ಗಾಂಜಾ ಸೇವನೆ ಆರೋಪ : ಓರ್ವ ಸೆರೆ
ಬಜ್ಪೆ : ಗಾಂಜಾ ಸೇವಿಸಿದ್ದ ಆರೋಪದಲ್ಲಿ ಓರ್ವನನ್ನು ಬಜ್ಪೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತನನ್ನು ಮೂಡುಬಿದಿರೆ ಪುತ್ತಿಗೆ ಗ್ರಾಮದ ವಿದ್ಯಾಗಿರಿ ನಿವಾಸಿ ಶೈಲೇಶ್(26) ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಬಜ್ಪೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ರಾಘವೇಂದ್ರ ಅವರು ಗಸ್ತು ನಡೆಸುತ್ತಿದ್ದಾಗ, ಕಟೀಲು ಕೊಂಡೆಮೂಲ ಗ್ರಾಮದ ಗಿಡಿಗೆರೆ ಎಂಬಲ್ಲಿ ಅಮಲು ಪದಾರ್ಥ ಸೇವಿಸಿದ್ದ ರೀತಿ ಕಂಡು ಬಂದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಿಸಿದಾಗ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಬಳಿಕ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢ ಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story