Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾ ಸಚಿವ ಸಂಪುಟ ಪುನರ್ರಚನೆ:...

ಶ್ರೀಲಂಕಾ ಸಚಿವ ಸಂಪುಟ ಪುನರ್ರಚನೆ: ಇಬ್ಬರು ಸಹೋದರರು, ಸೋದರಳಿಯನ್ನು ಕೈಬಿಟ್ಟ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ18 April 2022 11:42 PM IST
share

 ಕೊಲಂಬೊ, ಎ.18: ಸರಕಾರದ ವಿರುದ್ಧದ ಜನಾಕ್ರೋಶವನ್ನು ತಣಿಸುವ ಕಾರ್ಯಕ್ಕೆ ಮುಂದಾಗಿರುವ ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸ, ಇದೀಗ ಸಚಿವ ಸಂಪುಟದಿಂದ ತನ್ನ ಇಬ್ಬರು ಸಹೋದರರು ಹಾಗೂ ಸೋದರಳಿಯನನ್ನು ಕೈಬಿಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.

ಬಹುತೇಕ ಕುಟುಂಬದ ಸದಸ್ಯರೇ ಇದ್ದ ಸಚಿವ ಸಂಪುಟ ರಚಿಸಿ ಜನರ ಆಕ್ರೋಶ ಮತ್ತು ಟೀಕೆಗೆ ಗುರಿಯಾಗಿದ್ದ ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸ, ದೇಶಕ್ಕೆ ಎದುರಾಗಿರುವ ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕೆಂಬ ಆಗ್ರಹ ವ್ಯಾಪಕವಾಗಿ ಕೇಳಿಬಂದಿತ್ತು. ಸೋಮವಾರ ಪುನರ್ರಚನೆ ಮಾಡಿರುವ ಹೊಸ ಸಚಿವ ಸಂಪುಟದಲ್ಲಿ ಗೊತಬಯ ರಾಜಪಕ್ಸ ಅವರ ಹಿರಿಯ ಸಹೋದರ ಮಹೀಂದ್ರಾ ರಾಜಪಕ್ಸ ಪ್ರಧಾನಿಯಾಗಿಯೇ ಮುಂದುವರಿಯಲಿದ್ದಾರೆ. ಇಬ್ಬರು ಸಹೋದರರಾದ ಚಾಮಲ್ ರಾಜಪಕ್ಸ ಮತ್ತು ಬಾಸಿಲ್ ರಾಜಪಕ್ಸರನ್ನು ಸಂಪುಟದಿಂದ ಕೈಬಿಡಲಾಗಿದೆ. ಕ್ರೀಡಾ ಸಚಿವರಾಗಿದ್ದ ಮಹೀಂದ್ರ ರಾಜಪಕ್ಸ ಅವರ ಪುತ್ರ ನಮಲ್ ರಾಜಪಕ್ಸರನ್ನೂ ಕೈಬಿಡಲಾಗಿದೆ. ಇದರೊಂದಿಗೆ ಸಂಪುಟದಲ್ಲಿನ ಸಚಿವರ ಸಂಖ್ಯೆ 21ಕ್ಕೆ ಇಳಿದಿದೆ(ಈ ಹಿಂದೆ 28 ಸದಸ್ಯರಿದ್ದರು). ಸಚಿವರಿಗೆ ಐಷಾರಾಮಿ ಕಾರು, ಹಲವು ಬೆಂಗಾವಲು ವಾಹನಗಳು, ಅಂಗರಕ್ಷಕರ ತಂಡ, ಅನಿಯಮಿತ ಇಂಧನ, ಮನೆಬಾಡಿಗೆ, ಮನರಂಜನಾ ಭತ್ಯೆ ಇತ್ಯಾದಿ ಸವಲತ್ತುಗಳು ದೊರಕುತ್ತವೆ.

 ಆರ್ಥಿಕ ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ ಗಜಗಾತ್ರದ ಸಂಪುಟದ ಅಗತ್ಯವಿದೆಯೇ, ಅಲ್ಲದೆ ಸಂಪುಟದಲ್ಲಿನ ಪ್ರಮುಖ ಹುದ್ದೆಗಳನ್ನು ಕುಟುಂಬದವರಿಗೆ ಮತ್ತು ಸಂಬಂಧಿಕರಿಗೆ ನೀಡುವ ಮೂಲಕ ಅಧ್ಯಕ್ಷ ಗೊತಬಯ ರಾಜಪಕ್ಸ ದುರಾಡಳಿತ ನಡೆಸುತ್ತಿದ್ದಾರೆ ಎಂದು ವಿಪಕ್ಷಗಳು ಆರೋಪಿಸಿ ರಾಜಪಕ್ಸ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಿವೆ. ಇದೀಗ ಈ ಪ್ರತಿಭಟನೆಗೆ ಜನಬೆಂಬಲ ದೊರಕಿದ್ದು ದೇಶದಾದ್ಯಂತ ವ್ಯಾಪಿಸಿದೆ.

ಈ ಮಧ್ಯೆ, ಐಎಂಎಫ್ನಿಂದ ಹೊಸ ಸಾಲ ಪಡೆಯುವ ಕುರಿತ ಮಾತುಕತೆಗೆ ನೂತನ ವಿತ್ತ ಸಚಿವ ಅಲಿ ಸಬ್ರಿ ಈ ವಾರಾಂತ್ಯ ವಾಷಿಂಗ್ಟನ್ಗೆ ಭೇಟಿ ನೀಡಲಿದ್ದಾರೆ ಎಂದು ಸರಕಾರದ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X