Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. PSI ನೇಮಕಾತಿ ಅಕ್ರಮ ಪ್ರಕರಣ; ತನಿಖೆಗೆ...

PSI ನೇಮಕಾತಿ ಅಕ್ರಮ ಪ್ರಕರಣ; ತನಿಖೆಗೆ ಪೂರ್ಣ ವಿರಾಮ ಹಾಕಲು ಸೂಚನೆ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ21 April 2022 9:05 PM IST
share
PSI ನೇಮಕಾತಿ ಅಕ್ರಮ ಪ್ರಕರಣ; ತನಿಖೆಗೆ ಪೂರ್ಣ ವಿರಾಮ ಹಾಕಲು ಸೂಚನೆ: ಮುಖ್ಯಮಂತ್ರಿ ಬೊಮ್ಮಾಯಿ

ಕಲಬುರಗಿ, ಎ. 21: ಪಿಎಸ್ಸೈ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಫಜಲ್‍ಪುರದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್ ಅಯ್ಯಾಳಿ ದೇಸಾಯಿ ಹಾಗೂ ರುದ್ರಗೌಡ ಎಂಬುವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮೂಲಕ್ಕೆ ಹೋಗಿ ತನಿಖೆ ಮಾಡಲು ಸೂಚಿಸಲಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದನ ಅವರು, ‘ಯುಪಿಎಸ್ಸಿ ಮಾದರಿಯಲ್ಲಿ ನೇಮಕಾತಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಲಾಗಿತ್ತು. ಈ ಭದ್ರತೆಯ ವ್ಯವಸ್ಥೆ, ಪಾರದರ್ಶಕತೆಯ ನಡುವೆಯೂ ಲೋಪವೆಸಗಿ ವಾಮಮಾರ್ಗದಲ್ಲಿ ಅಕ್ರಮ ಕಾರ್ಯಾಚರಣೆ ಮಾಡಿರುವುದಕ್ಕೆ ಪೂರ್ಣವಿರಾಮ ಹಾಕಬೇಕೆಂದು ಸರಕಾರದ ಚಿಂತನೆಯಾಗಿದೆ' ಎಂದು ತಿಳಿಸಿದರು.

‘ಪಿಎಸ್‍ಐ ಪರೀಕ್ಷೆ ಅಕ್ರಮದ ಬಗ್ಗೆ ದೂರು ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಕೂಲಂಕಷವಾಗಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಉತ್ತರಪತ್ರಿಕೆಗಳಲ್ಲಿ ವ್ಯತ್ಯಾಸ ಕಂಡುಬಂದ ಮೇಲೆ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ. ನೇಮಕಾತಿಯಲ್ಲಿ ಪಾರದರ್ಶಕತೆ ಇರಬೇಕು ಹಾಗೂ ಸಮಯ ವ್ಯರ್ಥವಾಗದೇ ಕಾರ್ಯಾಚರಣೆ ಮಾಡಲು ಸೂಚನೆ ನೀಡಲಾಗಿದೆ.

ಕಲ್ಬುರ್ಗಿಯಲ್ಲಿ ಶಿಕ್ಷಣ ಸಂಸ್ಥೆಗಳ ಮಾಲಕರನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದೆ. ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥರು ತಲೆಮರೆಸಿಕೊಂಡಿದ್ದು, ಶೋಧನಾ ಕಾರ್ಯ ಮುಂದುವರೆದಿದೆ. ಈಗ ಕಾಂಗ್ರೆಸ್ ಪಕ್ಷದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್ ಅಯ್ಯಾಳಿ ದೇಸಾಯಿ ಹಾಗೂ ರುದ್ರಗೌಡ ಅವರನ್ನು ಬಂಧಿಸಲಾಗಿದೆ.  ಪರೀಕ್ಷೆಯನ್ನು ಬರೆದು ಉತ್ತೀರ್ಣರಾದ ಅಭ್ಯರ್ಥಿಗಳ ವಿಚಾರಣೆಯೂ ನಡೆಸಿ, ಸಮಗ್ರ ತನಿಖೆ ಮಾಡಲಾಗುವುದು ಎಂದು ಅವರು ಹೇಳಿದರು. 

ದಿವ್ಯಾ ಹಾಗರಗಿಯವರು ಬಿಜೆಪಿಯಲ್ಲಿ ಯಾವುದೇ ಜವಾಬ್ದಾರಿಯನ್ನು ಹೊಂದಿಲ್ಲ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಸರಕಾರವೇ ಸಿಐಡಿ ತನಿಖೆಗೆ ಅನುಮತಿ ನೀಡಿದೆ. ತನಿಖೆ ಮುಕ್ತವಾಗಿ ನಡೆಸಲು ಸೂಚನೆ ನೀಡಿದೆ. ಬೇರೆ ಪಕ್ಷಗಳು ಈ ರೀತಿಯ ಪ್ರಕರಣವನ್ನೇ ಮುಚ್ಚಿಹಾಕಿರುವ ಇತಿಹಾಸ ಇದೆ. ಹಿಂದೆ ಪಿಎಸ್ಸೈ ಪರೀಕ್ಷೆಗಳು 3-4 ಬಾರಿ ಮಾಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಉತ್ತೀರ್ಣರಾದ ಅಭ್ಯರ್ಥಿಗಳ ವಿಚಾರಣೆ ನಡೆಯುತ್ತಿದ್ದು, ಮಧ್ಯಂತರ ವರದಿ ಬಂದ ನಂತರ ಮರುಪರೀಕ್ಷೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಿಐಡಿ ತನಿಖೆ ನಡೆಯುತ್ತಿರುವುದರಿಂದ ಎಲ್ಲ ಮಾಹಿತಿಗಳನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ. ಪಿಎಸ್‍ಐ ನೇಮಕಾತಿ ಅಕ್ರಮದ ತನಿಖೆಯನ್ನು ನ್ಯಾಯಾಲಯದ ನೇತೃತ್ವದಲ್ಲಿ ತನಿಖೆ ಅಥವಾ ಸಿಬಿಐಗೆ ವಹಿಸಬೇಕೆಂದು ಬೇರೆ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ತನಿಖೆಯ ಮಧ್ಯಂತರ ವರದಿ ಬಂದ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

‘ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಯಲ್ಲಿ ಎಲ್ಲ ಅಂಶಗಳು ತಿಳಿಯುತ್ತದೆ. ಎಲ್ಲ ಸಾಕ್ಷ್ಯಾಧಾರಗಳು, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಆಧಾರದ ಮೇಲೆ ಸಮಗ್ರ ತನಿಖೆ ಆಗುತ್ತಿದೆ'

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X