Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಬಟ್ಲರ್ 3ನೇ ಶತಕ, ಡೆಲ್ಲಿ...

ಐಪಿಎಲ್: ಬಟ್ಲರ್ 3ನೇ ಶತಕ, ಡೆಲ್ಲಿ ವಿರುದ್ಧ ರಾಜಸ್ಥಾನ ಜಯಭೇರಿ

ವಾರ್ತಾಭಾರತಿವಾರ್ತಾಭಾರತಿ22 April 2022 6:10 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್: ಬಟ್ಲರ್ 3ನೇ ಶತಕ, ಡೆಲ್ಲಿ ವಿರುದ್ಧ ರಾಜಸ್ಥಾನ ಜಯಭೇರಿ

  ಮುಂಬೈ, ಎ.22: ಸತತ ಎರಡನೇ ಶತಕ ಸಿಡಿಸಿದ ಜೋಸ್ ಬಟ್ಲರ್ ಹಾಗೂ ಪ್ರಸಿದ್ಧ ಕೃಷ್ಣ ನೇತೃತ್ವದ ಬೌಲರ್‌ಗಳ ಸಂಘಟಿತ ಪ್ರದರ್ಶನದ ಸಹಾಯದಿಂದ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 15 ರನ್‌ಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 34ನೇ ಐಪಿಎಲ್ ಪಂದ್ಯದಲ್ಲಿ ಗೆಲ್ಲಲು 223 ರನ್ ಗುರಿ ಬೆನ್ನಟ್ಟಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ ಸೋಲೊಪ್ಪಿಕೊಂಡಿತು.

 ರಾಜಸ್ಥಾನಕ್ಕೆ ಗೆಲುವಿಗೆ 12 ಎಸೆತಗಳಲ್ಲಿ 36 ರನ್ ಅಗತ್ಯವಿತ್ತು. 19ನೇ ಓವರ್ ಬೌಲಿಂಗ್ ಮಾಡಿದ ಕೃಷ್ಣ ಅವರು ಲಲಿತ್‌ ಯಾದವ್ ವಿಕೆಟ್ ಕಬಳಿಸಿದ್ದಲ್ಲದೆ ಮೇಡನ್ ಓವರ್ ಎಸೆದು ರಾಜಸ್ಥಾನದ ಗೆಲುವಿಗೆ ತಡೆಯಾದರು.

ಡೆಲ್ಲಿ ಪರ ಪೃಥ್ವಿ ಶಾ(37ರನ್, 27 ಎಸೆತ)ಹಾಗೂ ಡೇವಿಡ್ ವಾರ್ನರ್(28 ರನ್, 14 ಎಸೆತ)ಮೊದಲ ವಿಕೆಟ್‌ಗೆ 43 ರನ್ ಸೇರಿಸಿ ಉತ್ತಮ ಆರಂಭ ಒದಗಿಸಿದರು. ವಾರ್ನರ್ ವಿಕೆಟ್ ಪಡೆದ ಕನ್ನಡಿಗ ಪ್ರಸಿದ್ಧ ಕೃಷ್ಣ(3-22)ಈ ಜೋಡಿಯನ್ನು ಬೇರ್ಪಡಿಸಿದರು. ನಾಯಕ ರಿಷಭ್ ಪಂತ್(44 ರನ್, 24 ಎಸೆತ, 4 ಬೌಂಡರಿ, 2 ಸಿಕ್ಸರ್), ಲಲಿತ್ ಯಾದವ್(37 ರನ್, 24 ಎಸೆತ)ಹಾಗೂ ಪೊವೆಲ್( 36 ರನ್,15 ಎಸೆತ, 5 ಸಿಕ್ಸರ್ ) ತಂಡಕ್ಕೆ ಗೆಲುವು ತಂದುಕೊಡಲು ಯತ್ನಿಸಿದರು.

 ಮೂರು ವಿಕೆಟ್ ಹಂಚಿಕೊಂಡ ಆರ್.ಅಶ್ವಿನ್(2-32)ಹಾಗೂ ಯಜುವೇಂದ್ರ ಚಹಾಲ್ (1-28)ಕೃಷ್ಣಗೆ ಸಾಥ್ ನೀಡಿದರು.

ಇದಕ್ಕೂ ಮೊದಲು ಡೆಲ್ಲಿ ತಂಡದಿಂದ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಜಸ್ಥಾನ ತಂಡ ಜೋಸ್ ಬಟ್ಲರ್ ಈ ವರ್ಷದ ಐಪಿಎಲ್‌ನಲ್ಲಿ ದಾಖಲಿಸಿದ ಮೂರನೇ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 222 ರನ್ ಗಳಿಸಿತು.

15ನೇ ಆವೃತ್ತಿಯ ಐಪಿಎಲ್‌ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಮೊದಲ ತಂಡ ಎನಿಸಿಕೊಂಡಿತು. ಇನಿಂಗ್ಸ್ ಆರಂಭಿಸಿದ ಜೋಸ್ ಬಟ್ಲರ್(116 ರನ್, 65 ಎಸೆತ, 9 ಬೌಂಡರಿ, 9 ಸಿಕ್ಸರ್)ಹಾಗೂ ದೇವದತ್ತ ಪಡಿಕ್ಕಲ್(54 ರನ್, 35 ಎಸೆತ, 7 ಬೌಂಡರಿ, 2 ಸಿಕ್ಸರ್)15.1ನೇ ಓವರ್‌ಗಳಲ್ಲಿ 155 ರನ್ ಸೇರಿಸಿ ಭರ್ಜರಿ ಆರಂಭ ಒದಗಿಸಿದರು. ಡೆಲ್ಲಿ ಬೌಲರ್‌ಗಳ ಮೇಲೆ ಪ್ರಾಬಲ್ಯ ಮೆರೆದ ಈ ಇಬ್ಬರು ಆರಂಭಿಕ ಬ್ಯಾಟರ್‌ಗಳು ಚೆಂಡನ್ನು ಮೈದಾನದ ಮೂಲೆಮೂಲೆಗೆ ಅಟ್ಟಿದರು.
   
ಪಡಿಕ್ಕಲ್ ಔಟಾದ ಬಳಿಕ ನಾಯಕ ಸಂಜು ಸ್ಯಾಮ್ಸನ್(ಔಟಾಗದೆ 46 ರನ್, 19 ಎಸೆತ, 5 ಬೌಂಡರಿ, 3 ಸಿಕ್ಸರ್) ಜೊತೆಗೆ ಕೈಜೋಡಿಸಿದ ಬಟ್ಲರ್ 2ನೇ ವಿಕೆಟ್‌ಗೆ 47 ರನ್ ಜೊತೆಯಾಟ ನಡೆಸಿದರು. ಬಟ್ಲರ್ 19ನೇ ಓವರ್‌ನಲ್ಲಿ ಮುಸ್ತಫಿಝುರ್ರಹ್ಮಾನ್‌ಗೆ (1-43)ವಿಕೆಟ್ ಒಪ್ಪಿಸಿದರು. ಬಟ್ಲರ್ 2022ರ ಐಪಿಎಲ್‌ನಲ್ಲಿ ಈಗಾಗಲೇ ಮುಂಬೈ ಇಂಡಿಯನ್ಸ್ (100 ರನ್) ಹಾಗೂ ಕೋಲ್ಕತಾ ನೈಟ್ ರೈಡರ್ಸ್(103 ರನ್) ವಿರುದ್ಧ ಶತಕ ದಾಖಲಿಸಿದ್ದಾರೆ. ಈ ಎರಡು ಪಂದ್ಯಗಳನ್ನು ರಾಜಸ್ಥಾನ ಜಯಿಸಿತ್ತು.

ಹೆಟ್ಮೆಯರ್(ಔಟಾಗದೆ 1) ಜೊತೆಗೆ ಮೂರನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 6 ಎಸೆತಗಳಲ್ಲಿ 20 ರನ್ ಸೇರಿಸಿದ ಸ್ಯಾಮ್ಸನ್ ರಾಜಸ್ಥಾನದ ಸ್ಕೋರನ್ನು 222ಕ್ಕೆ ತಲುಪಿಸಿದರು. ಖಲೀಲ್ ಅಹ್ಮದ್ ಒಂದು ವಿಕೆಟ್ ಪಡೆದರೂ 4 ಓವರ್‌ಗಳಲ್ಲಿ 47 ರನ್ ನೀಡಿ ದುಬಾರಿ ಬೌಲರ್ ಎನಿಸಿಕೊಂಡರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X