Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿಶ್ವ ವಿದ್ಯಾಲಯದ 40ನೆ...

ಮಂಗಳೂರು ವಿಶ್ವ ವಿದ್ಯಾಲಯದ 40ನೆ ಘಟಿಕೋತ್ಸವ; ರ‍್ಯಾಂಕ್ ಪಡೆದ ಗ್ರಾಮೀಣ ಸಾಧಕರು

ವಾರ್ತಾಭಾರತಿವಾರ್ತಾಭಾರತಿ23 April 2022 10:06 PM IST
share
ಮಂಗಳೂರು ವಿಶ್ವ ವಿದ್ಯಾಲಯದ 40ನೆ ಘಟಿಕೋತ್ಸವ; ರ‍್ಯಾಂಕ್ ಪಡೆದ ಗ್ರಾಮೀಣ ಸಾಧಕರು

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭದಲ್ಲಿ ಉಡುಪಿಯ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಐದು ರ್‍ಯಾಂಕ್ ಬಂದಿದೆ. ಇವುಗಳ ಪೈಕಿ ಮೂವರು ಪ್ರಥಮ ರ್‍ಯಾಂಕ್ ಪಡೆದರೆ, ಇನ್ನಿಬ್ಬರು ಐದು ಮತ್ತು ಏಳನೇ ರ್‍ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ತೆಂಕ ನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ದೀಪಿಕಾ ನಂದಿಕೂರು ಎರಡು ಚಿನ್ನ ಮತ್ತು ಒಂದು ನಗದು ಪುರಸ್ಕಾರ ಪಡೆದಿದ್ದಾರೆ. ಇವರ ತಂದೆ ಜಯಕುಮಾರ್ ಕೂಲಿ ಕಾರ್ಮಿಕರಾದರೆ, ತಾಯಿ ಲಲಿತಾ ಬೀಡಿ ಸುರುಟುವ ಕಾಯಕ ಮಾಡುತ್ತಾರೆ. ಈಕೆ ಹೆತ್ತವರ ಏಕೈಕ ಪುತ್ರಿ. ಮೀಸಲಾತಿ ಆಧಾರದಲ್ಲಿ ಸೀಟು ಪಡೆದಿದ್ದು ಇವರು, ಬಿಎಡ್ ಪದವಿ ಪಡೆಯಬೇಕೆನ್ನುವ ಕನಸು ಕಂಡಿದ್ದರು. ಆದರೆ ಫಲಿತಾಂಶ ವಿಳಂಬವಾದ ಕಾರಣ ತನ್ನ ಕನಸನ್ನು ಕೈಬಿಟ್ಟು, ಉದ್ಯೋಗ ಮಾಡಿ ಹೆತ್ತವರಿಗೆ ಆಧಾರವಾಗಲು ಬಯಸಿದ್ದಾರೆ.

ಇದೇ ಕಾಲೇಜಿನ ಎಂಎ ಇತಿಹಾಸ ವಿಭಾಗದ ವಿದ್ಯಾರ್ಥಿನಿ ಸಚ್ಚರಿಪೇಟೆಯ ರಕ್ಷಿತಾ ಪೂಜಾರಿ ಬೆಳ್ಮಣ್ ಎರಡು ಚಿನ್ನ ಮತ್ತು ಮೂರು ನಗದು ಪುರಸ್ಕಾರ ಪಡೆದಿದ್ದಾರೆ. ಇವರ ತಂದೆ ಉಮೇಶ್ ಪೂಜಾರಿ ಮತ್ತು ತಾಯಿ ಲಲಿತಾ ಪೂಜಾರಿ ಕೂಲಿ ಕಾರ್ಮಿಕರು. ಇವರಿಗೆ ತಂಗಿ ಇದ್ದು ನರ್ಸಿಂಗ್ ವಿದ್ಯಾರ್ಥಿನಿ. ಇವರು ಈಗಾಗಲೇ ಬಿಎಡ್ ಮಾಡುತ್ತಿದ್ದು ಪಿಎಚ್‌ಡಿ ಜೊತೆಗೆ ವೈಜ್ಞಾನಿಕ ಕ್ಷೇತ್ರದಲ್ಲಿ ಉನ್ನತ ಹುದ್ದೆಗೇರುವ ಕನಸು ಕಂಡಿದ್ದಾರೆ.

ಇದೇ ಕಾಲೇಜಿನ ಎಂ.ಎ. ಕನ್ನಡ ವಿಭಾಗದ ವಿದ್ಯಾರ್ಥಿನಿ ಕುಂದಾಪುರದ ರಜನಿ ಒಂದು ಚಿನ್ನ ಮತ್ತು ಆರು ನಗದು ಪುರಸ್ಕಾರ ಪಡೆದಿದ್ದಾರೆ. ಸಣ್ಣ ಪ್ರಾಯದಲ್ಲೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮೀನಾ ಅವಿದ್ಯಾವಂತೆಯಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದಾರೆ. ಅಣ್ಣ ಇದ್ದು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾರೆ. ಇವರ ಶಿಕ್ಷಣಕ್ಕೆ ಅಣ್ಣ ಮತ್ತು ಇಬ್ಬರು ಮಾವಂದಿರ ಬೆಂಬಲದಿಂದ ಸಾಧನೆ ಮಾಡಿರುವ ರಜನಿ, ಮುಂದಕ್ಕೆ ಯುಪಿಎಸ್ಸಿ ಮಾಡುವ ಅಭಿಲಾಷೆ ಹೊಂದಿದ್ದಾರೆ.

ಪತ್ರಿಕೋದ್ಯಮ ವಿಭಾಗ  ಉಡುಪಿ ಕಟಪಾಡಿ ಮಣಿಪುರ ಗ್ರಾಮದ ಶಾಯಿನ್ ವಾಹನ ಚಾಲಕ ಅಬ್ದುಲ್ ಹಮೀದ್-ಖತೀಜಾ ದಂಪತಿಯ ಪುತ್ರಿ. ಇವರು ಪತ್ರಿಕೋದ್ಯಮ ವಿಭಾಗದಲ್ಲಿ ಎರಡು ಚಿನ್ನ ಮತ್ತು ಮೂರು ನಗದು ಪುರಸ್ಕಾರ ಪಡೆದಿದ್ದಾರೆ. ಇವರಿಗೆ ಎರಡು ಅಕ್ಕಂದಿರಿದ್ದು ಒಬ್ಬರು ಬ್ಯಾಂಕ್ ಸಿಬ್ಬಂದಿಯಾಗಿದ್ದರೆ, ಇನ್ನೊಬ್ಬರು ಮದುವೆಯಾಗಿ ವಿದೇಶದಲ್ಲಿದ್ದಾರೆ. ಮುಂದಕ್ಕೆ ಪತ್ರಿಕೋದ್ಯಮದಲ್ಲಿ ಪಿಎಚ್‌ಡಿ ಮಾಡುವ ಗುರಿ ಹೊಂದಿದ್ದಾರೆ.

ಮಂಗಳೂರು ವಿವಿಯಲ್ಲಿ ಇಂಡಸ್ಟ್ರೀಸ್ ಕೆಮಿಸ್ಟ್ರಿ ವಿಭಾಗದಲ್ಲಿ ವಿಟ್ಲ ಮಂಗಿಲಪದವು ನಿವಾಸಿ ಕ್ರಿಸ್ಟಲ್ ಲಿವಿಯಾ ಮಸ್ಕರೇನಸ್ ಎರಡು ಚಿನ್ನದ ಪದಕ ಪಡೆದಿದ್ದಾರೆ.

ಇವರ ತಂದೆ ಫ್ರಾನ್ಸಸ್ ಮಸ್ಕರೇನಸ್ ನಿವೃತ್ತ ಶಿಕ್ಷಕರಾದರೆ ತಾಯಿ ಫ್ಲೋರಿನ್ ಡಿಸೋಜ ಶಿಕ್ಷಕಿ ವೃತ್ತಿಯಲ್ಲಿದ್ದಾರೆ. ಇವರಿಗೆ ತಮ್ಮ ಇದ್ದಾರೆ. ಬಿಎಸ್ಸಿಯಲ್ಲಿ ಒಂಬತ್ತನೇ ರ್‍ಯಾಂಕ್ ಪಡೆದಿದ್ದ ಇವರು, ಪ್ರಸ್ತುತ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ. ಮುಂದಕ್ಕೆ ಪಿಎಚ್‌ಡಿ ಮಾಡುವ ಕನಸು ಕಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X