Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಖಾಲಿ ಭೂಮಿಯಲ್ಲಿ ತರಕಾರಿ...

ಮಂಗಳೂರು | ಖಾಲಿ ಭೂಮಿಯಲ್ಲಿ ತರಕಾರಿ ಬೆಳೆದ ಜೈಲು ಹಕ್ಕಿಗಳು!

ಜೈಲು ಅಧೀಕ್ಷಕರ ಪ್ರೋತ್ಸಾಹಕ್ಕೆ ಸಿಕ್ಕಿದೆ ಫಲ

ವಾರ್ತಾಭಾರತಿವಾರ್ತಾಭಾರತಿ15 April 2022 2:56 PM IST
share
ಮಂಗಳೂರು | ಖಾಲಿ ಭೂಮಿಯಲ್ಲಿ ತರಕಾರಿ ಬೆಳೆದ ಜೈಲು ಹಕ್ಕಿಗಳು!

ಮಂಗಳೂರು, ಎ.15: ಜೈಲುಗಳೆಂದರೆ ಅಪರಾಧಿಗಳ ಮನಪರಿವರ್ತನೆಯ ತಾಣ ಮಾತ್ರವಲ್ಲ, ಜೈಲುವಾಸಿಗಳ ಹವ್ಯಾಸಕ್ಕೂ ಪ್ರೋತ್ಸಾಹ ನೀಡಿದರೆ ಫಲ ಪಡೆಯಬಹುದು ಎಂಬುದನ್ನು ದ.ಕ. ಜಿಲ್ಲಾ ಕಾರಾಗೃಹ ಮತ್ತೊಮ್ಮೆ ಸಾಬೀತುಪಡಿಸಿದೆ. ಎರಡು ತಿಂಗಳ ಹಿಂದೆ ನಗರದ ಜೈಲು ಆವರಣದ ಖಾಲಿ ಜಾಗದಲ್ಲಿ ಹಾಕಿದ್ದ ತರಕಾರಿ ಬೀಜಗಳು ಫಲ ನೀಡುತ್ತಿದೆ. ಮೂಲಂಗಿ, ಹಸಿ ಮೆಣಸು, ಬದನೆ, ಮುಳ್ಳುಸೌತೆ ಗಿಡ ಬಳ್ಳಿಗಳು ಈಗಾಗಲೇ ಫಲ ನೀಡಲಾರಂಭಿಸಿವೆ.

ಕೊಡಿಯಾಲ್‌ಬೈಲ್‌ನಲ್ಲಿರುವ ವಿಚಾರಣಾಧೀನ ಕೈದಿಗಳ ಜೈಲಿನ ಮಹಿಳಾ ಬ್ಯಾರಕ್ ಹಿಂದಿನ ಖಾಲಿ ಜಾಗದಲ್ಲಿ ತರಕಾರಿ ಬೆಳೆಯಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಇಲ್ಲಿ ಬೆಳೆಯುತ್ತಿರುವ ತರಕಾರಿಗಳನ್ನು ಜೈಲಿನ ಊಟದಲ್ಲಿ ಬಳಸಲಾಗುತ್ತಿದ್ದು, ಹೆಚ್ಚು ಪ್ರಮಾಣದಲ್ಲಿ ಬೆಳೆ ಬಂದಲ್ಲಿ ಅದನ್ನು ಮಾರುಕಟ್ಟೆಗೆ ಒದಗಿಸುವ ಬಗ್ಗೆಯೂ ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಚಿಂತನೆ ನಡೆಸಿದ್ದಾರೆ.

ಖಾಲಿ ಬಿದ್ದಿದ್ದ ಜಾಗವನ್ನು ಸಮತಟ್ಟುಗೊಳಿಸಿ, ಮಣ್ಣನ್ನು ಹದಗೊಳಿಸಿ ಅಲ್ಲಿ ಬೀಜ ತರಕಾರಿ ಬೀಜ ಬಿತ್ತಿ ಬೆಳೆ ಬೆಳೆಯುವ ಕಾರ್ಯಕ್ಕೆ ಬಿ.ಟಿ. ಓಬಳೇಶಪ್ಪ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಇಂದು ಖಾಲಿ ಜಾಗದಲ್ಲಿ ಬೆಳೆ ತೆಗೆಯಲು ಸಾಧ್ಯವಾಗಿದೆ. ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಲ್ಲಿ ಆಸಕ್ತರನ್ನು ಈ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಲಾಗಿದ್ದು, ಎರಡು ತಿಂಗಳ ಹಿಂದೆ ಟೊಮೊಟೋ, ಮೆಣಸು, ಮುಳ್ಳುಸೌತೆ, ಬೂದು ಕುಂಬಳ ಸೇರಿದಂತೆ ಹಲವು ಬಗೆಯ ತರಕಾರಿ ಬೀಜಗಳನ್ನು ಬಿತ್ತಲಾಗಿತ್ತು. ಇದರ ಜೊತೆಯಲ್ಲೇ ಸುಮಾರು 100ರಷ್ಟು ಬಾಳೆ ಗಿಡಗಳನ್ನು ನೆಡಲಾಗಿದೆ. ಈ ಜಾಗವನ್ನು ಸಮತಟ್ಟುಗೊಳಿಸಿ, ಬೀಜ ಬಿತ್ತುವ ಕಾರ್ಯಕ್ಕೂ ಮುನ್ನ ಜೈಲು ಅಧೀಕ್ಷಕರು ಆಸಕ್ತ ಜೈಲುವಾಸಿಗಳಿಗೆ ನಿವೃತ್ತ ಕೃಷಿ ಅಧಿಕಾರಿ ಜಗನ್ನಾಥ್‌ರವರಿಂದ ತರಬೇತಿಯನ್ನೂ ಕೊಡಿಸಿದ್ದಾರೆ. ಈ ಮೂಲಕ ಅಡಿಕೆಯಿಂದ ಸಸಿಗಳನ್ನು ಮಾಡುವ ಬಗ್ಗೆಯೂ ಜೈಲು ವಾಸಿಗಳಿಗೆ ಕಲಿಸಲಾಗಿದ್ದು, ಅಡಿಕೆ ಸಸಿಗಳನ್ನೂ ಜೈಲಿನಲ್ಲಿ ಬೆಳೆಸಲಾಗಿದೆ.

‘‘ಅಡಿಕೆ ಸಸಿಗಳು ಚೆನ್ನಾಗಿ ಬಂದಿದ್ದು, ಅವುಗಳ ಮಾರಾಟಕ್ಕೂ ಕ್ರಮ ವಹಿಸಲಾಗುತ್ತಿದೆ. ಈಗಾಗಲೇ ಆವರಣದಲ್ಲಿ ಬೆಳೆಯುವ ತರಕಾರಿಗಳನ್ನು ಜೈಲಿನಲ್ಲಿ ತಯಾರಿಸುವ ಊಟದಲ್ಲಿ ಸಾಂಬಾರಿಗೆ ಬಳಸಲಾಗುತ್ತಿದೆ’’ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕರು ಬಿ.ಟಿ.ಓಬಳೇಶಪ್ಪ ತಿಳಿಸಿದ್ದಾರೆ.

ಇದರ ಜತೆಗೆ ಕೌಶ್ಯಲಾಭಿವೃದ್ಧಿ ತರಬೇತಿ ಪಡೆದಿರುವ ಮಹಿಳೆಯರನ್ನು ಒಳಗೊಂಡ ಜೈಲುವಾಸಿಗಳು ಹೂಮಾಲೆ ತಯಾರಿ, ಫ್ಲೈವುಡ್ ಕಟ್ಟಿಂಗ್‌ಗಳಿಂದ ಕರಕುಶಲ ವಸ್ತುಗಳ ತಯಾರಿ ಕಾರ್ಯವನ್ನೂ ಮಾಡುತ್ತಿದ್ದಾರೆ.

ಯಾವುದೋ ಅಪರಾಧ ಕೃತ್ಯಗಳ ಮೂಲಕ ಜೈಲುವಾಸಿಗಳಾಗಿರುವವರಿಗೆ ಮನಪರಿರ್ವತನೆಯ ಜತೆಗೆ ಮುಂದೆ ಜೈಲಿನಿಂದ ಬಿಡುಗಡೆಯಾಗುವ ಸಂದರ್ಭ ಕೌಶಲ್ಯಗಳ ಜತೆಗೆ ತಮ್ಮ ಜೀವನಕ್ಕೆ ನೆರವಾಗುವಂತೆ ಈ ರೀತಿಯ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಅವರನ್ನು ತಯಾರುಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಅವರ ಕುಟುಂಬಕ್ಕೂ ಒಂದಿಷ್ಟು ನೆರವಾಗಲಿದೆ ಎಂಬುದು ನಮ್ಮ ಆಶಯ ಎನ್ನುತ್ತಾರೆ ಓಬಳೇಶಪ್ಪ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X