Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ಳಾರೆ ಪಾಲ್ತಾಡು ಗುಡ್ಡೆಯಲ್ಲಿ...

ಬೆಳ್ಳಾರೆ ಪಾಲ್ತಾಡು ಗುಡ್ಡೆಯಲ್ಲಿ ವೃದ್ಧನ ಅಸ್ಥಿಪಂಜರ ಪತ್ತೆ; ಕೊಲೆ ಶಂಕೆ

ಮೃತ ವ್ಯಕ್ತಿಯ ಸಹೋದರ, ಸಹೋದರನ ಪುತ್ರ ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ10 April 2022 6:40 PM IST
share
ಬೆಳ್ಳಾರೆ ಪಾಲ್ತಾಡು ಗುಡ್ಡೆಯಲ್ಲಿ ವೃದ್ಧನ ಅಸ್ಥಿಪಂಜರ ಪತ್ತೆ; ಕೊಲೆ ಶಂಕೆ

ಕಡಬ ತಾಲೂಕಿನ ಪಾಲ್ತಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದ್ದು ಸಾವಿನ ಕುರಿತು ಅವರ ಪುತ್ರಿಯರು ಸಂಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಬೆಳ್ಳಾರೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಪಾಲ್ತಾಡು ಗ್ರಾಮದ ಬೊಳಿಯಾಲ ನಿವಾಸಿ ಸೇಷಪ್ಪ ಪೂಜಾರಿ (76) ಎಂಬವರು ಫೆ.5ರಿಂದ ನಾಪತ್ತೆಯಾಗಿದ್ದಾರೆಂದು ಪೊಲೀಸ್ ದೂರು ನೀಡಲಾಗಿತ್ತು. ಎ. 8 ರಂದು ಸೇಷಪ್ಪ ಪೂಜಾರಿಯವರ ಮೃತದೇಹ ಪಾಲ್ತಾಡು ಸಮೀಪದ ಗೇರು ಅಭಿವೃದ್ಧಿ ನಿಗಮಕ್ಕೆ ಸಂಬಂಧಪಟ್ಟ ಸರಕಾರಿ ಗುಡ್ಡದಲ್ಲಿ ಪತ್ತೆಯಾಗಿತ್ತು. ಸಾವಿನ ಕುರಿತು ಸಂಶಯವಿರುವುದಾಗಿ ಸೇಷಪ್ಪ ಪೂಜಾರಿಯವರ ಪುತ್ರಿ ಶುಭವತಿ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸೇಷಪ್ಪ ಪೂಜಾರಿಯವರು ತನ್ನ ಸಹೋದರ ಬಾಲಕೃಷ್ಣ ಪೂಜಾರಿಯ ಮನೆಯಲ್ಲಿ ಮೂಳೆ ಮುರಿತಕ್ಕೊಳಗಾಗಿ ವಿಶ್ರಾಂತಿ ಚಿಕಿತ್ಸೆಯಲ್ಲಿದ್ದು, ಫೆ.5ರಿಂದ ನಾಪತ್ತೆಯಾಗಿದ್ದು, ಎ.8ರಂದು ಅಪರಾಹ್ನ 3:00 ಗಂಟೆಗೆ ಪಾಲ್ತಾಡಿ ಗ್ರಾಮದ ಬೊಳಿಯಾಲ ಎಂಬಲ್ಲಿ ಗೇರು ನಿಗಮಕ್ಕೆ ಸಂಬಂಧ ಪಟ್ಟ ಗುಡ್ಡ ಜಮೀನಲ್ಲಿ ಸೇಷಪ್ಪ ಪೂಜಾರಿಯವರ ಮೃತದೇಹವು ಕೊಳೆತು ಹೋದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶೇಷಪ್ಪ ಪೂಜಾರಿಯವರು ನಡೆದಾಡಲು ಅಶಕ್ತರಾಗಿದ್ದು ಮನೆಯಿಂದ ದೂರದ ಗುಡ್ಡ ಪ್ರದೇಶಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವ ಅಥವಾ ಆಕಸ್ಮಿಕವಾಗಿ ಬಿದ್ದು ಮೃತಪಡುವ ಸಾಧ್ಯತೆ ಕಡಿಮೆ ಇದೆ ಎಂದು ಶುಭವತಿ ಅವರು ದೂರು ನೀಡಿದ್ದರು. ಬಳಿಕ ನಡೆದ ಬೆಳವಣಿಗೆಯಲ್ಲಿ ಮೃತರ ಇನ್ನೋರ್ವ ಪುತ್ರಿ ಪುಷ್ಪಾವತಿ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿ ತನ್ನ ತಂದೆ ಸೇಷಪ್ಪ ಪೂಜಾರಿ ಅವರನ್ನು ಅವರ ಜಾಗವನ್ನು ಕಬಳಿಸುವ ಹುನ್ನಾರದಲ್ಲಿ ಅಥವಾ ಅವರನ್ನು ಆರೈಕೆ ಮಾಡುವುದನ್ನು ತಪ್ಪಿಸಲು ಕೊಲೆ ಮಾಡಿರುವ ಸಾಧ್ಯತೆ ಇರುವ ಕುರಿತು ದೂರು ನೀಡಿದ್ದರು.

ತನಿಖೆ ನಡೆಸಿರುವ ಪೊಲೀಸರು ಸೇಷಪ್ಪ ಪೂಜಾರಿ ಅವರ ಸಹೋದರ ಬಾಲಕೃಷ್ಣ ಪೂಜಾರಿ ಹಾಗೂ ಅವರ ಮಗ ವೇಣುಗೋಪಾಲ ಎಂಬವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X