Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಮುಂಬೈ ತಂಡವನ್ನು ಕೊನೆಯ...

ಐಪಿಎಲ್: ಮುಂಬೈ ತಂಡವನ್ನು ಕೊನೆಯ ಓವರ್‌ನಲ್ಲಿ ಮಣಿಸಿದ ಚೆನ್ನೈ

ಧೋನಿ ಜವಾಬ್ದಾರಿಯುತ ಬ್ಯಾಟಿಂಗ್

ವಾರ್ತಾಭಾರತಿವಾರ್ತಾಭಾರತಿ21 April 2022 6:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್: ಮುಂಬೈ ತಂಡವನ್ನು ಕೊನೆಯ ಓವರ್‌ನಲ್ಲಿ ಮಣಿಸಿದ ಚೆನ್ನೈ

ಹೊಸದಿಲ್ಲಿ, ಎ. 21: ಮಾಜಿ ನಾಯಕ ಎಂ.ಎಸ್. ಧೋನಿಯವರ ಜವಾಬ್ದಾರಿಯುತ ಬ್ಯಾಟಿಂಗ್ (ಔಟಾಗದೆ 28, 13 ಎಸೆತ, 3 ಬೌಂಡರಿ, 1 ಸಿಕ್ಸರ್) ನೆರವಿನಿಂದ ಗುರುವಾರ ನಡೆದ ಐಪಿಎಲ್‌ನ 33ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಕೊನೆಯ ಓವರ್‌ನಲ್ಲಿ 3 ವಿಕೆಟ್‌ಗಳ ಅಂತರದಿಂದ ಮಣಿಸಿತು.

ಗೆಲ್ಲಲು 156 ರನ್ ಗುರಿ ಬೆನ್ನಟ್ಟಿದ ಚೆನ್ನೈ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಗೆಲುವಿನ ದಡ ಸೇರಿತು. ಚೆನ್ನೈಗೆ ಕೊನೆಯ ಓವರ್‌ನಲ್ಲಿ ಗೆಲುವಿಗೆ 17 ರನ್ ಅಗತ್ಯವಿತ್ತು. 20ನೇ ಓವರ್‌ನ ಮೊದಲ ಎಸೆತದಲ್ಲಿ ಪ್ರಿಟೋರಿಯಸ್(22)ಔಟಾದರು. ಆಗ ತಂಡಕ್ಕೆ ಆಸರೆಯಾದ ಧೋನಿ 1 ಸಿಕ್ಸರ್ ಹಾಗೂ 2 ಬೌಂಡರಿ ಸಿಡಿಸಿ ಚೆನ್ನೈಗೆ ರೋಚಕ ಗೆಲುವು ತಂದರು.

ಚೆನ್ನೈ ಟೂರ್ನಿಯಲ್ಲಿ ಆಡಿರುವ 7ನೇ ಪಂದ್ಯದಲ್ಲಿ 2ನೇ ಗೆಲುವು ದಾಖಲಿಸಿದರೆ, ಮುಂಬೈ ಸತತ 7ನೇ ಸೋಲು ಅನುಭವಿಸಿತು. ಚೆನ್ನೈ ಪರ ಅಂಬಟಿ ರಾಯುಡು(40 ರನ್, 35 ಎಸೆತ), ರಾಬಿನ್ ಉತ್ತಪ್ಪ(30 ರನ್, 25 ಎಸೆತ)ಹಾಗೂ ಡ್ವೇಯ್ನೆ ಪ್ರಿಟೋರಿಯಸ್(22)ಒಂದಷ್ಟು ಹೋರಾಟ ನೀಡಿದರು. ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಸೊನ್ನೆ ಸುತ್ತಿದರು.

ಮುಂಬೈ ಪರ ಡೇನಿಯಲ್ ಸ್ಯಾಮ್ಸ್ (4-30)ಯಶಸ್ವಿ ಪ್ರದರ್ಶನ ನೀಡಿದರೆ, ಜಯದೇವ್ ಉನದ್ಕಟ್(2-38)ಸ್ಯಾಮ್ಸ್‌ಗೆ ಸಾಥ್ ನೀಡಿದರು.
 
 ಇದಕ್ಕೂ ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಮುಂಬೈ ಆರಂಭಿಕ ಆಟಗಾರರಿಬ್ಬರನ್ನು ಶೂನ್ಯಕ್ಕೆ ಕಳೆದುಕೊಂಡಿದ್ದರೂ ಮಧ್ಯಮ ಕ್ರಮಾಂಕದ ಬ್ಯಾಟರ್ ತಿಲಕ್ ವರ್ಮಾ ಅವರ ಅಜೇಯ ಅರ್ಧಶತಕದ(51 ರನ್, 43 ಎಸೆತ, 3 ಬೌಂಡರಿ, 2 ಸಿಕ್ಸರ್)ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 155 ರನ್ ಗಳಿಸಿತು.

ಚೆನ್ನೈ ಪರ ಮುಕೇಶ್ ಚೌಧರಿ(3-19) ಹಾಗೂ ಡ್ವೆಯ್ನೆ ಬ್ರಾವೊ(2-36) ಐದು ವಿಕೆಟ್‌ಗಳನ್ನು ಹಂಚಿಕೊಂಡರು.

 ಮೊದಲ ಓವರ್‌ನಲ್ಲಿಯೇ ನಾಯಕ ರೋಹಿತ್ ಶರ್ಮಾ(0)ಹಾಗೂ ಇಶಾನ್ ಕಿಶನ್(0)ವಿಕೆಟನ್ನು ಕಳೆದುಕೊಂಡ ಮುಂಬೈ ಅತ್ಯಂತ ಕಳಪೆ ಆರಂಭ ಪಡೆಯಿತು. ಮುಕೇಶ್ ಚೌಧರಿ ಈ ಇಬ್ಬರು ಆಟಗಾರರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಡೆವಾಲ್ಡ್ ಬ್ರೆವಿಸ್(4) ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲದೆ ಮುಕೇಶ್‌ಗೆ ಮೂರನೇ ಬಲಿಯಾದರು. ಮುಂಬೈ 23 ರನ್‌ಗೆ 3 ವಿಕೆಟ್ ಕಳೆದುಕೊಂಡಾಗ ಜೊತೆಯಾದ ಸೂರ್ಯಕುಮಾರ್ ಯಾದವ್(32 ರನ್, 21 ಎಸೆತ, 3 ಬೌಂಡರಿ, 1 ಸಿಕ್ಸರ್)ಹಾಗೂ ತಿಲಕ್ ವರ್ಮಾ(ಔಟಾಗದೆ 51, 43 ಎಸೆತ, 3 ಬೌಂಡರಿ, 2 ಸಿಕ್ಸರ್)4ನೇ ವಿಕೆಟ್‌ಗೆ 24 ರನ್ ಸೇರಿಸಿದರು.

ಯಾದವ್ ಔಟಾದ ಬಳಿಕ ಹೃತಿಕ್ ಶೋಕಿನ್(25 ರನ್, 25 ಎಸೆತ)ಅವರೊಂದಿಗೆ 5ನೇ ವಿಕೆಟ್‌ಗೆ 38 ರನ್ ಸೇರಿಸಿದ ವರ್ಮಾ ತಂಡವನ್ನು ಆಧರಿಸಿದರು. ಕಿರೋನ್ ಪೊಲಾರ್ಡ್(14 ರನ್) ಹಾಗೂ ಡೆನಿಯಲ್ ಸ್ಯಾಮ್ಸ್(5 ರನ್) ಅಲ್ಪ ಮೊತ್ತಕ್ಕೆ ಔಟಾದರೂ ದೃತಿಗೆಡದ ವರ್ಮಾ ಅವರು ಉನದ್ಕಟ್(ಔಟಾಗದೆ 19)ಅವರೊಂದಿಗೆ 8ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 35 ರನ್ ಸೇರಿಸಿ ತಂಡದ ಮೊತ್ತವನ್ನು 155ಕ್ಕೆ ತಲುಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X