Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು:ವಿಶ್ವ ಹೋಮೀಯೊಪತಿ ದಿನಾಚರಣೆ

ಮಂಗಳೂರು:ವಿಶ್ವ ಹೋಮೀಯೊಪತಿ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ10 April 2022 6:21 PM IST
share
ಮಂಗಳೂರು:ವಿಶ್ವ ಹೋಮೀಯೊಪತಿ ದಿನಾಚರಣೆ

ಮಂಗಳೂರು, ಎ.10: ಭಾರತೀಯ ಹೋಮೀಯೊಪತಿ ವೈದ್ಯರ ಸಂಘ ಕರ್ನಾಟಕ (ಐಎಚ್‌ಎಂಎ) ಹಾಗೂ ಮಂಗಳೂರು ಘಟಕದ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆರ್.ಎ.ಪಿ.ಸಿ.ಸಿ ಕಾನ್ಪರೆನ್ಸ್ ಹಾಲ್ ನಲ್ಲಿ ರವಿವಾರ ವಿಶ್ವ ಹೋಮೀಯೊಪತಿ ದಿನ ಆಚರಿಸಲಾಯಿತು. ಈ ಸಂದರ್ಭ ಹೋಮೀಯೊಪತಿ ವೈದ್ಯರ ವಿಚಾರ ಸಂಕಿರಣವೂ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದ.ಕ.ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ವಿಶ್ವದಲ್ಲಿ ಎರಡನೇ ಅತೀ ಹೆಚ್ಚು ಬಳಕೆಯಾಗುವ ಔಷಧೀಯ ಪದ್ದತಿ ಎಂಬ ಪ್ರಖ್ಯಾತಿಗೆ ಹೋಮಿಯೋಪತಿ ಕ್ಷೇತ್ರಕ್ಕೆ ದಕ್ಕಿದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ದಾಖಲಾಗುತ್ತಿದೆ ಎಂದರು.

ದ.ಕ.ಜಿಲ್ಲೆಯಲ್ಲಿ ಈ ಹಿಂದೆ 2 ಹೋಮಿಯೋಪತಿ ವೈದ್ಯರ ಹುದ್ದೆಗೆ ಅವಕಾಶವಿತ್ತು. ಈಗ ಹೊಸದಾಗಿ 7 ಹುದ್ದೆಗಳನ್ನು ಸರಕಾರ ಸೃಷ್ಟಿಸಿದೆ. ಈ ಮೂಲಕ ಜಿಲ್ಲೆಯಲ್ಲಿ 9 ಹೋಮಿಯೋಪತಿ ಹುದ್ದೆಗಳು ಸೃಷ್ಟಿಯಾಗಿದೆ. ಆಯುಷ್ ಆಸ್ಪತ್ರೆಯಲ್ಲಿ ಅಲೋಪತಿ ವೈದ್ಯ ಪದ್ದತಿ ಬಿಟ್ಟು ಉಳಿದ ಎಲ್ಲ ವೈದ್ಯ ಪದ್ದತಿಯಲ್ಲಿ ಸೇವೆ ರೋಗಿಗಳಿಗೆ ಸಿಗುತ್ತಿದೆ. ಅತೀ ಶೀಘ್ರದಲ್ಲಿಯೇ ಮಂಗಳೂರಿಗೆ ಆಯುಷ್ ಸ್ಪೋಟ್ಸ್ ಮೆಡಿಸಿನ್ ಸೆಂಟರ್ ಆರಂಭಗೊಳ್ಳಲಿದೆ ಎಂದು ಡಾ.ಮುಹಮ್ಮದ್ ಇಕ್ಬಾಲ್ ಹೇಳಿದರು.

ಹೋಮಿಯೋಪತಿ ವೈದ್ಯ ಪದ್ದತಿ ಮೂಲಕ ಸೃಷ್ಟಿ ಎನ್ನುವ ಯೋಜನೆಯಿಂದ ಜಿಲ್ಲೆಯಲ್ಲಿ ಮಕ್ಕಳಾಗದ 47 ವಿವಾಹಿತೆಯರ ಪೈಕಿ ಇಬ್ಬರು ಗರ್ಭಿಣಿಯಾಗಿದ್ದಾರೆ. ಉಳಿದವರ ಚಿಕಿತ್ಸೆ ಕಾರ್ಯ ಮುಂದುವರಿದಿದೆ. ಮಾನಸ ಮಿತ್ರ ಯೋಜನೆಯ ಮೂಲಕ ಆಟಿಸಂ ಇರುವ ಮಕ್ಕಳ ಚಿಕಿತ್ಸೆಯನ್ನು ನೀಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಐಎಚ್‌ಎಂಎ ಸಿದ್ಧಪಡಿಸಿದ ಕಾರಿನ ಸ್ಟಿಕ್ಕರ್‌ನ್ನು ಡಾ.ಮುಹಮ್ಮದ್ ಇಕ್ಬಾಲ್ ಬಿಡುಗಡೆಗೊಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಐಎಚ್‌ಎಂಎ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಗ್ರೇಟ್ಟಾ ಲೋಬೋ ದೇಶದಲ್ಲಿ ಈಗ 20 ಲಕ್ಷ ಹೋಮಿಯೋಪತಿ ವೈದ್ಯರಿದ್ದಾರೆ. ಪ್ರತಿ ವರ್ಷ 40 ಸಾವಿರ ವೈದ್ಯರು ಈ ಕ್ಷೇತ್ರದಿಂದ ಹೊರಬರುತ್ತಿದ್ದಾರೆ. 40 ವರ್ಷದ ಹಿಂದೆ ಜಿಲ್ಲೆಯಲ್ಲಿ 2 ಹೋಮಿಯೋಪತಿ ವೈದ್ಯರು ಇರುವ ಜಾಗದಲ್ಲಿ ಈಗ 100ಕ್ಕೂ ಅಧಿಕ ವೈದ್ಯರಿದ್ದಾರೆ. ಜಿಲ್ಲೆಯಲ್ಲಿ ಮೂರು ಹೋಮಿಯೋಪತಿ ಮೆಡಿಕಲ್ ಕಾಲೇಜುಗಳಿವೆ. ಹೋಮಿಯೋಪತಿ ಕ್ಷೇತ್ರ ಸಾಕಷ್ಟು ಪ್ರಗತಿ ಕಾಣುತ್ತಿದೆ. ಜರ್ಮನಿಯಲ್ಲಿ ಆರಂಭವಾದ ಈ ವೈದ್ಯಕೀಯ ಪದ್ದತಿ ಈಗ ವಿಶ್ವದ ಎಲ್ಲ ಪ್ರಮುಖ ರಾಷ್ಟ್ರಗಳಲ್ಲಿ ಸೇವೆಗೆ ಲಭ್ಯವಾಗಿದೆ ಎಂದರು.

ಐಎಚ್‌ಎಂಎ ರಾಷ್ಟ್ರೀಯ ಸಂಘಟನೆ ಉಪಾಧ್ಯಕ್ಷ ಡಾ.ಪ್ರವೀಣ್ ರಾಜ್ ಉಪಸ್ಥಿತರಿದ್ದರು.

ಹೋಮಿಯೋಪತಿ ಕ್ಷೇತ್ರದಲ್ಲಿ ಮಾಡಿದ ಅಪೂರ್ವ ಸಾಧನೆಗೆ ಮಂಗಳೂರಿನ ವೈದ್ಯ ಹಾಗೂ ಹೋಮೀಯೊಪತಿ ಔಷಧ ತಯಾರಿಕಾ ಘಟಕ ಸೇಂಟ್ ಜಾರ್ಜ್ ಹೋಮಿಯೋಪತಿ ಸಂಸ್ಥೆಯ ರುವಾರಿ ಡಾ. ಅಬ್ರಹಾಂ ಜಾಕರಿಯಾಸ್ ಅವರನ್ನು ವೈದ್ಯರ ಸಂಘದ ಪರವಾಗಿ ಸನ್ಮಾನಿಸಲಾಯಿತು.

ಹೋಮೀಯೊಪತಿ ತಜ್ಞ ವೈದ್ಯರುಗಳಾದ ಡಾ.ರಾಮಕೃಷ್ಣ ರಾವ್, ಡಾ. ಅನೀಶ್ ಕುಮಾರ್, ಡಾ.ದೀಪಕ್ ಆರ್.ಡಿ. ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದರು.

ಐಎಚ್‌ಎಂಎ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರವೀಣ್ ಕುಮಾರ್ ರೈ ಸ್ವಾಗತಿಸಿದರು. ಮಂಗಳೂರು ಘಟಕ ದ ಅಧ್ಯಕ್ಷ ಡಾ. ಅವಿನಾಶ್ ವಿ.ಎಸ್ ವಂದಿಸಿದರು. ಡಾ. ತ್ರಿವೇಣಿ ಬಂಗೇರಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X