Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಪಿಎಂ ಮಹಾಕಾರ್ಯದರ್ಶಿಯಾಗಿ ಸೀತಾರಾಮ್...

ಸಿಪಿಎಂ ಮಹಾಕಾರ್ಯದರ್ಶಿಯಾಗಿ ಸೀತಾರಾಮ್ ಯೆಚೂರಿ ಪುನರಾಯ್ಕೆ‌

ವಾರ್ತಾಭಾರತಿವಾರ್ತಾಭಾರತಿ10 April 2022 11:56 PM IST
share
ಸಿಪಿಎಂ ಮಹಾಕಾರ್ಯದರ್ಶಿಯಾಗಿ ಸೀತಾರಾಮ್ ಯೆಚೂರಿ ಪುನರಾಯ್ಕೆ‌

ಹೊಸದಿಲ್ಲಿ, ಎ.10: ಸಿಪಿಎಂ ಪಕ್ಷದ ಮಹಾ ಕಾರ್ಯದರ್ಶಿಯಾಗಿ ಸೀತಾರಾಮ್ ಯಚೂರಿ ಪುನರಾಯ್ಕೆಗೊಂಡಿದ್ದಾರೆ. ಕಣ್ಣೂರಿನಲ್ಲಿ ಸಿಪಿಎಂ ಪಕ್ಷದ 23ನೇ ರಾಷ್ಟ್ರೀಯ ಸಮಾವೇಶದಲ್ಲಿ ಯಚೂರಿ ಅವರನ್ನು ಮಹಾ ಕಾರ್ಯದರ್ಶಿ ಹುದ್ದೆಗೆ ಸತತ ಮೂರನೆ ಬಾರಿಗೆ ನೇಮಿಸಲಾಗಿದೆ.

ಮಹಾಕಾರ್ಯದರ್ಶಿಯಾಗಿ ಪುನರಾಯ್ಕೆಗೊಂಡ ಬಳಿಕ ಪ್ರತಿನಿಧಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಯಚೂರಿ ಅವರು, ಫ್ಯಾಶಿಸ್ಟ್ ಆರೆಸ್ಸೆಸ್ನ ಕೋಮುವಾದಿ ಹಿಂದುತ್ವ ಕಾರ್ಯಸೂಚಿಯನ್ನು ಅನುಸರಿಸುತ್ತಿರುವ ಬಿಜೆಪಿಯನ್ನು ಏಕಾಂಗಿಯಾಗಿಸುವುದು ಹಾಗೂ ಪರಾಭವಗೊಳಿಸುವುದೇ ಪಕ್ಷದ ಪ್ರಮುಖ ಕೆಲಸವಾಗಿದೆ ಎಂದರು..

ಬಿಜೆಪಿಯನ್ನು ದೂರವಿಡುವುದು ಹಾಗೂ ಪರಾಭವಗೊಳಿಸುವುದು ಮಾನವ ವಿಮೋಚನೆಯೆತ್ತ ನಮ್ಮ ಮುನ್ನಡೆ ಯಾತ್ರೆಗೆ ಅಗತ್ಯ ಮಾತ್ರವಲ್ಲ, ಜಾತ್ಯತೀತ ಪ್ರಜಾತಾಂತ್ರಿಕ ಗಣರಾಜ್ಯವಾಗಿ ಭಾರತದ ಸಂರಕ್ಷಣೆಗೂ ಅವಶ್ಯಕವಾಗಿದೆ ಎಂದರು. ಸಿಪಿಎಂನ ಪಾಲಿಟ್ಬ್ಯುರೋದ 17   ಸದಸ್ಯರು ಹಾಗೂ 85 ಮಂದಿ ಕೇಂದ್ರೀಯ ಸಮಿತಿಯ ಸದಸ್ಯರನ್ನು ಕೂಡಾ ಸಮಾವೇಶದಲ್ಲಿ ಆಯ್ಕೆ ಮಾಡಲಾಯಿತು.

ಪಶ್ಚಿಮ ಬಂಗಾಳದ ಹಿರಿಯ ನಾಯಕ ರಾಮಚಂದ್ರ ಡೋಮೆ ಅವರನ್ನು ಕೇಂದ್ರೀಯ ಸಮಿತಿಯಿಂದ ಪಾಲಿಟ್ ಬ್ಯೂರೋಗೆ ಭಡ್ತಿ ನೀಡಲಾಗಿದೆ ಹಾಗೂ ದಲಿತರಿಗೆ ಪಾಲಿಟ್ಬ್ಯೂರೋದಲ್ಲಿ ಪ್ರಾತಿನಿಧ್ಯ ದೊರೆತಿರುವುದು ಇದೇ ಮೊದಲ ಸಲವಾಗಿದೆ.
ಕೇರಳದ ಎಡರಂಗದ ಸಂಚಾಲಕ ಎ. ವಿಜಯರಾಘವನ್ ಹಾಗೂ ಅಖಿಲ ಭಾರತ ಕಿಸಾನ್ ಸಭಾದ ಅಧ್ಯಕ್ಷ ಅಶೋಕ್ ಧಾವಲೆ ಕೂಡಾ ಸಿಪಿಎಂ ಪಾಲಿಟ್ ಬ್ಯೂರೋಗೆ ಆಯ್ಕೆಯಾಗಿದ್ದಾರೆ. ಈ ಮಧ್ಯೆ ಹಿರಿಯ ನಾಯಕರಾದ ಎಸ್.ರಾಮಚಂದ್ರನ್ ಪಿಳ್ಳೈ, ಬಿಮನ್ ಬೋಸ್ ಹಾಗೂ ಹನ್ನಾನ್ ಮೊಲ್ಲಾ ಅವರಿಗೆ 75 ವರ್ಷ ದಾಟಿರುವುದರಿಂದ, ಅವರನ್ನು ಪಾಲಿಟ್ ಬ್ಯೂರೋದಿಂದ ಕೈಬಿಡಲಾಗಿದೆ. ಆದಾಗ್ಯೂ ಅವರನ್ನು ಕೇಂದ್ರೀಯ ಸಮಿತಿಯ ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.

85 ಸದಸ್ಯ ಬಲದ ಸಿಪಿಎಂ ಪಾಲಿಟ್ಬ್ಯುರೋದಲ್ಲಿ 17 ಮಂದಿ ಹೊಸಬರು ಮತ್ತು ಒಟ್ಟು 17 ಮಂದಿ ಮಹಿಳೆಯರಿದ್ದಾರೆ. ಐದು ದಿನಗಳ ಸಿಪಿಎಂ ರಾಷ್ಟ್ರೀಯ ಸಮಾವೇಶವು ರವಿವಾರ ಕಣ್ಣೂರಿನಲ್ಲಿ ಬೃಹತ್ ರ್ಯಾಲಿಯೊಂದಿಗೆ ಸಮಾಪನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X