Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಲ್ಕಿ ಜಯಾನಂದ ದೇವಾಡಿಗರ ಬಹುಕು-ಬರಹಗಳ...

ಮೂಲ್ಕಿ ಜಯಾನಂದ ದೇವಾಡಿಗರ ಬಹುಕು-ಬರಹಗಳ ಕುರಿತ 'ಶ್ರಮಯೇವ ಜಯತೇ' ಕೃತಿಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ10 April 2022 5:29 PM IST
share
ಮೂಲ್ಕಿ ಜಯಾನಂದ ದೇವಾಡಿಗರ ಬಹುಕು-ಬರಹಗಳ ಕುರಿತ ಶ್ರಮಯೇವ ಜಯತೇ ಕೃತಿಬಿಡುಗಡೆ

ಮಂಗಳೂರು, ಎ.10: ಮೂಲ್ಕಿ ಜಯಾನಂದ ದೇವಾಡಿಗರ ಬಹುಕು-ಬರಹಗಳ ಕುರಿತ 'ಶ್ರಮಯೇವ ಜಯತೇ' ಕೃತಿ ಬಿಡುಗಡೆಯು ರವಿವಾರ ನಗರದ ಗಾಂಧಿನಗರ ದೇವಾಡಿಗರ ಸಮಾಜ ಭವನದಲ್ಲಿ ನಡೆಯಿತು.

ಪತ್ರಕರ್ತ ಯು.ಕೆ.ಕುಮಾರನಾಥ್ ಮತ್ತು ಮುಂಬೈ ದೇವಾಡಿಗರ ಸಂಘದ ಅಧ್ಯಕ್ಷ ಉದ್ಯಮಿ ರವಿ ಎಸ್. ದೇವಾಡಿಗ ಜಂಟಿಯಾಗಿ ಕೃತಿ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಕುಮಾರನಾಥ್, ಶಿಸ್ತು ಮತ್ತು ಸಮಯ ಪಾಲನೆಯನ್ನು ಆ ದಿನಗಳಲ್ಲೇ ಜಯಾನಂದರು ಅಳವಡಿಸಿಕೊಂಡಿದ್ದರು. ಇದೊಂದು ಮಾದರಿ ಆಕರ ಗ್ರಂಥವಾಗಿದ್ದು, ಸಂಶೋಧನಾ ವಿದ್ಯಾರ್ಥಿಗಳಿಗೆ ಪೂರಕವಾಗಿದೆ ಎಂದರು.

ರವಿ ದೇವಾಡಿಗ ಮಾತನಾಡಿ, ಸಮುದಾಯದ ಭೀಷ್ಮಾಚಾರ್ಯರಾಗಿರುವ ದೇವಾಡಿಗರ ಬದಕಿನ ಚಿತ್ರಣವನ್ನು ಕೃತಿಯಲ್ಲಿ ಕಾಣಬಹುದಾಗಿದೆ ಎಂದರು.

ಕೃತಿಯನ್ನು ಪರಿಚಯಿಸಿ ಮಾತನಾಡಿದ ಗಣಪತಿ ಪಪೂ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಚಂದ್ರಕಲಾ ನಂದಾವರ ಪ್ರಸಕ್ತ ದಿನಗಳಲ್ಲಿ ಎಲ್ಲರ ಅನುಭವಗಳೂ ದಾಖಲಾಗಬೇಕಾದ ಅಗತ್ಯವಿದೆ. ಭವಿಷ್ಯದಲ್ಲಿ ಅದು ಇನ್ನೊಬ್ಬರಿಗೆ ಪ್ರೇರಣೆ, ಮಾರ್ಗದರ್ಶನವಾಗಬಹುದು. ಸಾಹಿತ್ಯಿಕವಾಗಿ ಆತ್ಮಚರಿತ್ರೆಯಾದರೂ, ಡೈರಿ ಬರೆದ ರೀತಿಯಲ್ಲಿ, ದಿನಾಂಕ, ಅಂಕಿ ಅಂಶಗಳು, ಸಹಿ ಎಲ್ಲವೂ ಒಳಗೊಂಡ ದಸ್ತಾವೇಜು ಬರಹದ ರೀತಿಯಲ್ಲಿ ಇದೆ. ಸಮುದಾಯದ ಏಳಿಗೆಯ ಜತೆಗೆ ಇತರ ಹಿಂದುಳಿದ ಸಮುದಾಯಗಳನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಜಯಾನಂದ ಪಾತ್ರವನ್ನು ಪುಸ್ತಕದಲ್ಲಿ ಕಾಣಬಹುದಾಗಿದೆ ಎಂದರು.

ವಿವಾಹದ 63ನೇ ವಸಂತಕ್ಕೆ ಕಾಲಿರಿಸಿದ ಜಯಾನಂದ ದೇವಾಡಿಗ ಮತ್ತು ಸರೋಜಿನಿ ಜೆ. ದೇವಾಡಿಗ ದಂಪತಿ ಪರಸ್ಪರ ಹಾರ ಬದಲಾಯಿಸಿಕೊಂಡರು.

ಈ ಸಂದರ್ಭ ಮಾತನಾಡಿದ ಜಯಾನಂದ ದೇವಾಡಿಗ ಹಿಂದುಳಿದ ಸಮಾಜ ಇತಿಹಾಸವನ್ನು ದಾಖಲೀಕರಿಸುವುದರಲ್ಲಿ ಹಿಂದೆ ಬಿದ್ದಿದೆ. ಶ್ರಮಯೇವ ಜಯತೇ ಕೃತಿಯಲ್ಲಿ ಹಿಂದುಳಿದ ವರ್ಗದ ಸಂಘಟನೆಯನ್ನು ಕಟ್ಟಿದ ರೀತಿ, ದೇವಾಡಿಗ ಸಮಾಜದ ಬಲವರ್ಧನೆ ಬಗ್ಗೆ ಉಲ್ಲೇಖಿಸಿರುವೆ. ಈ ಕಾರ್ಯಕ್ರಮ ಹಾಗೂ ಗೌರವ ನಿಜಕ್ಕೂ ನನಗೂ ತುಂಬ ಖುಷಿ ನೀಡಿದೆ ಎಂದರು.

ದ.ಕ. ಮತ್ತು ಉಡುಪಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ನವೀನ್‌ಚಂದ್ರ ಡಿ.ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಶಕ್ತಿನಗರ ಗೋಪಾಲಕೃಷ್ಣ ದೇವಸ್ಥಾನ ಆಡಳಿ ಮೊಕ್ತೇಸರ ಕೆ.ಚಂದ್ರಶೇಖರ ನಾಯ್ಕಾ, ದ.ಕ. ಜಿಲ್ಲಾ ಅನುದಾನಿತ ಶಾಲೆಗಳ ಆಡಳಿತ ಸಂಘದ ಅಧ್ಯಕ್ಷ ಪಿ.ಗೋಪಾಲಕೃಷ್ಣ ಭಟ್, ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ಬಿ.ವಿಶ್ವನಾಥ ಸಾಲಿಯಾನ್, ರಾಜ್ಯ ದೇವಾಡಿಗರ ಸಂಘದ ಅಧ್ಯಕ್ಷ ಕೆ.ಶ್ರೀಧರ್, ದ.ಕ. ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕ ಸಂಘದ ಮಾಜಿ ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ, ಮುಂಬೈನ ದೇವಾಡಿಗ ಅಕ್ಷಯ ಕಿರಣ್ ಸೇವಾ ಫೌಂಡೇಶನ್ ಸೇವಾದಾರ ಬ್ರಹ್ಮಾವರ ಗಣೇಶ್ ಸೇರಿಗಾರ ಉಪಸ್ಥಿತರಿದ್ದರು.

ಡಿ.ಜೆ. ಸುಚೇತನ್ ಸ್ವಾಗತಿಸಿದರು.ದಿನೇಶ್ ಎಲ್. ಬಂಗೇರಾ ವಂದಿಸಿದರು.ಸುರೇಖಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X