ಹಿಮಾಚಲ ಪ್ರದೇಶದಲ್ಲಿ ತನ್ನ ಎಲ್ಲಾ ಘಟಕಗಳನ್ನು ವಿಸರ್ಜಿಸಿದ ಆಮ್ ಆದ್ಮಿ ಪಕ್ಷ
ಹಲವು ನಾಯಕರು ಬಿಜೆಪಿಗೆ ಪಕ್ಷಾಂತರ ಹಿನ್ನೆಲೆ
![ಹಿಮಾಚಲ ಪ್ರದೇಶದಲ್ಲಿ ತನ್ನ ಎಲ್ಲಾ ಘಟಕಗಳನ್ನು ವಿಸರ್ಜಿಸಿದ ಆಮ್ ಆದ್ಮಿ ಪಕ್ಷ ಹಿಮಾಚಲ ಪ್ರದೇಶದಲ್ಲಿ ತನ್ನ ಎಲ್ಲಾ ಘಟಕಗಳನ್ನು ವಿಸರ್ಜಿಸಿದ ಆಮ್ ಆದ್ಮಿ ಪಕ್ಷ](https://www.varthabharati.in/sites/default/files/images/articles/2022/04/12/331440-1649755219.jpg)
ಶಿಮ್ಲಾ: ಆಮ್ ಆದ್ಮಿ ಪಕ್ಷದ ಕೆಲವು ನಾಯಕರು ಇತ್ತೀಚೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರಿದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಆಪ್ ಪಕ್ಷ ತನ್ನ ಎಲ್ಲಾ ಘಟಕಗಳನ್ನು ಸೋಮವಾರ ವಿಸರ್ಜಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಹಿಮಾಚಲಪ್ರದೇಶದಲ್ಲಿ ನವೆಂಬರ್ನಲ್ಲಿ ಚುನಾವಣೆ ನಡೆಯಲಿದ್ದು, ಪಕ್ಷದ ಹೊಸ ಕಾರ್ಯಕಾರಿ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸತ್ಯೇಂದ್ರ ಜೈನ್ ಟ್ವಿಟರ್ನಲ್ಲಿ ಬರೆದಿದ್ದಾರೆ.
ರಾಜ್ಯ ಘಟಕದ ಅಧ್ಯಕ್ಷ ಅನುಪ್ ಕೇಸರಿ, ಪ್ರಧಾನ ಕಾರ್ಯದರ್ಶಿ ಸತೀಶ್ ಠಾಕೂರ್ ಹಾಗೂ ಉನಾ ಜಿಲ್ಲಾ ಮುಖ್ಯಸ್ಥ ಇಕ್ಬಾಲ್ ಸಿಂಗ್ ಸೇರಿದಂತೆ ಹಿಮಾಚಲ ಪ್ರದೇಶದ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ಬಿಜೆಪಿಗೆ ಶುಕ್ರವಾರ ಸೇರ್ಪಡೆಯಾಗಿದ್ದರು ಎಂದು ಎಎನ್ಐ ವರದಿ ಮಾಡಿದೆ.
ದಿಲ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದರು.
ಅರವಿಂದ ಕೇಜ್ರಿವಾಲ್ ನೇತೃತ್ವದ ಪಕ್ಷದ ರಾಜ್ಯ ಮಹಿಳಾ ವಿಭಾಗದ ಮುಖ್ಯಸ್ಥೆ ಮಮತಾ ಠಾಕೂರ್ ಕೂಡ ಸೋಮವಾರ ದಿಲ್ಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.