Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜರವಾದ ಜಹಾಂಗೀರ್‌ಪುರಿ: ಜಹಾಂಗೀರ್‌ಪುರ...

ಪಂಜರವಾದ ಜಹಾಂಗೀರ್‌ಪುರಿ: ಜಹಾಂಗೀರ್‌ಪುರ ಸುತ್ತಲೂ ಪೊಲೀಸ್ ಸರ್ಪಗಾವಲು; ಟಿಎಂಸಿ ತಂಡದ ಸತ್ಯಶೋಧನಾ ವರದಿ

ವಾರ್ತಾಭಾರತಿವಾರ್ತಾಭಾರತಿ23 April 2022 11:35 PM IST
share
ಪಂಜರವಾದ ಜಹಾಂಗೀರ್‌ಪುರಿ: ಜಹಾಂಗೀರ್‌ಪುರ ಸುತ್ತಲೂ ಪೊಲೀಸ್ ಸರ್ಪಗಾವಲು; ಟಿಎಂಸಿ ತಂಡದ ಸತ್ಯಶೋಧನಾ ವರದಿ

ಹೊಸದಿಲ್ಲಿ,ಎ.23: ಕಳೆದ ವಾರ ಭಾರೀ ಹಿಂಸಾಚಾರಕ್ಕೆ ಸಾಕ್ಷಿಯಾದ ವಾಯವ್ಯ ದಿಲ್ಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ವಿಧಿಸಿರುವ ನಿರ್ಬಂಧಗಳಿಂದಾಗಿ ಅಲ್ಲಿನ ನಿವಾಸಿಗಳಿಗೆ ದೈನಂದಿನ ಜೀವನವನ್ನು ಸಾಗಿಸುವುದು ದುಸ್ತರವಾಗಿಬಿಟ್ಟಿದೆ ಎಂದು ಟಿಎಂಸಿ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಶನಿವಾರ ಆಪಾದಿಸಿದ್ದಾರೆ.

 ಜಹಾಂಗೀರ್‌ಪುರದಲಲಿ ಎಪ್ರಿಲ್ 16ರಂದು ನಡೆದ ಹಿಂಸಾಚಾರದ ಕೇಂದ್ರಬಿಂದುವಾಗಿದ್ದ ಸಿ ಬ್ಲಾಕ್ ಪಂಜರದಂತಾಗಿದೆ ಹಾಗೂ ಅಲ್ಲಿಂದ ಯಾರಿಗೂ ಹೊರಬರಲು ಬಿಡಲಾಗುತ್ತಿಲ್ಲವೆಂದು ಸರ್ವ ಮಹಿಳಾ ಸತ್ಯ ಶೋಧನಾ ತಂಡದ ನೇತೃತ್ವದ ವಹಿಸಿದ್ದ ದಸ್ತಿದಾರ್ ಅವರು ಆರೋಪಿಸಿದ್ದಾರೆ.ಜಹಾಂಗೀರ್‌ಪುರದ ನಿವಾಸಿಗಳು ಬೆದರಿಕೆಗೊಳಗಾಗಿದ್ದಾರೆ ಹಾಗೂ ಅವರು ಭೀತಿಯ ನೆರಳಿನಲ್ಲಿ ಬದುಕುತ್ತಿದ್ದಾರೆಂದು ಅವರು ತಿಳಿಸಿದರು. ತಮಗೆ ನೀರು ಕೂಡಾ ಲಭ್ಯವಾಗುತ್ತಿಲ್ಲವೆಂದು ಅಲ್ಲಿನ ನಿವಾಸಿಗಳು ದೂರುತ್ತಿದ್ದಾರೆಂದು ಹೇಳಿದರು.

  ಸಿ-ಬ್ಲಾಕ್‌ನ ಎಲ್ಲಾ ಪ್ರವೇಶ ಕೇಂದ್ರಗಳನ್ನು ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ ಹಾಗೂ ತಡೆಬೇಲಿಗಳನ್ನು ಹಾಕಲಾಗಿದೆ ಎಂದವರು ತಿಳಿಸಿದರು. ಕಟ್ಟುನಿಟ್ಟಿನ ನಿರ್ಬಂಧಗಳ ಹೊರತಾಗಿಯೂ ಟಿಎಂಸಿ ನಿಯೋಗವು ಕೆಲವು ಸ್ಥಳೀಯ ಮಕ್ಕಳ ನೆರವಿನಿಂದಾಗಿ ಜಹಾಂಗೀರ್‌ಪುರಿ ಪ್ರದೇಶವನ್ನು ತಲುಪುವಲ್ಲಿ ಸಫಲವಾಗಿದ್ದು ಅಲ್ಲಿನ ಹಲವಾರು ನಿವಾಸಿಗಳನ್ನು ಮಾತನಾಡಿಸಿತು. ಆನಂತರ ಪೊಲೀಸರು ತಮ್ಮನ್ನು ತಡೆದರು ಎಂದು ದಸ್ತಿದಾರ್ ತಿಳಿಸಿದರು. ಅಲ್ಲಿನ ಜನತೆ ಬೆದರಿಕೆ ಹಾಗೂ ಭೀತಿಯ ನಡುವೆ ಬದುಕುತ್ತಿದ್ದಾರೆಂದು ಅವರು ಹೇಳಿದರು.

ಜಹಾಂಗೀರ್‌ಪುರದ ಅನೇಕ ನಿವಾಸಿಗಳು ರದ್ದಿ ಮಾರಾಟಗಾರರಾಗಿದ್ದು, ನಿರ್ಬಂಧಗಳಿಂದಾಗಿ ಅವರ ದೈನಂದಿನ ದುಡಿಮೆಯಿಂದ ಹಣ ಸಂಪಾದಿಸಲು ಸಾಧ್ಯವಾಗುತ್ತಿಲ್ಲವೆಂದು ದಸ್ತಿದಾರ್ ಆತಂಕ ವ್ಯಕ್ತಪಡಿಸಿದರು. ಜಹಾಂಗೀರ್‌ಪುರದ 200ಕ್ಕೂ ಅಧಿಕ ನಿವಾಸಿಗಳನ್ನು ನಿಯೋಗವು ಮಾತನಾಡಿಸಿದೆ ಎಂದವರು ತಂಡದಲ್ಲಿದ್ದ ಟಿಎಂಸಿ ಸಂಸದೆ ಸೌಗತಾ ರಾಯ್ ತಿಳಿಸಿದರು. ನಿಯೋಗವು ತನ್ನ ವರದಿಯನ್ನು ರವಿವಾರ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಲ್ಲಿಸಲಿದೆ. ಜಹಾಂಗೀರ್‌ಪುರದ ನಿವಾಸಿಗಳಿಗೆ ನೆರವು ನೀಡಲು ನಾವು ಸಿದ್ಧರಿದ್ದೇವೆಂದು ರಾಯ್‌ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X