Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ಸಿಲ್ವರ್ ಲೈನ್‌ಗೆ ಸರ್ವೇ ಕಲ್ಲು...

ಕೇರಳ: ಸಿಲ್ವರ್ ಲೈನ್‌ಗೆ ಸರ್ವೇ ಕಲ್ಲು ಹಾಕಲು ಪ್ರಯತ್ನ; ಪೊಲೀಸರು, ಪ್ರತಿಭಟನಕಾರರ ನಡುವೆ ಘರ್ಷಣೆ

ವಾರ್ತಾಭಾರತಿವಾರ್ತಾಭಾರತಿ21 April 2022 11:19 PM IST
share
ಕೇರಳ: ಸಿಲ್ವರ್ ಲೈನ್‌ಗೆ ಸರ್ವೇ ಕಲ್ಲು ಹಾಕಲು ಪ್ರಯತ್ನ; ಪೊಲೀಸರು, ಪ್ರತಿಭಟನಕಾರರ ನಡುವೆ ಘರ್ಷಣೆ

ತಿರುವನಂತಪುರ, ಎ. 21: ಕೇರಳ ಸರಕಾರದ ಮಹತ್ವಾಕಾಂಕ್ಷೆಯ ಸಿಲ್ವರ್ ಲೈನ್‌ ರೈಲು ಕಾರಿಡರ್ ಯೋಜನೆಗೆ ಇಲ್ಲಿನ ಕನಿಯಾಪುರಂನಲ್ಲಿ ಗುರುವಾರ ಸರ್ವೇ ಕಲ್ಲುಗಳನ್ನು ಹಾಕುವ ಪ್ರಯತ್ನ ಪೊಲೀಸರು ಹಾಗೂ ಸ್ಥಳೀಯರ ನಡುವಿನ ಘರ್ಷಣೆಗೆ ಕಾರಣವಾಯಿತು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಅಧಿಕಾರಿಗಳು ಸರ್ವೇ ಕಲ್ಲು ಹಾಕುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರು ಹಾಗೂ ಅಲ್ಲಿಂದ ತೆರಳಿದರು. ಸರ್ವೇ ಕಲ್ಲುಗಳನ್ನು ಹಾಕಲು ಉಪಕರಣಗಳೊಂದಿಗೆ ಆಗಮಿಸಿದ ಅಧಿಕಾರಿಗಳಿಗೆ ಪ್ರತಿಪಕ್ಷ ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದ ಸ್ಥಳೀಯರ ಗುಂಪೊಂದು ತಡೆ ಒಡ್ಡಿತು. 

ಅಧಿಕಾರಿಗಳಿಗೆ ಪೊಲೀಸರು ಬೆಂಗಾವಲು ಒದಗಿಸಿ, ಪ್ರತಿಭಟನಕಾರರನ್ನು ಸ್ಥಳದಿಂದ ತೆರವುಗೊಳಿಸಲು ಪ್ರಯತ್ನಿಸಿದಾಗ ಘರ್ಷಣೆ ಭುಗಿಲೆದ್ದಿತು. ಕೆಲವು ಪ್ರತಿಭಟನಕಾರರಿಗೆ ಪೊಲೀಸರು ಬೂಟು ಕಾಲಿನಿಂದ ಒದೆಯುತ್ತಿರುವುದು, ಗಾಯಗೊಂಡ ಪ್ರತಿಭಟನಕಾರರು ಅನಂತರ ಸಮೀಪದ ಆಸ್ಪತ್ರೆಗೆ ಧಾವಿಸುತ್ತಿರುವುದನ್ನು ಸ್ಥಳೀಯ ಟಿ.ವಿ. ಚಾನೆಲ್ ಗಳು ಪ್ರಸಾರ ಮಾಡಿದ ವೀಡಿಯೊಗಳಲ್ಲಿ ಕಂಡು ಬಂದಿದೆ. 
ನಾವು ಈ ಸ್ಥಳದಲ್ಲಿ ಸೇರುವುದನ್ನು ಮುಂದುರಿಸಲಿದ್ದೇವೆ.  ಅಲ್ಲದೆ, ಅಧಿಕಾರಿಗಳಿಗೆ ಸರ್ವೇ ಕಲ್ಲುಗಳನ್ನು ಹಾಕಲು ಅವಕಾಶ ನೀಡಲಾರೆವು ಎಂದು ಪ್ರತಿಭಟನಕಾರೋರ್ವರು ತಿಳಿಸಿದ್ದಾರೆ. ಈ ಪ್ರಕ್ರಿಯೆ ಬಗ್ಗೆ ಇಲ್ಲಿನ ನಿವಾಸಿಗಳಿಗೆ ಪೂರ್ವಭಾವಿಯಾಗಿ ಯಾವುದೇ ಮಾಹಿತಿ ನೀಡಿಲ್ಲ ಎಂದು ಅವರು ಹೇಳಿದ್ದಾರೆ. 

ಪ್ರತಿಭಟನಕಾರರೊಂದಿಗೆ ನಿಷ್ಕರುಣೆಯಿಂದ ವರ್ತಿಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ನಾವು ಯಾವ ಪ್ರತಿಭಟನಕಾರನಿಗೂ ಒದ್ದಿಲ್ಲ. ಆದರೆ, ಕೆ-ರೈಲ್ ಅಧಿಕಾರಿಗಳಿಗೆ ರಕ್ಷಣೆ ನೀಡಲು ಮಾತ್ರ ಪ್ರಯತ್ನಿಸಿದ್ದೇವೆ. ಕೇರಳದ ವಿವಿಧ ಭಾಗಗಳಲ್ಲಿ ಆರಂಭದಿಂದಲೂ ಸಾಮೂಹಿಕ ಪ್ರತಿಭಟನೆಗೆ ಕಾರಣವಾಗಿದ್ದ ಈ ಯೋಜನೆಗೆ ಸುಮಾರು ಒಂದು ತಿಂಗಳು ಅಂತರದ ಬಳಿಕ ಸರ್ವೇ ಕಲ್ಲು ಹಾಕುವ ಪ್ರಕ್ರಿಯೆನ್ನು ಅಧಿಕಾರಿಗಳು ಆರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ರತಿಭಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಭಟನಕಾರರನ್ನು ರಾಜ್ಯ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ವಿ.ಡಿ. ಸತೀಶನ್ ಭೇಟಿಯಾಗಿದ್ದಾರೆ.

#Kerala | A clash broke out between Congress workers and police while the party's members were protesting against the Silver Line project in Thiruvananthapuram

(ANI) pic.twitter.com/B7sAVghBi9

— NDTV (@ndtv) April 21, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X