Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಮಿಷನ್ ಸರ್ಕಾರಕ್ಕೆ ಪ್ರಧಾನಿ ನರೇಂದ್ರ...

ಕಮಿಷನ್ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಕುಮ್ಮಕ್ಕು: ಸಿದ್ದರಾಮಯ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ19 April 2022 7:35 PM IST
share
ಕಮಿಷನ್ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಕುಮ್ಮಕ್ಕು: ಸಿದ್ದರಾಮಯ್ಯ ಆರೋಪ

ಚಾಮರಾಜನಗರ:  ರಾಜ್ಯ ಸರ್ಕಾರ ಗುತ್ತಿಗೆದಾ ರರಿಂದ ಶೇ .40 ರಷ್ಟು ಕಮಿಷನ್ ಪಡೆಯುತ್ತಿರುವ ಸಂಬಂಧ ಸಂಘದವರು ಪ್ರಧಾನಿಗೆ ಪತ್ರ ಬರೆದಿರುವ ಕುರಿತು ಪ್ರಧಾನ ಮಂತ್ರಿಯವರಿಗೆ ನರೇಂದ್ರ ಮೋದಿಗೆ ದೈರ್ಯ ಇದ್ದರೆ  ತನಿಖೆ ಮಾಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು .

ಚಾಮರಾಜನಗರದ ಹಳೆಯ ಬಸ್ ನಿಲ್ದಾಣದ ಬಳಿ ಇರುವ ಮಾರಿಗುಡಿ ಮುಂಭಾಗ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ರ್‍ಯಾಲಿ ಉದ್ಘಾಟಿಸಿ ಮಾತನಾಡಿದರು . 

'ರಾಜ್ಯದ ಇತಿಹಾಸದಲ್ಲಿ ಕಳೆದ 75 ವರ್ಷಗಳಲ್ಲಿ ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಪತ್ರ ಬರೆದಿರುವುದು ಇದೇ ಮೊದಲು , ಈ ಸಂಬಂಧ ನರೇಂದ್ರಮೋದಿ ಅವರು ತನಿಖೆ ಮಾಡಿಸುವ ಬದಲು ಮೌನವಾಗಿರುವುದನ್ನು ನೋಡಿದರೆ ಇದಕ್ಕೆ ನರೇಂದ್ರ ಮೋದಿ ಅವರ ಕುಮ್ಮಕ್ಕು ಇದೆ ಎಂದು ಅರ್ಥ ಅಲ್ವಾ' ಎಂದು ಪ್ರಶ್ನಿಸಿದರು . 

'ರಾಜ್ಯದಲ್ಲಿ ಹಿ೦ದೆ೦ದೂ ಕೇಳರಿಯದ೦ತಹ ಭ್ರಷ್ಟ ಸರ್ಕಾರವಿದೆ . ಇಡೀ ರಾಜ್ಯದ ಜನರು ಹಾಗೂ ಅಧಿ ಕಾರಿಗಳು ಮಾತನಾಡು ತ್ತಿದ್ದಾರೆ . ಶೇ .40 ರಷ್ಟು ಕಮಿಷನ್ ಕೊಟ್ಟು ಗುಣಮಟ್ಟದ ಕೆಲಸ ಮಾಡಲು ಸಾಧ್ಯವಿಲ್ಲ . ಸರ್ಕಾರ ಕಿರುಕುಳ ಕೊಡುತ್ತಿದ್ದು , ಇದನ್ನು ತಪ್ಪಿಸಿ ಕೂಡಲೇ ಕ್ರಮಕೈಗೊಳ್ಳುವಂತೆ ಸಂಘದ ಕೆಂಪಣ್ಣ ಪ್ರಧಾನಿಗೆ ಪತ್ರ ಬರೆದಿದ್ದಾರೆ . ಪತ್ರದ ಕಾಪಿ ನನ್ನ ಬಳಿ ಕೂಡ ಇದೆ ಎಂದರು . ದೇಶದಲ್ಲಿ ಇಲ್ಲಿಯ ತನಕ ಅನೇಕ ಪ್ರಧಾನಿಗಳು ಬಂದಿದ್ದಾರೆ . ಮೋದಿಯಷ್ಟು ಸುಳ್ಳು ಹೇಳಿದವರು ಯಾರೂ ಇಲ್ಲ . ಕೊಟ್ಟ ಭರವಸೆಯನ್ನು ಯಾವುದನ್ನು ಈಡೇರಿಸಿಲ್ಲ . ರಾಜ್ಯಾದ್ಯಂತ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪಕ್ಷ 5 ದಿನಗಳವರೆಗೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಜನಜಾಗೃತಿ ಮೂಡಿಸಲಾಗುತ್ತಿದೆ . 2 ನೇ ಹಂತದಲ್ಲಿ ಎಲ್ಲ ವಿಧಾನಸಭಾ ಕೇಂದ್ರಗಳಲ್ಲಿ ಪ್ರತಿಭಟನಾ ಅಭಿಯಾನ ಮಾಡಲು ಚಿಂತಿಸಲಾಗಿದೆ . ದೇಶ ಹಾಗೂ ರಾಜ್ಯದಲ್ಲಿ ದುರಾಡಳಿತ ಮಾಡುತ್ತಿರುವ ರೈತ ವಿರೋಧಿ ಸರ್ಕಾರ ಕಾಣುತ್ತಿದ್ದೇವೆ . 45 ವರ್ಷಗಳ ನನ್ನ ರಾಜಕಾರಣದಲ್ಲಿ ಇಷ್ಟು ಭ್ರಷ್ಟ ಸರ್ಕಾರವನ್ನು ಜೀವನದಲ್ಲಿ ನೋಡಿರಲಿಲ್ಲ' ಎಂದು ತಿಳಿಸಿದರು . 

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಸಿಲಿಂಡರ್ ಬೆಳೆ 414 ರೂ . ಇತ್ತು . ಈಗ 1050 ರೂ . ಇದೆ . ಇದಕ್ಕೆ ನರೇಂದ್ರಮೋದಿ ಕಾರಣರಾಗಿದ್ದಾರೆ . ಡಾ. ಮನಮೋಹನ್ ಸಿಂಗ್ ಇದ್ದಾಗ ಪೆಟ್ರೋಲ್ ಬೆಲೆ 68 ರೂ . , ಡೀಸೆಲ್ 46 ರೂ . ಇತ್ತು . ಈಗ ಪೆಟ್ರೋಲ್  ರೂ . ಡೀಸೆಲ್ 97 ರೂ . ಇದೆ . ಜನರನ್ನು ಸುಲಿಗೆ ಮಾಡಲಾಗುತ್ತಿದೆ . ಗೊಬ್ಬರ , ಸಿಮೆಂಟ್ , ಕಬ್ಬಿಣ , ಅಡುಗೆ ಎಣ್ಣೆ ಬೆಲೆ ಏರಿಕೆಯಾಗಿದೆ . ಡಿಎಪಿ ಗೊಬ್ಬರ 50 ಕೆಜಿ ಬ್ಯಾಗ್ಗೆ 150 ರೂ . ಏರಿಕೆ ಮಾಡಲಾಗಿದೆ . ಪೊಟ್ಯಾಷ್ , ಯೂರಿಯಾ ಎಲ್ಲ ಬೆಲೆ ಏರಿಕೆಯಾಗಿದೆ ಎಂದು ಹೇಳಿದರು . 

ರಾಜ್ಯದಲ್ಲಿ 15 ಲಕ್ಷ ಟನ್ ರಾಗಿ ಬೆಳೆದಿದ್ದಾರೆ . 1.90 ಲಕ್ಷ ಟನ್ ಮಾತ್ರ ಖರೀದಿ ಮಾಡಿದ್ದಾರೆ . ಉಳಿದ ರಾಗಿ ಏನು ಮಾಡಬೇಕು . ರೈತರಿಗೆ ಒಂದು ಕ್ವಿಂಟಾಲ್ ರಾಗಿಗೆ 1,500 ರೂ . ನಷ್ಟವಾಗುತ್ತಿದೆ . ಭತ್ತ , ತೊಗರಿ , ಮೆಕ್ಕೆಜೋಳ , ಅರಿಶಿಣ ಖರೀದಿಸುವವರಿಲ್ಲ . ನಿಮ್ಮ ಕೈಯಲ್ಲಿ ಆಗದಿದ್ದ ಮೇಲೆ ಯಾಕೆ ಸರ್ಕಾರದಲ್ಲಿ ಇದ್ದೀರ ಎಂದರು . ಈ ಸರ್ಕಾರ ಬಂದು 3 ವರ್ಷ ಆಯಿತು . ಒಂದೇ ಒಂದು ಮನೆ ಮಂಜೂರು ಮಾಡಲಾಗಿಲ್ಲ . ನಾನು ಕೊಟ್ಟಿರುವ ದುಡ್ಡ ಕೊಟ್ಟಿಲ್ಲ . ನಾನು ಸಿಎಂ ಆಗಿದ್ದಾಗ 5 ವರ್ಷದಲ್ಲಿ 15 ಲಕ್ಷ ಮನೆ ನಿರ್ಮಿಸಿದ್ದೆ . ಎಸ್ಸಿ , ಎಸ್ಟಿ ವರ್ಗಕ್ಕೆ ಕಾನೂನು ಮಾಡಿ ಎಸ್ಇಪಿ , ಟಿಎಸ್ಪಿ ಹಣ ಆ ವರ್ಗಗಳಿಗೆ ಖರ್ಚು ಮಾಡಲು ಕಾನೂನು ಮಾಡಿದ್ದು ನಮ್ಮ ಸರ್ಕಾರ . ಎಸ್ಸಿ , ಎಸ್ಟಿ ವರ್ಗದವರಿಗೆ ಅನ್ಯಾಯ ಮಾಡಿದ್ದು ದಲಿತ ವಿರೋಧಿ ಸರ್ಕಾರವಾಗಿದೆ . ಶಾದಿ ಭಾಗ್ಯ , ಶೂ ಭಾಗ್ಯ , ಪಶುಭಾಗ್ಯ , ಇಂದಿರಾ ಕ್ಯಾಂಟಿನ್ , ವಿದ್ಯಾಸಿರಿ ಯೋಜನೆಗಳಿಲ್ಲ ಎಂದು ಹೇಳಿದರು .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X