Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವರ್ಷದ 3 ತಿಂಗಳಲ್ಲಿ ದೇಶಕ್ಕೆ ಮೂವರು...

ಈ ವರ್ಷದ 3 ತಿಂಗಳಲ್ಲಿ ದೇಶಕ್ಕೆ ಮೂವರು ಮುಖ್ಯ ನ್ಯಾಯಮೂರ್ತಿಗಳು!

ವಾರ್ತಾಭಾರತಿವಾರ್ತಾಭಾರತಿ25 April 2022 7:32 AM IST
share
ಈ ವರ್ಷದ 3 ತಿಂಗಳಲ್ಲಿ ದೇಶಕ್ಕೆ ಮೂವರು ಮುಖ್ಯ ನ್ಯಾಯಮೂರ್ತಿಗಳು!

ಹೊಸದಿಲ್ಲಿ: ಒಂದೇ ವರ್ಷದಲ್ಲಿ ದೇಶದ ನ್ಯಾಯಾಂಗದ ಅತ್ಯುನ್ನತ ಹುದ್ದೆಯನ್ನು ಒಬ್ಬರಿಗಿಂತ ಹೆಚ್ಚು ನ್ಯಾಯಮೂರ್ತಿಗಳು ಅಲಂಕರಿಸಿರುವ ಸಾಕಷ್ಟು ನಿದರ್ಶನಗಳು ನ್ಯಾಯಾಂಗ ಇತಿಹಾಸದಲ್ಲಿವೆ. ಆದರೆ 2022 ಮಾತ್ರ ವಿಶೇಷ ಎನಿಸಲಿದ್ದು, ಈ ವರ್ಷದ ಮೂರು ತಿಂಗಳಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಮೂವರು ಅಲಂಕರಿಸಲಿದ್ದಾರೆ.

1991ರಲ್ಲಿ ಮೂರು ತಿಂಗಳ ಅವಧಿಯಲ್ಲಿ ಮೂವರು ನ್ಯಾಯಮೂರ್ತಿಗಳು ಅತ್ಯುನ್ನತ ಹುದ್ದೆ ಅಲಂಕರಿಸಿದ್ದು ಹೊರತುಪಡಿಸಿದರೆ ಇಂಥ ನಿದರ್ಶನ ಇದೇ ಮೊದಲು.

ಹಾಲಿ ಸಿಜೆಐ ಎನ್.ವಿ.ರಮಣ ತಮ್ಮ 16 ತಿಂಗಳ ಅಧಿಕಾರಾವಧಿ ಬಳಿಕ ಆಗಸ್ಟ್ 26ರಂದು ನಿವೃತ್ತರಾಗುವರು. ಬಳಿಕ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಉದಯ್ ಯು ಲಲಿತ್ ಅಲಂಕರಿಸುವರು. ಆದರೆ ಇವರ ಅಧಿಕಾರಾವಧಿ ಕೇವಲ ಎರಡು ತಿಂಗಳು ಮಾತ್ರ ಇರುತ್ತದೆ. ನವೆಂಬರ್ 8ರಂದು ಅವರು ನಿವೃತ್ತರಾಗಲಿದ್ದು, ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರಿಗೆ ದಾರಿ ಮಾಡಿಕೊಡಲಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ಮುಂದಿನ ಎರಡು ವರ್ಷ ಅವಧಿಗೆ ದೇಶದ ಸಿಜೆಐ ಆಗಿರುತ್ತಾರೆ.

ಇಷ್ಟೊಂದು ಕ್ಷಿಪ್ರವಾಗಿ ಅಂದರೆ 76 ದಿನಗಳ ಅವಧಿಯಲ್ಲಿ ಮೂವರು ಮುಖ್ಯ ನ್ಯಾಯಮೂರ್ತಿಗಳನ್ನು ದೇಶ ಕಾಣುತ್ತಿರುವ ಎರಡನೇ ನಿದರ್ಶನ ಇದು. 

ಈ ಮುನ್ನ 1991ರ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಮೂವರು ನ್ಯಾಯಮೂರ್ತಿಗಳು ಅತ್ಯುನ್ನತ ಹುದ್ದೆ ಅಲಂಕರಿಸಿದ್ದರು. ನ್ಯಾಯಮೂರ್ತಿ ರಂಗನಾಥ್ ಮಿಶ್ರಾ 1991ರ ನವೆಂಬರ್ 24ರಂದು ನಿವೃತ್ತರಾಗಿದ್ದರು. ಬಳಿಕ ನ್ಯಾಯಮೂರ್ತಿ ಕಮಲ್ ನಾರಾಯಣ್ ಸಿಂಗ್ ಸಿಜೆಐ ಆಗಿ ಅಧಿಕಾರ ವಹಿಸಿಕೊಂಡಿದ್ದು, ನವೆಂಬರ್ 25ರಿಂದ ಡಿಸೆಂಬರ್ 12ರವರೆಗೆ ಅಧಿಕಾರದಲ್ಲಿದ್ದರು. ಇದು ದೇಶದಲ್ಲಿ ಮುಖ್ಯ ನ್ಯಾಯಮೂರ್ತಿಗಳ ಅತ್ಯಂತ ಕಡಿಮೆ ಅಧಿಕಾರಾವಧಿ ಎನಿಸಿಕೊಂಡಿದೆ. ಬಳಿಕ ಡಿಸೆಂಬರ್ 13ರಂದು ನ್ಯಾಯಮೂರ್ತಿ ಎಂ.ಕೆ.ಕನಿಯಾ ಅವರು ಅಧಿಕಾರ ವಹಿಸಿಕೊಂಡು 1992ರ ನವೆಂಬರ್ 17ರವರೆಗೆ ಈ ಹುದ್ದೆಯಲ್ಲಿದ್ದರು.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಜ್ಯೇಷ್ಠತೆ ಆಧಾರದಲ್ಲಿ ಸಿಜೆಐ ಹುದ್ದೆ ಪಡೆಯುತ್ತಾರೆ. ಸಿಜೆಐ ಅವರ ಅಧಿಕಾರಾವಧಿಯನ್ನು ನಿಗದಿಪಡಿಸಿಲ್ಲ. ಸಂವಿಧಾನದ ಪ್ರಕಾರ, ಈ ಅತ್ಯುನ್ನತ ಹುದ್ದೆಯಲ್ಲಿರುವವರ ನಿವೃತ್ತಿ ವಯಸ್ಸು 65 ಆಗಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X