Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಾ.ಕೆ. ಸುಧಾಕರ್ ಅತಿ ಭ್ರಷ್ಟ ಸಚಿವ,...

ಡಾ.ಕೆ. ಸುಧಾಕರ್ ಅತಿ ಭ್ರಷ್ಟ ಸಚಿವ, ರಾಜೀನಾಮೆ ಪಡೆದು ತನಿಖೆಗೆ ಒಳಪಡಿಸಿ: ಎಎಪಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 April 2022 9:48 PM IST
share
ಡಾ.ಕೆ. ಸುಧಾಕರ್ ಅತಿ ಭ್ರಷ್ಟ ಸಚಿವ, ರಾಜೀನಾಮೆ ಪಡೆದು ತನಿಖೆಗೆ ಒಳಪಡಿಸಿ: ಎಎಪಿ ಆಗ್ರಹ

ಬೆಂಗಳೂರು, ಎ.14: ಡಾ.ಕೆ. ಸುಧಾಕರ್ ಅವರು ರಾಜ್ಯ ಸಚಿವ ಸಂಪುಟದಲ್ಲಿರುವ ಅತಿ ಭ್ರಷ್ಟ ಸಚಿವರಾಗಿದ್ದು, ಆರೋಗ್ಯ ಇಲಾಖೆಯ ಸಾಲುಸಾಲು ಹಗರಣಗಳು ವರದಿಯಾಗುತ್ತಿವೆ. ಆದರೂ ಅವರ ವಿರುದ್ಧ ಮುಖ್ಯಮಂತ್ರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಾಗಾಗಿ ಸಚಿವ ಸುಧಾಕರ್‍ರಿಂದ ರಾಜೀನಾಮೆ ಪಡೆದು ಹಗರಣಗಳ ಕುರಿತು ಸಮಗ್ರ ನ್ಯಾಯಾಂಗ ತನಿಖೆ ಮಾಡಿಸಬೇಕು ಎಂದು ಸರಕಾರವನ್ನು ಆಮ್ ಆದ್ಮಿ ಪಕ್ಷವು ಒತ್ತಾಯಿಸಿದೆ. 

ಗುರುವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಎಎಪಿ ಮುಖಂಡ ಮೋಹನ್ ದಾಸರಿ, “ಆರೋಗ್ಯ ಇಲಾಖೆಯು 2020ರ ಸೆ.23ರಂದು ನೀಡಲಾದ KDL/EQPT/ TND/LE-3 ಭಾಗ HAE/103/2020-21  ಹಾಗೂ KDL/EQPT/ Re-TND/LE-5  ಭಾಗ HA/104/2020-21  ಸಂಖ್ಯೆಯ ಟೆಂಡರ್‍ನಲ್ಲಿ ಅಕ್ರಮವಾಗಿದೆ. ಸಚಿವ ಸುಧಾಕರ್ ಅವರ ಅಣತಿಯಂತೆ, ಬಯೋ ಕೆಮಿಸ್ಟ್ರಿ ಮತ್ತು ಹೆಮಟೋಲಜಿ ಉಪಕರಣಗಳ ಗುತ್ತಿಗೆಯನ್ನು ಸಚಿವರ ಆಪ್ತ ಕಂಪನಿಗೆ ನೀಡಲಾಗಿದೆ. ಈ ಬಗ್ಗೆ ಕಳೆದ ವರ್ಷವೇ ನಾವು ದಾಖಲೆ ಬಿಡುಗಡೆ ಮಾಡಿದ್ದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಆರೋಗ್ಯ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರವಾಗುತ್ತಿದೆ ಎಂಬ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬುಧವಾರ ನೀಡಿದ ಹೇಳಿಕೆಯನ್ನು ಪಕ್ಷವು ಬೆಂಬಲಿಸುತ್ತದೆ ಎಂದು ತಿಳಿಸಿದರು.

ಒಂದು ಅಲ್ಪಾವಧಿ ಗುತ್ತಿಗೆಯನ್ನು ರದ್ದು ಮಾಡಿ ಮರುಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಆದರೂ ಬದಲಾವಣೆ ಮಾಡಿದ್ದಾರೆ. ಟೆಂಡರ್‍ನಲ್ಲಿ ಕೇವಲ ಒಂದೇ ಬಿಡ್ ಬಂದಿದ್ದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ ಎಂದು ಅವರು ಪ್ರಶ್ನಿಸಿದರು.

ಗೋಷ್ಠಿಯಲ್ಲಿ ಎಎಪಿಯ ವಕ್ತಾರ ಉಷಾ ಮೋಹನ್ ಹಾಗೂ ಬೆಂಗಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್ ಉಪಸ್ಥಿತರಿದ್ದರು.

ಹೆಚ್ಚುವರಿ ಕೊಟ್ಟು ಖರೀದಿಸಿದ್ದೇಕೆ?

ಸಿಸ್ಮೆಕ್ಸ್ ಎಂಬ ಕಂಪನಿಯಿಂದ ತ್ರೀ ಪಾರ್ಟ್ ಹೆಮಟಾಲಜಿ ಸೆಲ್ ಕೌಂಟರ್ ಉಪಕರಣವನ್ನು ದೆಹಲಿ ಸರಕಾರವು 1,80,540 ರೂಪಾಯಿಗೆ, ಹಿಮಾಚಲ ಪ್ರದೇಶ ಸರಕಾರವು 1,30,000 ರೂಪಾಯಿಗೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ರೂಪಾಯಿಗೆ ಖರೀದಿಸಿದೆ. ಆದರೆ ನಮ್ಮ ಕರ್ನಾಟಕ ಸರಕಾರವು ಅದೇ ಉಪಕರಣಕ್ಕೆ ಬರೋಬ್ಬರಿ 2,96,180 ರೂಪಾಯಿ ನೀಡಿ ಖರೀದಿಸಿದೆ. ಒಟ್ಟು 1,195 ಉಪಕರಣ ಖರೀದಿಸಲು 19.85 ಕೋಟಿ ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಅದೇ ರೀತಿ ಫೈವ್ ಪಾರ್ಟ್ ಹೆಮಟಾಲಜಿ ಸೆಲ್ ಕೌಂಟರ್‍ಗಳನ್ನು ಸಿಸ್ಮೆಕ್ಸ್ ಕಂಪನಿಯು ಕೇರಳ ಸರಕಾರಕ್ಕೆ 4.60 ಲಕ್ಷ ರೂಪಾಯಿಗೆ ನೀಡಿದೆ. ಆದರೆ ಕರ್ನಾಟಕ ಸರಕಾರವು ಅದೇ ಕಂಪನಿಯಿಂದ 8.35 ಲಕ್ಷ ರೂಪಾಯಿಯಂತೆ ಖರೀದಿಸಿದೆ. ಒಟ್ಟು 165 ಈ ಉಪಕರಣಗಳ ಖರೀದಿಯಿಂದಾಗಿ 6.18 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಿದೆ.

-ಮೋಹನ್ ದಾಸರಿ, ಎಎಪಿ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X