Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಟ್-ಕಾಯಿನ್ ಹಗರಣದ ತನಿಖೆಗಾಗಿ ಅಮೆರಿಕದ...

ಬಿಟ್-ಕಾಯಿನ್ ಹಗರಣದ ತನಿಖೆಗಾಗಿ ಅಮೆರಿಕದ ಎಫ್‌ ಬಿಐ ತಂಡ ಆಗಮಿಸಿಲ್ಲ: ಸಿಬಿಐ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ10 April 2022 11:24 PM IST
share
ಬಿಟ್-ಕಾಯಿನ್ ಹಗರಣದ ತನಿಖೆಗಾಗಿ ಅಮೆರಿಕದ ಎಫ್‌ ಬಿಐ ತಂಡ ಆಗಮಿಸಿಲ್ಲ: ಸಿಬಿಐ ಸ್ಪಷ್ಟನೆ

ಹೊಸದಿಲ್ಲಿ: ಕರ್ನಾಟಕದ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ ಬಿಟ್-ಕಾಯಿನ್  ಹಗರಣದ ತನಿಖೆಗಾಗಿ ಅಮೆರಿಕದ ಫೆಡರಲ್ ತನಿಖಾ ದಳ (ಎಫ್ಬಿಐ)ದ ಯಾವುದೇ ತಂಡ ಭಾರತಕ್ಕೆ ಆಗಮಿಸಿಲ್ಲವೆಂದು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ರವಿವಾರ ಸ್ಪಷ್ಟಪಡಿಸಿದೆ. ಬಿಟ್-ಕಾಯಿನ್  ಹಗರಣಕ್ಕೆ ಸಂಬಂಧಿ ತನಿಖೆ ನಡೆಸಲು ಅಮೆರಿಕದ ಎಫ್ಬಿಐ ತನಿಖಾ ದಳವು ಭಾರತಕ್ಕೆ ಆಗಮಿಸಲಿದೆಯೆಂಬ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಹಾಗೂ ಕಾಂಗ್ರೆಸ್ ನಾಯಕರ ಹೇಳಿಕೆಯ ಹಿನ್ನೆಲೆಯಲ್ಲಿ ಸಿಬಿಐ ಈ ಸ್ಟಷ್ಟನೆ ನೀಡಿದೆ.

“ಬಿಟ್-ಕಾಯಿನ್  ಪ್ರಕರಣದ ತನಿಖೆಗಾಗಿ ಎಫ್ಬಿಐ ಭಾರತಕ್ಕೆ ಯಾವುದೇ ತಂಡವನ್ನು ಕಳುಹಿಸಿಲ್ಲ ಅಥವಾ ಭಾರತದಲ್ಲಿ ಈ ವಿಷಯವಾಗಿ ತನಿಖೆ ನಡೆಸುವಂತೆ ಸಿಬಿಐಗೆ ಯಾವುದೇ ಮನವಿಯನ್ನಾಗಲಿ ಮಾಡಿಲ್ಲವೆ. ಅದುದರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಭಾರತದ ಯಾವುದೇ ಇಲಾಖೆಯಿಂದ ಎಫ್ಬಿಐಗೆ ಅನುಮತಿ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಕೇಂದ್ರೀಯ ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಬಿಟ್-ಕಾಯಿನ್  ಹಗರಣದ ಬಗ್ಗೆ ಎಫ್ಬಿಐ ತನಿಖೆ ನಡೆಸುತ್ತಿದೆಯೆಂದು ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ ಬೆನ್ನಲ್ಲೇ ಸಿಬಿಐ ಈ ಸ್ಪಷ್ಟೀಕರಣ ನೀಡಿದೆ. ಈ ಹಗರಣದಲ್ಲಿ ಶುದ್ಧಹಸ್ತರಾಗಿ ಹೊರಬರುವಂತೆಯೇ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸವಾಲೊಡ್ಡಿದ್ದರು. 2020ರಲ್ಲಿ ಡ್ರಗ್ಸ್ ಜಾಲ ಪ್ರಕರಠಣದಲ್ಲಿ ಬಂಧಿತನಾಗಿದ್ದ ಶ್ರೀಕೃಷ್ಣ ರಮೇಶ್ ಯಾನೆ ಶ್ರೀಕಿಯು ಬಿಟ್-ಕಾಯಿನ್  ಹಗರಣದ ರೂವಾರಿಯೆನ್ನಲಾಗಿದೆ. ಶ್ರೀಕಿ ಓರ್ವ ಹ್ಯಾಕರ್ ಆಗಿದ್ದು, ಹಲವಾರು ಅನ್ಲೈನ್ ಅಪರಾಧಗಳನ್ನು ಎಸಗಿದ್ದಾನೆಂದು ಪೊಲೀಸರು ಆರೋಪಿಸಿದ್ದಾರೆ.

ಶ್ರೀಕಿ ತನ್ನ ಅಂತರ್ಜಾಲದಲ್ಲಿ ಬಿಟ್-ಕಾಯಿನ್  ಹಣದ ವಿನಿಮಯಗಳನ್ನು ಹಾಗೂ ಸರಕಾರಿ ವೆಬ್ಸೈಟ್ ಒಂದನ್ನು ಹ್ಯಾಕ್ ಮಾಡುತ್ತಿದ್ದ ಹಾಗೂ ಆತ ಹಲವಾರು ಅನ್ಲೈನ್ ಹಗರಣಗಳಲ್ಲಿ ಶಾಮೀಲಾಗಿದ್ದನೆಂದು ಪೊಲೀಸರು ಆಪಾದಿಸಿದ್ದಾರೆ.

ಬಿಟ್-ಕಾಯಿನ್  ಹಗರಣಕ್ಕೆ ಸಂಬಂಧಿಸಿ ರಾಜ್ಯ ಪೊಲೀಸರು ನಡೆಸುತ್ತಿರುವ ತನಿಖೆಗಳಲ್ಲಿ ನ್ಯೂನತೆಗಳಿವೆ ಹಾಗೂ ಹಲವಾರು ಬಿಜೆಪಿ ನಾಯಕರು ಬಿಟ್-ಕಾಯಿನ್  ರೂಪದಲ್ಲಿ ಲಂಚ ಸ್ವೀಕರಿಸಿದ್ದಾರೆಂದು ರಾಜ್ಯದ ಕಾಂಗ್ರೆಸ್ ನಾಯಕರು ಆಪಾದಿಸಿದ್ದರು.
ಕಾಂಗ್ರೆಸ್ ನಾಯಕ ಹಾಗೂ ಶಾಸಕ ಪ್ರಿಯಾಂಕ ಖರ್ಗೆ ಅವರು ಶುಕ್ರವಾರ ನೀಡಿ ಟ್ವಟ್ಟರ್ ಮೂಲಕ ಬಿಟ್-ಕಾಯಿನ್  ಹಗರಣದ ಬಗ್ಗೆ ತನಿಖೆ ನಡೆಸಲು ಅಮೆರಿಕದ ಎಫ್ಬಿಐ ತಂಡವು ದಿಲ್ಲಿಗೆ ಆಗಮಿಸಿದೆ ಎಂದ ಹೇಳಿಕೆ ನೀಡಿದ್ದರು. ‘‘ಈ ಹಗರಣದಲ್ಲಿ ಬಿಜೆಪಿಯ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ” ಎಂದವರು ಟ್ವೀಟಿಸಿದ್ದರು.

ಇದಾದ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ನಾಯಕ ರಣದೀಪ ಸುರ್ಜೆವಾಲಾ ಅವರು ಬಿಟ್-ಕಾಯಿನ್  ಹಗರಣಕ್ಕೆ ಸಂಬಂಧಿಸಿ ಅಮಿತ್ ಶಾ ಹಾಗೂ ಬೊಮ್ಮಾಯಿ ಅವರಿಗೆ ಹಲವಾರು ಪ್ರಶ್ನೆಗಳನ್ನು ಒಡ್ಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X