ರವರೆಗೆ ನಡೆಯಲಿರುವ `ಸಂಜೀವಿನಿ ಸರಸ್ ಮೇಳ’ದಲ್ಲಿ 23 ರಾಜ್ಯಗಳ 300ಕ್ಕೂ ಹೆಚ್ಚು ಮಳಿಗೆಗಳಿದ್ದು, ಇಲ್ಲಿ ಕರಕುಶಲ ಉತ್ಪನ್ನಗಳು, ಕಸೂತಿ, ಉಪ್ಪಿನಕಾಯಿ, ಅಲಂಕಾರಿಕ ವಸ್ತುಗಳು, ವರ್ಣಚಿತ್ರಗಳು, ಟೆರಾಕೋಟಾ ವಸ್ತುಗಳು, ಕೈಮಗ್ಗದ ವಸ್ತ್ರಗಳು, ಸಿಹಿತಿಂಡಿಗಳು ಮತ್ತು ಸಾಂಬಾರ ಪದಾರ್ಥಗಳು, ವೈವಿಧ್ಯಮಯ ಸೀರೆಗಳು ಮತ್ತು ಮಹಿಳೆಯರ ಉಡುಪುಗಳು ಮುಂತಾದವು ಲಭ್ಯವಿವೆ. ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶಾವಕಾಶವಿದೆ.

ಪತ್ನಿಗೆ ಸೀರೆ ಖರೀದಿಸಿದ ಸಿಎಂ: ಕಾರ್ಯಕ್ರಮ ಉದ್ಘಾಟಿಸುವುದಕ್ಕೂ ಮುನ್ನ ಮೇಳದಲ್ಲಿ ಒಂದು ಸುತ್ತು ಹಾಕಿದ ಮುಖ್ಯಮಂತ್ರಿ ಬೊಮ್ಮಾಯಿ, ತಮ್ಮ ಪತ್ನಿಗೆ 2,500 ರೂ.ಗಳ ಒಂದು ಸೀರೆಯನ್ನು ಖರೀದಿಸಿದರು. 

4 ಗ್ರಾಪಂ ಒಕ್ಕೂಟಗಳಿಗೆ ಪ್ರಶಸ್ತಿ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಮಂಗಳೂರು ಗ್ರಾಪಂ ವ್ಯಾಪ್ತಿಯ ದಿವ್ಯಜ್ಯೋತಿ ಸ್ವಸಹಾಯ ಸಂಘಗಳು ಒಕ್ಕೂಟ, ಹೊಸಕೋಟೆ ತಾ.ನ ದೊಡ್ಡನಲ್ಲಾಳ ಗ್ರಾಮದ ಚೇತನಾ ಒಕ್ಕೂಟ, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾ.ನ ಯಳನಾಡಿನ ನಿಸರ್ಗ ಒಕ್ಕೂಟ ಮತ್ತು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾ.ನ ರಾಮನಗರ ಗ್ರಾಪಂ ವ್ಯಾಪ್ತಿಯ ಪರಿವಾರ ಒಕ್ಕೂಟಗಳಿಗೆ ಮುಖ್ಯಮಂತ್ರಿಯವರು ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X