Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗಡಿನಾಡ ಜನರಿಗೆ ಧ್ವನಿಯಾದ...

ಗಡಿನಾಡ ಜನರಿಗೆ ಧ್ವನಿಯಾದ ದ.ಕ.ಜಿಲ್ಲಾಧಿಕಾರಿಯ ಗ್ರಾಮ ವಾಸ್ತವ್ಯ

ವಾರ್ತಾಭಾರತಿವಾರ್ತಾಭಾರತಿ17 April 2022 10:06 PM IST
share
ಗಡಿನಾಡ ಜನರಿಗೆ ಧ್ವನಿಯಾದ ದ.ಕ.ಜಿಲ್ಲಾಧಿಕಾರಿಯ ಗ್ರಾಮ ವಾಸ್ತವ್ಯ

ಮಂಗಳೂರು (ಸುಳ್ಯ ಪದವು); ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರ ಈ ಬಾರಿಯ ಗ್ರಾಮ ವಾಸ್ತವ್ಯ ಜಿಲ್ಲೆಯ ಕಾರ್ಯ ನಿರತ ಪತ್ರಕರ್ತರ ಸಹಯೋಗದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಪ್ರದೇಶದ ಸುಳ್ಯಪದವಿನಲ್ಲಿ ಕಂದಾಯ ಇಲಾಖೆಯ ಜೊತೆ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಬೆಳಗ್ಗೆ 10ಗಂಟೆ ಯಿಂದ ರಾತ್ರಿ 10ಗಂಟೆಯವರೆಗೆ  ವೈಶಿಷ್ಟ್ಯತೆ ಗಳೊಂದಿಗೆ ನಡೆಯಿತು.

ಗಡಿ ಪ್ರದೇಶದ ನಾಗರಿಕರ ಹಲವಾರು ಬೇಡಿಕೆಗಳು, ಸಮಸ್ಯೆಗಳನ್ನು ನೇರವಾಗಿ ಜಿಲ್ಲಾಧಿಕಾರಿಯೊಂದಿಗೆ ಹೇಳಿಕೊಳ್ಳಲು ವೇದಿಕೆಯಾಯಿತು.

ಗಡಿ ನಾಡ ಜನರ ಸಮಸ್ಯೆಗಳನ್ನು ಆಲಿಸಿ ಶಾಲೆಯಲ್ಲಿಯೇ ವಾಸ್ತವ್ಯ ಹೂಡಿದ ಜಿಲ್ಲಾಧಿಕಾರಿ:

ಬಡಗನ್ನೂರು ಗ್ರಾಮ ಪಂಚಾಯತ್ ನ ಜನರ ಸಮಸ್ಯೆ ಗಳನ್ನು ಆಲಿಸಿದ ದ.ಕ ಜಿಲ್ಲಾಧಿಕಾರಿಯ ಗ್ರಾಮ ವಾಸ್ತವ್ಯ ಗಡಿಭಾಗದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜನರ ಅದಾಲತ್ ರೀತಿಯಲ್ಲಿ ಬೆಳಗ್ಗಿನಿಂದ ರಾತ್ರಿ ವರೆಗೆ ನಡೆಯಿತು. 169 ಕ್ಕೂ ಅಧಿಕ ಮಂದಿ ಸಮಸ್ಯೆ ಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ ಅರ್ಜಿಗಳಲ್ಲಿ 80ಕ್ಕೂ ಹೆಚ್ಚು ಅರ್ಜಿಗಳನ್ನು ಜನರ ಜೊತೆ ನೇರ ಸಂವಾದ ದ ಮೂಲಕ ಸ್ಥಳದಲ್ಲಿ ಪರಿಹಾರ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಡಿಭಾಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಸಮಸ್ಯೆ ಯ ಬಗ್ಗೆ ಸುಳ್ಯಪದವು ಶಾಲೆಯ ವಿದ್ಯಾರ್ಥಿಗಳು ದ.ಕ.ಜಿಲ್ಲಾಧಿಕಾರಿ ಯ ಗಮನಕ್ಕೆ ತಂದಾಗ ಜಿಲ್ಲಾಧಿಕಾರಿ ಸ್ಥಳದಿಂದಲೇ ಅದನ್ನು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀ ನಿವಾಸ ಪೂಜಾರಿ ಯವರ ಗಮನಕ್ಕೆ ತಂದಾಗ ತಕ್ಷಣ ಸ್ಪಂದಿಸಿ ದ ಸಚಿವರು ಈ ಸಮಸ್ಯೆ ಯನ್ನು ಬಗೆಹರಿಸುವ ಭರವಸೆಯನ್ನು ದೂರವಾಣಿ ಮೂಲಕ ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ.

ಗ್ರಾಮ ಭೇಟಿ:- ಗಡಿನಾಡ ಗ್ರಾಮವಾದ ಸುಳ್ಯ ಪದವಿನ ಮೈಂದನಡ್ಕ, ಪದಡ್ಕದ ಪರಿಶಿಷ್ಟ ಜಾತಿ, ಪಂಗಡ ಗಳ ಜನರು ವಾಸವಿರುವ ಪ್ರದೇಶಕ್ಕೆ ಭೇಟಿ ನೀಡಿದರು. ಅವರ ವಸತಿ ನಿವೇಶನ ದ ಸಮಸ್ಯೆ ಗಳನ್ನು ಆಲಿಸಿ ಅದನ್ನು ಪರಿಹರಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುಳ್ಯ ಪದವಿನ ಎಂಡೋಸಲ್ಫಾನ್ ಸಂತ್ರಸ್ತೆ ಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಅವರ ಯೋಗ ಕ್ಷೇಮವನ್ನು ವಿಚಾರಿಸಿದರು.

ಅಂತರ್ಜಲ ಸಂರಕ್ಷಣೆ ಯ ಹೆಜ್ಜೆ:- ಬಡಗನ್ನೂರು ಗ್ರಾಮ ಪಂಚಾಯತ್ ನ ಕನಡ್ಕ ಪ್ರದೇಶದಲ್ಲಿ ಅಂತರ್ಜಲಗಳಿಗೆ ಮೂಲವಾಗಿದ್ದ ಕನಡ್ಕ ಕೆರೆ ಮಣ್ಣು ತುಂಬಿ ಬತ್ತಿ ಹೋಗಿರುವುದನ್ನು ಸ್ಥಳೀಯ ಜನರು ಜಿಲ್ಲಾ ಧಿಕಾರಿಯ ಗಮನಕ್ಕೆ ತಂದಾಗ ಆ ಪ್ರದೇಶಕ್ಕೆ ಭೇಟಿ ನೀಡಿ ಅದನ್ನು ಪುನರ್ ಜೀವಗೊಳಿಸುವ ಜನರ ಬೇಡಿಕೆ ಯ ಮನವಿಯನ್ನು ಅವರು ಸ್ವೀಕರಿಸಿ ಸಕಾರಾತ್ಮಕ ವಾಗಿ  ಸ್ಪಂದಿಸಿದರು.

*ಎ.ಜೆ.ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ವೈದ್ಯಕೀಯ ಶಿಬಿರದಲ್ಲಿ 300ಕ್ಕೂ ಹೆಚ್ಚು ಮಂದಿಗೆ ಉಚಿತ ತಪಾಸಣಾ ಶಿಬಿರ ನಡೆಯಿತು.

*ಭಾರತೀಯ ರೆಡ್ ಕ್ರಾಸ್ ದ.ಕ ಜಿಲ್ಲಾ ಘಟಕದ ವತಿಯಿಂದ ರಕ್ತ ದಾನ ಶಿಬಿರ ನಡೆಯಿತು. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆ ಗಳ ಮಾಹಿತಿ ಕೇಂದ್ರ,ಸ್ವ ಸಹಾಯ ಗುಂಪು ಗಳ ತರಕಾರಿ ಹಾಗೂ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ತೆರೆಯಲಾಗಿತ್ತು.

*ಚಾವಡಿ ಚರ್ಚೆ ಯಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿ:- ಜಿಲ್ಲಾಧಿಕಾರಿ ಯ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ರ ವಿಶಿಷ್ಟ ಕಾರ್ಯಕ್ರಮ ಚಾವಡಿ ಚರ್ಚೆ ಬಡಗನ್ನೂರು ಗ್ರಾಮದ ಊರಿನ ಹಿರಿಯ ರೊಂದಿಗಿನ ಸಂವಾದ ರಾತ್ರಿ 10ಗಂಟೆ ಯವರೆಗೆ ನಡೆದ ಕಾರ್ಯಕ್ರಮ ದಲ್ಲಿ ದ.ಕ ಜಿಲ್ಲಾ ಧಿಕಾರಿ ಭಾಗವಹಿಸಿದರು.

ಈ ಚರ್ಚೆ ಯಲ್ಲಿ ಬಡಗನ್ನೂರು ಗ್ರಾಮದ ಹಿರಿಯ ನಾಗರಿಕರು ಊರಿಗೆ ಬಸ್ ಸಂಚಾರ ಆರಂಭವಾದ ದಿನ, ದಾನಿಗಳ ಕೊಡುಗೆ ಯಿಂದ ಶಾಲೆ ನಿರ್ಮಾಣ ವಾದ ವಿವರ, ಕೃಷಿ, ಬೆಳೆ, ಕಾಡು ಪ್ರಾಣಿ ಗಳ ಹಾವಳಿ, ಗಡಿ ಭಾಗದ ರಸ್ತೆ,ಮಿಂಚಿ ಪದವು ಪ್ರದೇಶದಲ್ಲಿ ಹೆಲಿಕಾಪ್ಟರ್ ಮೂಲಕ ಗೇರು ಬೆಳೆಗೆ ಸಿಂಪಡಣೆ ಮಾಡಿದ ಎಂಡೋಸಲ್ಫಾನ್ ಕೀಟ ನಾಶಕ ಕಾಸರಗೋಡು, ಕರ್ನಾಟಕದ ಗಡಿಪ್ರದೇಶದ ಜನರ ಬದುಕಿನ ಮೇಲೆ ಉಂಟು ಮಾಡಿದ ದುಷ್ಪರಿಣಾಮದ ಬಗ್ಗೆ ಹಿರಿಯ ರು ತಮ್ಮ ಅನುಭವವನ್ನು ಹಂಚಿಕೊಂಡರು.

ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ , ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಸುದ್ದಿ ಬಿಡುಗಡೆಯ ಸಂಪಾದಕ ಡಾ.ಯು.ಪಿ.ಶಿವಾನಂದ ಪಾಲ್ಗೊಂಡಿದ್ದರು. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಬಡಗನ್ನೂರು ಗ್ರಾಮದ ಹಿರಿಯ ರಾದ ಬೀರಮೂಲೆ ರಾಮಚಂದ್ರ ಭಟ್, ಮಹಾದೇವಭಟ್, ಪ್ರೇಮ ಟೀಚರ್, ರಾಮಣ್ಣ ಗೌಡ, ವಾಸುದೇವ ಗೌಡ ತಮ್ಮ ಅನುಭವ ಹಂಚಿಕೊಂಡರು.

ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ಪತ್ರಕರ್ತರರಾದ ಮೌನೇಶ್ ವಿಶ್ವ ಕರ್ಮ, ಲೋಕೇಶ್ ಪೆರ್ಲಂಪಾಡಿ, ಮಾಧವ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X