Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಂಪ್ರದಾಯಿಕ ಕುಂಬಾರಿಕೆ ಕೃತಿಗಳ...

ಸಾಂಪ್ರದಾಯಿಕ ಕುಂಬಾರಿಕೆ ಕೃತಿಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 April 2022 7:43 PM IST
share
ಸಾಂಪ್ರದಾಯಿಕ ಕುಂಬಾರಿಕೆ ಕೃತಿಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಉದ್ಘಾಟನೆ

ಮಂಗಳೂರು : ’ಸ್ಪಿನ್ನರ್ಸ್ ಆಫ್ ಕ್ಲೇ ಆನ್ ವೀಲ್’-ಸಾಂಪ್ರದಾಯಿಕ ಕುಂಬಾರಿಕೆ ಕೆಲಸಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಮತ್ತು ಮಾರಾಟವನ್ನು ನಗರದ ಬಲ್ಲಾಲ್‌ ಬಾಗ್‌ನ ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಶನಿವಾಸ ಉದ್ಘಾಟಿಸಲಾಯಿತು.

ಇಂಟಾಕ್‌ನ ಮಂಗಳೂರು ಘಟಕವು ಆರ್ಟ್ ಕನರಾ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿರುವ ಈ ಪ್ರದರ್ಶನ-ಮಾರಾಟ ಮೇಳೆವು ಎ.೧೮ರವರೆಗೆ ಪೂ.೧೧ರಿಂದ ಸಂಜೆ ೭ರವರೆಗೆ ನಡೆಯಲಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್ ಮಾತನಾಡಿ ಸರಕಾರವು ಕ್ಲಸ್ಟರ್‌ಗಳನ್ನು ಮಾಡಲು ಮತ್ತು ಕುಶಲಕರ್ಮಿಗಳಿಗೆ ಸಾಮಾನ್ಯ ಸೌಲಭ್ಯಗಳನ್ನು ಒದಗಿಸಲು ಹಾಗೂ ಮಾರುಕಟ್ಟೆಗೆ ಸಹಾಯ ಮಾಡುವ ಯೋಜನೆಗಳನ್ನು ಹೊಂದಿದೆ ಎಂದರು.

ಇಂಟಾಕ್ ಮಂಗಳೂರು ಘಟಕದ ಸಂಚಾಲಕ ಸುಭಾಶ್ಚಂದ್ರ ಬಸು ಮಾತನಾಡಿ ದ.ಕ.ಜಿಲ್ಲೆಯ ಎಲ್ಲಾ ಕುಶಲಕರ್ಮಿಗಳ ಡೈರೆಕ್ಟರಿಯನ್ನು ರಚಿಸುವುದು ಉದ್ದೇಶವಿದೆ. ಈಗಾಗಲೆ ೮೯ ಕುಂಬಾರರನ್ನು ಗುರುತಿಸಿದ್ದೇವೆ ಮತ್ತು ೪೮ ಕುಂಬಾರರ ವಿವರವಾದ ದಾಖಲಾತಿ ಮಾಡಲಾಗಿದೆ. ಮಡಕೆಗಳ ತಯಾರಿಕೆಯ ಪ್ರತಿ ಹಂತವನ್ನು ಗುರುತಿಸಲಾಗಿದೆ ಎಂದರು.

ಪ್ರಸ್ತುತ ೫೦ರಿಂದ ೭೦ ವರ್ಷ ಪ್ರಾಯದೊಳಗಿನ ಕುಂಬಾರರು ಇನ್ನೂ ಕುಂಬಾರಿಕೆ ಅಭ್ಯಾಸ ಮಾಡುತ್ತಿದ್ದಾರೆ.  ೩೦ ವರ್ಷ ವಯಸ್ಸಿನ ಸುಮಾರು ೫ ಯುವಕರು ಮಾತ್ರ ಇದ್ದಾರೆ. ಹೆಚ್ಚಿನ ಸ್ಥಳೀಯರು (ಕುಲಾಲ/ಮೂಲ್ಯ ಸಮುದಾಯ) ಕುಂಬಾರಿಕೆ ಅಭ್ಯಾಸ ಮಾಡುತ್ತಿಲ್ಲ ಅಧಿಕ ಮಂದಿ ಶೃಂಗೇರಿ ಮತ್ತಿತರ ಭಾಗಗಳಿಂದ ವಲಸೆ ಬಂದಿದ್ದಾರೆ ಎಂದು ಸುಭಾಶ್ಚಂದ್ರ ಬಸು ಹೇಳಿದರು.

ಕುಳಾಯಿ ಮನೋಜ್ ಕುಲಾಲ್ ಮಾತನಾಡಿ ಉರುವಲು ಮತ್ತು ಮಣ್ಣಿನಂತಹ ಕಚ್ಚಾ ವಸ್ತುಗಳನ್ನು ಖರೀದಿಸಲು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿದರಲ್ಲದೆ ಸುಲಭವಾಗಿ ಮಣ್ಣನ್ನು ಸಂಗ್ರಹಿಸಲು ಅಗತ್ಯರುವಿವ ಭೂಮಿಯನ್ನು ಮೀಸಲಿಡಬೇಕು ಎಂದು  ಒತ್ತಾಯಿಸಿದರು.

ಬೆಳ್ತಂಗಡಿಯ ಜಿತೇಶ್ ಕುಂಬಾರ ಮಾತನಾಡಿ ಮಂಗಳೂರು, ಕಾಸರಗೋಡು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಡಿಕೆಗಳಿಗೆ ಉತ್ತಮ ಬೇಡಿಕೆಯಿದೆ. ಆದರೆ ಉತ್ಪಾದನೆಯು ಕಡಿಮೆ ಇದೆ. ಇಳಂತಿಲ ಗ್ರಾಮದಲ್ಲಿರುವ ಮೂವತ್ತು ಕುಂಬಾರರ ಕುಟುಂಬಗಳಲ್ಲಿ ಮೂರು ಕುಟುಂಬಗಳು ಮಾತ್ರ ಕುಂಬಾರಿಕೆಯನ್ನು ಅಭ್ಯಾಸ ಮಾಡುತ್ತಿವೆ. ಸರಕಾರ ಈ ಹಿಂದೆ ತರಬೇತಿ ಮತ್ತು ಸಮುದಾಯ ಕಾರ್ಯಸ್ಥಳಕ್ಕಾಗಿ ೫ ಲಕ್ಷ ರೂ. ನೀಡುತ್ತಿತ್ತು, ಆದರೆ ಪ್ರಸ್ತುತ ಯಾವುದೇ ಬೆಂಬಲವಿಲ್ಲ ಎಂದು ವಿಷಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X