ʼಖೇಲೋ ಇಂಡಿಯಾ-2021ʼ ಉದ್ಘಾಟನಾ ಸಮಾರಂಭಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ

ಬೆಂಗಳೂರು : ಕ್ರೀಡಾ ವತ್ತು ಯುವ ಜನ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಖೇಲೋ ಇಂಡಿಯಾ - 2021 ವಿಶ್ವವಿದ್ಯಾಲಯ ಕ್ರೀಡೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅವರನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಮಯದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಚಿವರಾದ ಕೆ.ಸಿ.ನಾರಾಯಣಗೌಡ, ಲೋಕಸಭಾ ಸಂಸದ ಪಿ.ಸಿ.ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂಥ್, ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story




.jpeg)


