ಎ.12ಕ್ಕೆ ಮುಖ್ಯಮಂತ್ರಿ ಮಂಗಳೂರಿಗೆ
ಮಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾು ಎ.12 ಮತ್ತು 13ರಂದು ದ.ಕ. ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಎ.12ರ ಬೆಳಗ್ಗೆ 9ಕ್ಕೆ ಮಣಿಪಾಲದಿಂದ ಮಂಗಳೂರಿಗೆ ಆಗಮಿಸುವರು. ರಾತ್ರಿ 7ರವರೆಗೆ ಬಿಜೆಪಿ ವತಿಯಿಂದ ನಗರದಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು.
ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಹೊರಟು ಬಂಟ್ವಾಳ ತಾಲೂಕಿನ ಪೊಳಲಿಯಲ್ಲಿರುವ ರಾಜರಾಜೇಶ್ವರಿ ದೇವಸ್ಥಾನಕ್ಕೆ 8.15ಕ್ಕೆ ಭೇಟಿ ನೀಡುವರು. 8.45ಕ್ಕೆ ಅಲ್ಲಿಂದ ಹಿಂತಿರುಗಿ ರಾತ್ರಿ9.15ಕ್ಕೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡುವರು.
ಎ.13ರ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಮತ್ತೆ ಬಂಟ್ವಾಳಕ್ಕೆ ತೆರಳಿ 9ರಿಂದ ಮಧ್ಯಾಹ 12.30ರವರೆಗೆ ಬಿಜೆಪಿ ವತಿಯಿಂದ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು.
ಮಧ್ಯಾಹ್ನ 12.30ಕ್ಕೆ ಬಂಟ್ವಾಳದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ, 1.05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪುವರು. 1.40ಕ್ಕೆ ವಿಮಾನದ ಮೂಲಕ ಹೊರಟು ಮಧ್ಯಾಹ್ನ 2.35ಕ್ಕೆ ಬೆಂಗಳೂರು ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ ಪ್ರಕಟನೆ ತಿಳಿಸಿದೆ.