Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ ಜನರಿಗೆ ಕಮಿಷನ್ ಸರಕಾರಗಳ...

ರಾಜ್ಯದ ಜನರಿಗೆ ಕಮಿಷನ್ ಸರಕಾರಗಳ ಅಗತ್ಯವಿಲ್ಲ: ಎಎಪಿ

ವಾರ್ತಾಭಾರತಿವಾರ್ತಾಭಾರತಿ23 April 2022 5:58 PM IST
share
ರಾಜ್ಯದ ಜನರಿಗೆ ಕಮಿಷನ್ ಸರಕಾರಗಳ ಅಗತ್ಯವಿಲ್ಲ: ಎಎಪಿ

ಬೆಂಗಳೂರು, ಎ.23: “ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತವನ್ನು ಆಪ್ ಸರಕಾರ ಮಾತ್ರ ನೀಡಲಿದ್ದು, ಜೆಸಿಬಿ ಪಕ್ಷಗಳ ಭ್ರಷ್ಟಾಚಾರದ  ಬಗ್ಗೆ ಮಾತನಾಡುವ ಧೈರ್ಯ ಮತ್ತು ನೈತಿಕ ಅಧಿಕಾರ ಇಟ್ಟುಕೊಂಡಿದೆ. ಜನರಿಗೆ ಶೇ.40 ಅಥವಾ ಶೇ.20ರಷ್ಟು ಕಮಿಷನ್ ಸರಕಾರ ಬೇಕಿಲ್ಲ. ರಾಜ್ಯದ ಜನರಿಗೆ ಕೇವಲ ಶೂನ್ಯ ಭ್ರಷ್ಟಾಚಾರದ ಸರಕಾರ ಬೇಕಿದೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ತಿಳಿಸಿದರು.

ಶನಿವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಅವರು, “ಆಮ್ ಆದ್ಮಿ ಪಕ್ಷವು ರಾಜ್ಯದ ಮತ್ತು ದೇಶದ ಜನರಿಗೆ ಹೊಸ ಆಶಾಕಿರಣವಾಗಿ ಹೊರಹೊಮ್ಮುತ್ತಿದೆ. ಕಾಂಗ್ರೆಸ್ ಅತ್ಯಂತ ಹಳೆಯ ಪಕ್ಷವಾಗಿದ್ದು, ಇದರ ಉಪಯುಕ್ತತೆ ಅವಧಿ ಮೀರಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಹೋಗಿದೆ” ಎಂದರು.

“ಜೆಡಿಎಸ್‍ಗೆ ಸಮಯ ಮತ್ತು ಅವಕಾಶ ನೀಡಿದಾಗಲೂ ಭ್ರಷ್ಟಾಚಾರದ ಬಗ್ಗೆ ಏನೂ ಮಾಡಲು ಆಗಲಿಲ್ಲ ಎಂಬುದನ್ನು ಜೆಡಿಎಸ್ ಒಪ್ಪಿಕೊಂಡಿದೆ. ಆದ್ದರಿಂದ ಅವರು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಅರವಿಂದ ಅವರಿಗೆ ಏನು ಮಾಡಲು ಸಾಧ್ಯ ಎಂಬುದನ್ನು ತೋರಿಸಲು ಅವಕಾಶ ನೀಡಬೇಕು” ಎಂದು ಅವರು ಹೇಳಿದರು.

“ಅರವಿಂದರ ಆಪ್ ಪಕ್ಷ ತಾನು ಚುನಾವಣೆಯಲ್ಲಿ ಹೇಳಿದ್ದನ್ನು ದೆಹಲಿಯಲ್ಲಿ ಮಾಡಿ ತೋರಿಸಿದೆ. ಈಗ ಪಂಜಾಬಿನಲ್ಲೂ ಮಾಡುತ್ತಿದೆ. ಜಿರೋ ಪರ್ಸೆಂಟ್ ಎಂಬುದು ಕೇವಲ ಕನಸಲ್ಲ ನನಸು ಎಂಬುದನ್ನು ಜನತೆಗೆ ತೋರಿಸಿಕೊಟ್ಟಿದೆ ಎಂದ ಅವರು, ನಮಗೆ ಯಾರು ಯಾರ ಬಿ ಟೀಮ್ ಎಂಬ ಚರ್ಚೆ ನಿರರ್ಥಕವಾಗಿದ್ದು, ಆಪ್ ಕರ್ನಾಟಕದ ಎ ಟೀಮ್ ಎನ್ನುವುದು ಮುಖ್ಯವಾಗಿದೆ” ಎಂದರು.

“ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಕೆಲವು ಒಳ್ಳೆಯ ಜನಪ್ರತಿನಿಧಿಗಳು ಇದ್ದಾರೆ. ಅರವಿಂದ ಅವರು ಹೇಳಿದಂತೆ ಒಳ್ಳೆಯ ಮತ್ತು ಸಮಾನ ಮನಸ್ಕರು ಮುಂದೆ ಬಂದು ಆಪ್ ಪಕ್ಷ ಸೇರಿದರೆ, ರಾಜ್ಯದಲ್ಲಿ ರಾಜಕೀಯ ಬದಲಾವಣೆ ಸಾಧ್ಯವಾಗುತ್ತದೆ. ರಾಜ್ಯದ ಜನತೆಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡಬಹುದು” ಎಂದು ಅವರು ಹೇಳಿದರು.

ಇದುವರೆಗೆ ಆಪ್‍ನ ಉಚಿತ ವಿದ್ಯುತ್ ಯೋಜನೆಯ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದ ಬಿಜೆಪಿ, ಕೇಜ್ರಿವಾಲ್ ನಗರಕ್ಕೆ ಭೇಟಿ ನೀಡುತ್ತಿರುವ ವಿಚಾರ ಕಿವಿಗೆ ಬೀಳುತ್ತಲೇ, ಉಚಿತ ವಿದ್ಯುತ್ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ಮುಂದಾಗಿದೆ ಮತ್ತು ಎಸ್.ಸಿ. ಹಾಗೂ ಎಸ್.ಟಿ. ವರ್ಗದವರಿಗೆ 75 ಯೂನಿಟ್ ವಿದ್ಯುತ್ ಉಚಿತ ಎಂದು ಘೋಷಿಸಿದೆ. ಬಿಜೆಪಿಯ ಜನಪ್ರತಿನಿಧಿಗಳು ಶೇ.40 ಕಮಿಷನ್ ಪಡೆಯುವುದನ್ನು ನಿಲ್ಲಿಸಿದರೆ, ನಾಡಿನ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಬಹುದು.

-ಪೃಥ್ವಿ ರೆಡ್ಡಿ, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X