ಉಡುಪಿ: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ
ಡಿಸಿ, ಸಿಇಓರಿಂದ ಸೈಕಲ್ ಸವಾರಿ
![ಉಡುಪಿ: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಉಡುಪಿ: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ](https://www.varthabharati.in/sites/default/files/images/articles/2022/04/17/332041-1650200139.jpg)
ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ., ವೈದ್ಯಕೀಯ ಪ್ರಕೋಷ್ಠ, ರೋಟರಿ ಕ್ಲಬ್ ಉಡುಪಿ ಮಣಿಪಾಲ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಭಾರತೀಯ ದಂತ ವೈದ್ಯಕೀಯ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಸೈಕಲ್ ಜಾಥವನ್ನು ಹಮ್ಮಿಕೊಳ್ಳ ಲಾಗಿತ್ತು.
ನಮ್ಮ ಪೃಥ್ವಿ ನಮ್ಮ ಆರೋಗ್ಯ ಎಂಬ ಘೋಷಣೆಯೊಂದಿಗೆ ಅಜ್ಜರಕಾಡು ಹುತಾತ್ಮರ ಸ್ಮಾರಕದಿಂದ ನಗರದ ಬೋರ್ಡ್ ಹೈಸ್ಕೂಲ್ ಆವರಣದವರೆಗೆ ಆಯೋಜಿಸಲಾದ ಈ ಜಾಥಾಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರಬೇಕಾಗಿದೆ. ಆದುದರಿಂದ ಸೈಕಲ್ ಸವಾರಿಯಂತಹ ವ್ಯಾಯಮ ಅತ್ಯುತ್ತಮವಾದುದು ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ನವೀನ್ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ ಎಚ್., ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ರೋಟರಿ ಜಿಲ್ಲಾ ಗವರ್ನರ್ ಡಾ.ಜೆ.ಗೌರಿ, ಸಹಾಯಕ ಗವರ್ನರ್ ಡಾ.ಸುರೇಶ್ ಶೆಣೈ, ವೈದ್ಯಕೀಯ ಪ್ರಕೋಷ್ಠದ ಪದಾಧಿಕಾರಿಗಳಾದ ಡಾ.ವಿಜಯೇಂದ್ರ ವಸಂತ್, ಡಾ.ರಾಮಚಂದ್ರಪ ಕಾಮತ್, ಡಾ.ವಿದ್ಯಾಧರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಡಿಸಿ, ಸಿಇಓರಿಂದ ಸೈಕಲ್ ಸವಾರಿ!
ಸೈಕಲ್ ಜಾಥಕ್ಕೆ ಚಾಲನೆ ನೀಡಿದ ಬಳಿಕ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ವತಃ ತಾವೇ ಒಟ್ಟು ಎಂಟು ಕಿ.ಮೀ. ದೂರ ಸೈಕಲ್ ಸವಾರಿ ಮಾಡಿಕೊಂಡು ಬಂದು ಮಾದರಿ ಎನಿಸಿದರು.
ಜಾಥವು ಅಜ್ಜರಕಾಡಿನಿಂದ ಜೋಡುಕಟ್ಟೆ, ಕೆ.ಎಂ.ಮಾರ್ಗ, ಸರ್ವಿಸ್ ಮತ್ತು ಸಿಟಿ ಬಸ್ ನಿಲ್ದಾಣ, ಕಡಿಯಾಳಿ, ಎಂಜಿಎಂವರೆಗೆ ಸಾಗಿ ವಾಪಾಸ್ಸು ಬಂದು ಸರ್ವಿಸ್ ಬಸ್ ನಿಲ್ದಾಣದ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಸಮಾಪ್ತಿ ಗೊಂಡಿತು. ಇವರೊಂದಿಗೆ ಜಿಲ್ಲಾಧಿಕಾರಿಗಳ ಐದು ವರ್ಷದ ಪುತ್ರಿ ಕೂಡ ಸೈಕಲ್ ಸವಾರಿ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.