Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಯಾವೂರ ದಾಸಯ್ಯ: ಮಾಜಿ ಸಿಎಂ...

ಸಿದ್ದರಾಮಯ್ಯ ಯಾವೂರ ದಾಸಯ್ಯ: ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ20 April 2022 11:17 PM IST
share
ಸಿದ್ದರಾಮಯ್ಯ ಯಾವೂರ ದಾಸಯ್ಯ: ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಹಾಸನ: ಏ, ,20: ‘ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮೇಲೆ ಪ್ರಮಾಣ ಮಾಡುವಂತೆ ಹೇಳಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯಾವೂರ ದಾಸಯ್ಯ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. 

ನಗರದ ಹೊರವಲಯದಲ್ಲಿ ಚಿಕ್ಕಮಗಳೂರಿನಿಂದ ಚಾಮರಾಜನಗರಕ್ಕೆ ಹೋಗುವಾಗ ಮಾರ್ಗ ಮಧ್ಯೆ ಹಾಸನ ಕೆಐಡಿಬಿ ವೃತ್ತದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

'ಇಡೀ ದೇಶದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಡಿ.ಜೆ.ಹಳ್ಳಿ ಗಲಾಟೆಯಲ್ಲಿ ಕಾಂಗ್ರೆಸ್ ಮುಖಂಡರ ಪಾತ್ರ ಇತ್ತು. ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಯಲು ಕಾಂಗ್ರೆಸ್ ಮುಖಂಡರು ಕಾರಣ. ಈ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆ' ಎಂದರು.

'2008 ರಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಜೊತೆ ಒಳೊಪ್ಪಂದ ಮಾಡಿಕೊಂಡು ಬಿಜೆಪಿ ಬಳಿ ಹಣ ಪಡೆದು, ಅಪರೇಷನ್ ಕಮಲ ನಡೆಸಲು ಬೆಂಬಲ ನೀಡಿ, ಆಪರೇಷನ್ ಕಮಲದಿಂದ ಬಂದು ಚುನಾವಣೆ ಎದುರಿಸದವರಿಗೆ ಒಳಗಿಂದೊಳಗೆ ಹಿಂಬದಿಯಲ್ಲಿ ಬೆಂಬಲ ನೀಡಿದರು. ಸಿದ್ದರಾಮಯ್ಯನ ದುರಾಡಳಿತ ಕಾರಣ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಮಾಡಿಕೊಂಡರು. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ದರಾಮಯ್ಯ ಆಡಳಿತ ಕಾರಣ. ಅದನ್ನು ಬಿಟ್ಟು ಬರಿ ಸಂತೊಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡುತ್ತಿದ್ದಾರೆ' ಎಂದರು.

ನಾನು ಕೇಳಿರುವ 5 ಪ್ರಶ್ನೆಗಳಿಗೆ ಸಿದ್ದರಾಮಯ್ಯ ಉತ್ತರ ಕೊಡಲಿ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಯಾವೂರ ದಾಸಯ್ಯ. ಜೆಡಿಎಸ್ ಪಕ್ಷದ ಬಗ್ಗೆ ಪದೆ ಪದೆ ಬಿಜೆಪಿ ಬಿ. ಟೀಂ ಎಂದು ಅಪಪ್ರಚಾರ ಮಾಡಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಯೊಗ್ಯತೆಗೆ 50-60 ಸ್ಥಾನದಲ್ಲಿ ಮಾತ್ರ ಜಯಗಳಿಲು ಮಾತ್ರ ಸಾಧ್ಯ ಎಂದು ಭವಿಷ್ಯ ನುಡಿದರು.

ಎರಡು ರಾಷ್ಟ್ರೀಯ ಪಕ್ಷಗಳು 150 ಸ್ಥಾನ ಗೆಲ್ಲುವುದಾದರೆ ನಮ್ಮ ಬೆಂಬಲ ಯಾರಿಗೂ ಬೇಕಿಲ್ಲ. ಈಗಲೂ ಜೆಡಿಎಸ್ ಪಕ್ಷದ ಸ್ವತಂತ್ರ ಸರ್ಕಾರ ತರಲು ಜೆಡಿಎಸ್ ಕಾರ್ಯಕರ್ತರು ಪಣತೊಟ್ಟಿದ್ದಾರೆ. 2008 ರಲ್ಲಿ ಯಡಿಯೂರಪ್ಪ 9 ದಿನಗಳ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದರು. 9ನೇ ದಿನಗಳ ನಂತರ ಬಿಜೆಪಿಯವರು ಅಗ್ರಿಮೆಂಟ್ ಪೇಪರ್ ತಂದರು. ನಾನು ಸಹಿ ಹಾಕದ ಕಾರಣ ಸರ್ಕಾರ ಪತನವಾಯಿತು. ನಾನು ಯಾವುದೇ ವಚನ ಭ್ರಷ್ಟ ಕೆಲಸ ಮಾಡಿರುವುದಿಲ್ಲ ಎಂದು ಟಾಂಗ್ ನೀಡಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನ ತಿಂದ ಮನೆಗೆ ಮೊಸ ಮಾಡಿದ ವ್ಯಕ್ತಿ. ಜೆಡಿಎಸ್ ಕಾರ್ಯಕ್ರರ್ತರ ಶ್ರಮದಿಂದ ಚುನಾವಣೆಯಲ್ಲಿ ಜಯಗಳಿಸಿ ಪಕ್ಷ ಬಿಟ್ಟು ಹೋದರು. ಈಗ ನನ್ನ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ಮೊನ್ನೆ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ಕಿತ್ತು ಹಾಕಬೇಕು ಎಂದು ಕರೆ ಕೊಟ್ಟಿದ್ದಾರೆ. ಅವರ ಹೃದಯದಲ್ಲಿ ಕಾಂಗ್ರೆಸ್ ಇರುವ ಬಗ್ಗೆ ಭಾವನೆ ಬಗ್ಗೆ ನಿಮಗೆ ತಿಳಿಯುತ್ತದೆ. ಬೆಳಿಗ್ಗೆ ಎದ್ದರೆ ಬಿಜೆಪಿ ಬಿ ಟಿಂ ಎಂದು ಅಪ್ರಚಾರ ಮಾಡುತ್ತಾರೆ. ಹೀಜಾಬ್ ವಿಷಯದಲ್ಲಿ ಕಾಂಗ್ರೆಸ್ ಕೋಮದಾಲ್ಲಿ ಮಲಗಿತ್ತು. ನಾನು ಬಂದು ಮಾತನಾಡಿದ್ದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಸನ ಕ್ಷೇತ್ರದ ಜೆಡಿಎಸ್ ಮುಖಂಡ ಹೆಚ್.ಪಿ. ಸ್ವರೂಪ್ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X