Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 20...

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ.ಬಿಡುಗಡೆ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ17 April 2022 12:20 AM IST
share

ಬಳ್ಳಾರಿ, ಎ. 16: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 20ಕೋಟಿ ರೂ.ಗಳನ್ನು ಕೆಕೆಆರ್‍ಡಿಬಿ ವಿವೇಚನಾ ನಿಧಿಯಿಂದ ಕೂಡಲೇ ಬಿಡುಗಡೆ ಮಾಡುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಸಿಎಂ ವಿವೇಚನಾ ನಿಧಿಯಿಂದ 80 ಕೋಟಿ ರೂ.ಗಳ ಬೇಡಿಕೆಯಲ್ಲಿ ಉಳಿದ ಮೊತ್ತವನ್ನು ಹಂತ ಹಂತವಾಗಿ ನೀಡಲಾಗುವುದು. 2-3 ವಿಭಾಗಗಳನ್ನು ಮಾಡಿ ಅವುಗಳನ್ನು ಪೂರೈಸುವುದು. ವಿವಿಗಳು ಕ್ಯಾಂಪಸ್ಸಿಗೆ ಸೀಮಿತವಾಗಿರಬಾರದು. ಕಾಲ ಬದಲಾವಣೆಯಾಗಿದೆ, ಜಾಗತಿಕರಣ, ಉದಾರಿಕರಣವಾಗಿದೆ. ಕನ್ನಡ ಮುಚ್ಚಿಡುವ ವಸ್ತುವಲ್ಲ, ಬದಲಿಗೆ ಬಿಚ್ಚಿಡುವ ವಸ್ತು. ಬಹಳಷ್ಟು ಜನ ಸಾಹಿತಿಗಳು ಅದನ್ನು ಮುಚ್ಚಿಡುವ ಪ್ರಯತ್ನದಲ್ಲಿಯೆ ಬಂಡಾಯ ಸಾಹಿತ್ಯ ಹುಟ್ಟಿರುವುದು. ತುಳಿತಕ್ಕೆ ಒಳಗಾದವರ ಧ್ವನಿ ಬಂಡಾಯ ಸಾಹಿತ್ಯ ಎಂದು ಹೇಳಿದರು. 

ಸಂಶೋಧನಾ ಕ್ಷೇತ್ರದಲ್ಲಿಯೂ ಕನ್ನಡ ಬಳಕೆಯಾಗಬೇಕು: ‘ಕನ್ನಡ ನಾಡು, ನುಡಿ, ಸಂಸ್ಕøತಿಗೆ ಮಹತ್ವದ ಕೊಡುಗೆ ನೀಡುತ್ತದೆ. ಭಾಷೆಯಿಂದ ಭಾವನೆ ಬಂತು. ಹೀಗಾಗಿ ಭಾಷೆಯಿಲ್ಲದೆ ನಮ್ಮ ಬದುಕೇ ಇಲ್ಲ. ಕನ್ನಡ ನಾಡನ್ನು ಸುಸಂಸ್ಕøತ ರಾಜ್ಯವನ್ನಾಗಿ ಮಾಡುವ ಹಂಬಲವೂ ಕನ್ನಡ ಭಾಷೆಯಿಂದಲೇ ಬಂದಿದೆ. ಬದುಕನ್ನು ಹಾಗೂ ವ್ಯಕ್ತಿತ್ವವನ್ನು ರೂಪಿಸುವ ಕನ್ನಡ ಭಾಷೆಯನ್ನು ನಿತ್ಯದ ವ್ಯವಹಾರದ ಬಳಕೆಗೆ ಮಾತ್ರ ಸೀಮಿತಗೊಳಿಸಿದ್ದು, ಭಾಷೆಯ ಮೌಲ್ಯವನ್ನು ಕಡಿಮೆ ಮಾಡಲಾಗಿದೆ. ಈ ಮೌಲ್ಯವನ್ನು ಹೆಚ್ಚಿಸಬೇಕಾದರೆ ಭಾಷೆಯ ಬೆಳವಣಿಗೆ, ಸಂಶೋಧನೆ ಹಾಗೂ ತಂತ್ರಜ್ಞಾನ ಅಳವಡಿಕೆಗೆ ಒತ್ತು ನೀಡಬೇಕು. ಯಾವುದೇ ರಂಗದಲ್ಲಿ ಕನ್ನಡ ಹಿಂದುಳಿಯಬಾರದು. ಸಂಶೋಧನಾ ಕ್ಷೇತ್ರದಲ್ಲಿಯೂ ಕನ್ನಡ ಬಳಕೆಯಾಗಬೇಕು ಎಂದು ಸಲಹೆ ನೀಡಿದರು.
ಎಂ.ಪಿ.ಪ್ರಕಾಶ್ ಹೆಸರಿನಲ್ಲಿ ಸಂಶೋಧನಾ ಕೇಂದ್ರ: ‘ಹಂಪಿ ವಿಶ್ವವಿದ್ಯಾಲಯಲ್ಲಿ ಭಾಷೆ ಮತ್ತು ಸಂಸ್ಕøತಿ ಎರಡೂ ಬೆಸೆದುಕೊಂಡು ಸಂಶೋಧನೆ ನಡೆಯಬೇಕು. ವಿಭಿನ್ನ ವಿಚಾರಣೆಗಳ ಬಗ್ಗೆ ಸಂಶೋಧನೆಗಳು ನಡೆಯಬೇಕು. ಸ್ಥಾಪಿತವಾಗಿರುವ ಹಾದಿಯ ಮೂಲಕ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ. ಹೊಸ ಚಿಂತನೆಯ ವಿಭಿನ್ನ ಧ್ವನಿಗಳಿಗೂ ಅವಕಾಶವಿರಬೇಕು. ಈ ವಿವಿ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಬೇಕು. 10 ಕೇಂದ್ರಗಳಿಗೆ ವಿಶೇಷ ಅನುದಾನ ನೀಡಿ, ಒಂದು ಕೇಂದ್ರ ಮೂರು ಜಿಲ್ಲೆಗಳನ್ನು ತೆಗೆದುಕೊಂಡು, ಕನ್ನಡ ಹಂಪಿ ವಿವಿ ಚಟುವಟಿಕೆಗಳನ್ನು ಭಾಷೆ, ಸಾಹಿತ್ಯ ಮತ್ತು ಜನರ ಭಾವನೆಗಳನ್ನು ಅರಿತು ಕೆಲಸ ಮಾಡುಬೇಕು. 10 ಕೇಂದ್ರಗಳು ಚಟುವಟಿಕೆಗಳು ಪೂರ್ತಿಯಾಗಿ ಮಾಡಬೇಕು. ಎಂ.ಪಿ.ಪ್ರಕಾಶ್ ಅವರ ಹೆಸರಿನಲ್ಲಿ ಸಂಶೋಧನಾ ಕೇಂದ್ರ ಮಾಡಲಾಗುವುದು. ಈ ಯೋಜನೆಗೆ ವಿಶೇಷ ಸಹಾಯವನ್ನು ಸರಕಾರದಿಂದ ನೀಡಲಾಗುವುದು ಎಂದು ಪ್ರಕಟಿಸಿದರು.

‘ಜ್ಞಾನವನ್ನು ಬಳಕೆ ಮಾಡಿ ವಿವಿಧ ರಂಗದಲ್ಲಿ ವಿದ್ಯಾರ್ಥಿಗಳು ಬಳಸಿಕೊಂಡರೆ ದೊಡ್ಡ ಪ್ರಮಾಣ ಅನುಕೂಲವಾಗಲಿದೆ. ಈ ಬಗ್ಗೆ ಹೊಸ ಚಿಂತನೆ ಮಾಡಬೇಕು. ಯುವಜನತೆಯ ಕೈಯಲ್ಲಿ ಕನ್ನಡದ ಅತ್ಯುತ್ತಮ ಭವಿಷ್ಯ ಅಡಗಿದೆ. ಕೇವಲ ನಾಗರಿಕತೆಯ ಬೆಳವಣಿಗೆಗೆ ನಮ್ಮ ಸಂಸ್ಕೃತಿಯ ಬೆಳವಣಿಗೆ ಎನ್ನುವ ಕಲ್ಪನೆ ತಪ್ಪು ಎನ್ನುವುದನ್ನು ಈ ವಿಶ್ವವಿದ್ಯಾಲಯ ಪದೇ ಪದೇ ಬೇರೆ ಬೇರೆ ಪ್ರಸಂಗಗಳ ಮೂಲಕ ತೋರಿಸಿಕೊಟ್ಟಿದೆ. ನಮ್ಮ ಭಾಷೆ ಮತ್ತು ಸಂಸ್ಕøತಿ ಬಹಳ ಗಟ್ಟಿಯಾಗಿದೆ. ಕನ್ನಡಿಗನೊಬ್ಬ ಏನಾಗಿದ್ದ, ಈಗ ಏನಾಗಿದ್ದಾನೆ, ಏನಾಗಬೇಕು, ವಿಶ್ವದ ಭೂಪಟದಲ್ಲಿ ಕನ್ನಡ ಏನಾಗಿದೆ, ಕನ್ನಡಿಗನ ಸ್ಥಾನ ಏನು ಎನ್ನುವ ತೀರ್ಮಾನಗಳನ್ನು ಈ ವಿಶ್ವವಿದ್ಯಾಲಯದಲ್ಲಿ ಆಗಬೇಕು. ಕನ್ನಡ ಬಹಳ ಶ್ರೀಮಂತ ಭಾಷೆ, ಕನ್ನಡವನ್ನು ಪ್ರೀತಿ ಮಾಡಿ ನಿಮ್ಮ ಸಂಶೋಧನೆಗೆ ನೂರಾರು ಅವಕಾಶಗಳನ್ನು ಕೊಡುತ್ತದೆ ಎಂದು ವಿವರಣೆ ನೀಡಿದರು.   

ಕನ್ನಡ ವಿವಿಗೆ ಜೀವಂತಿಕೆ ಇದೆ: ‘ನನ್ನ ಪ್ರಕಾರ ಒಂದು ಜೀವಂತಿಕೆ ಇರುವ ವಿಶ್ವವಿದ್ಯಾಲಯ. ಉತ್ಕೃಷ್ಟವಾದ ಅವಕಾಶ ತಮಗೆ ಸಿಕ್ಕಿದೆ. ನಿಮ್ಮ ಯೋಜನೆ ಮತ್ತು ಯೋಚನೆಗಳನ್ನು ಬದಲಾಯಿಸುವ ಅಗತ್ಯವಿದೆ. ಕನ್ನಡದ ಇತಿಹಾಸ ಮತ್ತು ಕನ್ನಡದ ಭವಿಷ್ಯ ಎರಡನ್ನೂ  ನಿರ್ಣಯ ಮಾಡಬೇಕಾದರೆ ವರ್ತಮಾನದಲ್ಲಿ ಏನಿದೆ ಎಂದು ತಿಳಿದುಕೊಳ್ಳಬೇಕು. ಇದೊಂದು ವಿಶಿಷ್ಟಪೂರ್ಣ ಸ್ಥಳ' ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಎಂ.ಪಿ.ಪ್ರಕಾಶ ಕೊಡುಗೆ ಅಪಾರ: ‘ಕನ್ನಡ ವಿಶ್ವವಿದ್ಯಾಲಯ ಸ್ಥಾಪನೆಗೆ ಮಾಜಿ ಸಚಿವ ಎಂ.ಪಿ.ಪ್ರಕಾಶ್ ಅವರು ಬಹಳಷ್ಟು ಪರಿಶ್ರಮ ಪಟ್ಟಿದ್ದಾರೆ. ಸುಮಾರು ಏಳೆಂಟು ವರ್ಷ ಚಿಂತನೆ ಮಾಡಿ, ಈ ಸ್ಥಳ ಇಷ್ಟು ಸುಂದರವಾಗಿ ನಿರ್ಮಿಸಲು ಪರಿಕಲ್ಪನೆ ಹುಟ್ಟಿತು. ಡಾ.ಚಂದ್ರಶೇಖರ ಕಂಬಾರರು ಕನ್ನಡ ವಿವಿ ಮೊದಲ ಕುಲಪತಿಗಳು ನನಗೆ ಮಾರ್ಗದರ್ಶಕರೂ ಆತ್ಮೀಯರೂ ಹೌದು' ಎಂದು ಅವರು ಸ್ಮರಿಸಿದರು. 

ಕನ್ನಡ ಹಲವಾರು ಆಯಾಮಗಳಲ್ಲಿವೆ. ಜಾನಪದದಲ್ಲಿ, ದಾಸ ಸಾಹಿತ್ಯ, ವಚನ ಸಾಹಿತ್ಯ, ಹಳೆಗನ್ನಡ, ನವಗನ್ನಡ, ವೈಚಾರಿಕ, ವ್ಯವಹಾರಿಕ, ಬಂಡಾಯ ಮುಂತಾದ ಪ್ರಾಕಾರಗಳಲ್ಲಿದೆ. ಇವೆಲ್ಲವೂ ವಿವಿಯ ಒಂದು ಪ್ರಮುಖ ಅಂಗವಾಗಬೇಕು, ಆಗ ಇಡೀ ವಿಶ್ವಕ್ಕೆ ವಿವಿಯ ಚಟುವಟಿಕೆ ಪರಿಚಯವಾಗುತ್ತದೆ. ಕನ್ನಡ ನಾಡಿನಲ್ಲಿ, ಜಾನಪದ, ಕನ್ನಡ ಸಂಗೀತ, ಸಾಂಸ್ಕøತಿಕ ವಿಶ್ವವಿದ್ಯಾಲಯ ಇದೆ. ವಿವಿಗೆ ದೊಡ್ಡ ಶಕ್ತಿಯನ್ನು ತುಂಬುವ ಅವಕಾಶ ಒದಗಿಬಂದಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ, ಸಾರಿಗೆ ಸಚಿವ ಬಿ.ಶ್ರೀರಾಮುಲು, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಸೋಮಶೇಖರ ರೆಡ್ಡಿ, ಹಂಪಿ ಕನ್ನಡ ವಿವಿ ಕುಲಪತಿ ಡಾ.ರಮೇಶ್ ಸೇರಿದಂತೆ ವಿವಿ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X