Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಬಂಧಗಳು ಕದಡುವ ಕಾಲಘಟ್ಟಕ್ಕೆ ಪಂಪನ...

ಸಂಬಂಧಗಳು ಕದಡುವ ಕಾಲಘಟ್ಟಕ್ಕೆ ಪಂಪನ ಮಾತು ಮಾರ್ಗವಾಗಬೇಕು: ಡಾ.ವಸುಂಧರಾ ಭೂಪತಿ

ವಾರ್ತಾಭಾರತಿವಾರ್ತಾಭಾರತಿ10 April 2022 6:26 PM IST
share
ಸಂಬಂಧಗಳು ಕದಡುವ ಕಾಲಘಟ್ಟಕ್ಕೆ ಪಂಪನ ಮಾತು ಮಾರ್ಗವಾಗಬೇಕು: ಡಾ.ವಸುಂಧರಾ ಭೂಪತಿ

ಬೆಂಗಳೂರು, ಎ. 10: ‘ಇತ್ತೀಚೆಗೆ ಮನುಷ್ಯ ಸಂಬಂಧಗಳು ಕದಡುತ್ತಿವೆ. ಇಂತಹ ಕಾಲಘಟ್ಟದಲ್ಲಿರುವ ನಮಗೆ ಪಂಪ ಮಹಾಕವಿಯ ‘ಮನುಜ ಕುಲಂ ತಾನೊಂದೇ ವಲಂ’ ಎನ್ನುವ ಮಾತು ಬದುಕಿನ ಮಾರ್ಗ ಆಗಬೇಕು’ ಎಂದು ಲೇಖಕಿ ಡಾ.ವಸುಂಧರಾ ಭೂಪತಿ ಅಭಿಪ್ರಾಯಪಟ್ಟಿದ್ದಾರೆ. 

ರವಿವಾರ ಬೆನಕ ಬುಕ್ಸ್‍ಬ್ಯಾಂಕ್ ವತಿಯಿಂದ ಗಾಂಧಿಭವನದಲ್ಲಿ ಆಯೋಜಿಸಿದ್ದ ಪುಸ್ತಕ ಲೋಕಾರ್ಪಣಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕುಟುಂಬ ಮತ್ತು ಸಮಾಜ ವಿಘಟನೆಯಾಗುತ್ತಿರುವ ಕಾಲಕ್ಕೆ ಲೋಕಾರ್ಪಣೆಗೊಳ್ಳುತ್ತಿರುವ ಕೃತಿಗಳು ಆಪ್ತ ಸಮಾಲೋಚಕವಾಗಿ ಕಾರ್ಯನಿರ್ವಹಿಸುತ್ತವೆ. ಶೀರ್ಷಿಕೆಗಳು ಓದುಗರನ್ನು ಆಕರ್ಷಿಸುವಂತಿದೆ’ ಎಂದರು. ‘ಎರಡು ವರ್ಷಗಳಿಂದ ಜನರು ಕೊರೋನಾ ಕರಿ ನೆರಳಿನಲ್ಲಿ ಬದುಕುತ್ತಿದ್ದರು. ಕೊರೋನಾನಂತರದಲ್ಲಿಯೂ ಕಿನ್ನತೆ ಮತ್ತು ಆತಂಕದಿಂದ ಬಳಲುತ್ತಿದ್ದಾರೆ. ಅಂತವರಿಗೆ ಇದು ಹೆಚ್ಚು ಉಪಯೋಗಕಾರಿ’ ಎಂದು ಅವರು ಪ್ರಶಂಶಿಸಿದರು.  

ಪತ್ರಕರ್ತ ರವೀಂದ್ರ ಭಟ್ಟ ಮತನಾಡಿ, ‘ಸುತ್ತಲಿನ ಜನ -ಪರಿಸರದ ವಿದ್ಯಮಾನಗಳ ಕುರಿತು ಮಾತನಾಡುವುದಕ್ಕಿಂತ ನಮ್ಮೊಳಗಿನ ‘ನಾನು’ ಜೊತೆ ಮಾತನಾಡುವ ಅಗತ್ಯವಿದೆ. ‘ನಮ್ಮೊಳಗಿನ ನಾನು’ ದರ್ಶನ ಮಾಡುವುದು ಎಂದರೆ ಅಧ್ಯಾತ್ಮಕದ ಕಡೆ ನೋಡುವುದಲ್ಲ. ನಮ್ಮ ನಡೆ-ನುಡಿಯನ್ನು ಅವಲೋಕಿಸುವುದು. ಅದಕ್ಕಾಗಿ ಸಮಯ ಹೊಂದಿಸಿಕೊಳ್ಳುವ ಅನಿವಾರ್ಯತೆ ಇದೆ. ಇದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ’ ಎಂದರು.

‘ಹಿಂದೆ ಕೂಡು ಕುಟುಂಬಗಳಿದ್ದಾಗ, ಅತ್ಯಂತ ಸಹನೆ, ಸಹಕಾರ, ಸಹಬಾಳ್ವೆಯನ್ನು ಕಲಿಸುತ್ತಿದ್ದವು. ವ್ಯಕ್ತಿಯ ಕೋಪ-ತಾಪ-ಅವಸರಗಳನ್ನು ನಿಯಂತ್ರಿಸುತ್ತಿದ್ದವು. ಹೀಗಾಗಿ, ಈ ವ್ಯವಸ್ಥೆಯು ಮಹತ್ವ ಪಡೆದುಕೊಂಡಿತ್ತು. ಆದರೆ, ಇಂದು ಇಂತಹ ಪಾಠವನ್ನು ಯಾರೂ ಹೇಳುವ ಸ್ಥಿತಿಯಲ್ಲಿ ನಮ್ಮ ಬದುಕಿಲ್ಲ. ಆದ್ದರಿಂದ, ನಮ್ಮ ಸುತ್ತಮುತ್ತಲಿನ ವಿದ್ಯಮಾನಗಳನ್ನು ಸೂಕ್ಷ್ಮ ಮನಸ್ಸಿನಿಂದ ನೋಡಿ, ತಿಳಿಯುವ ಮನಸ್ಥಿತಿ ಬೆಳೆಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಲೇಖಕಿ ಡಾ. ಶಾಂತಾ ನಾಗರಾಜ್ ಮಾತನಾಡಿ, ‘ಇಂದಿನ ಬರಹಗಾರರು ಒತ್ತಡದ ಬದುಕನ್ನು ಎದುರಿಸಿ, ಪರಿಣಾಮಕಾರಿಯಾಗಿ ಬರೆಯುತ್ತಿದ್ದಾರೆ’ ಎಂದು ಪ್ರಶಂಸಿದರು. ಲೇಖಕಿ ಭುವನೇಶ್ವರಿ ಹೆಗಡೆ ಮಾತನಾಡಿ, ‘ಸ್ತ್ರೀವಾದವನ್ನು ಕೇಂದ್ರೀಕರಿಸಿ ಮಾನವೀಯತೆಯನ್ನು ವಿಜೃಂಭಿಸುವ ಬರಹಗಳನ್ನು ಲೋಕಾರ್ಪಣೆಯಾದ ನಾಲ್ಕು ಪುಸ್ತಕಗಳಲ್ಲಿ ಕಾಣಬಹುದಾಗಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಧಾ ಶರ್ಮಾ ಚವತ್ತಿ ಅವರ ‘ನಮ್ಮೊಳಗೆ ನಾವು’, ಮಾಲತಿ ಭಟ್ ಅವರ ‘ದೀಪದ ಮಲ್ಲಿಯರು’ ಶೋಭಾ ಹೆಗಡೆ ಅವರ ‘ಅವಲೆಂಭ ಸುಗಂಧ’ ಹಾಗೂ ಸಿ. ಚಿತ್ರ ಅವರ ‘ಅನಾಮಿಕಳ ಅಂತರಂಗ’ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

ಹಿರಿಯ ಪತ್ರಕರ್ತ ತಿಮ್ಮಪ್ಪ ಭಟ್, ಪತ್ರಕರ್ತೆ ಶಾಂತಲಾ, ಯಶೋದಾ ನಾಗರಾಜ್, ಉಮಾದೇವಿ, ಕೃಷಿ ವಿಜ್ಞಾನಿ ಮಂಜುನಾಥ, ಹಿರಿಯ ಪತ್ರಕರ್ತ ನರಸಿಂಹ ಜೋಶಿ, ಪ್ರಕಾಶಕ ಗಣೇಶ, ಲೇಖಕಿ ಸುಧಾ ಶರ್ಮಾ ಚವತ್ತಿ, ಶೋಭಾ ಹೆಗಡೆ, ಸಿ. ಚಿತ್ರಾ ಹಾಗೂ ಮಾಲತಿ ಭಟ್ ಸೇರಿದಂತೆ ಇತರೆ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X