Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 6,500 ಕೋ.ರೂ. ಕಾಮಗಾರಿ ಟೆಂಡರ್‌ನಲ್ಲಿ...

6,500 ಕೋ.ರೂ. ಕಾಮಗಾರಿ ಟೆಂಡರ್‌ನಲ್ಲಿ ಅಕ್ರಮ?

ರಾಜೀನಾಮೆ ಬಳಿಕವೂ ಈಶ್ವರಪ್ಪರನ್ನು ಬೆಂಬಿಡದ ಭ್ರಷ್ಟಾಚಾರದ ಆರೋಪ

ಜಿ.ಮಹಾಂತೇಶ್ಜಿ.ಮಹಾಂತೇಶ್25 April 2022 7:53 AM IST
share
6,500 ಕೋ.ರೂ. ಕಾಮಗಾರಿ ಟೆಂಡರ್‌ನಲ್ಲಿ ಅಕ್ರಮ?

ಬೆಂಗಳೂರು: ಜಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿಯಲ್ಲಿ ಒಟ್ಟು 6,500 ಕೋಟಿ ರೂ. ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳುವ ಸಂಬಂಧ ಕರೆದಿರುವ ಟೆಂಡರ್‌ನಲ್ಲಿ ಅಕ್ರಮಗಳು ನಡೆದಿವೆ ಎಂಬ ಗುರುತರವಾದ ಆರೋಪಗಳು ಕೇಳಿ ಬಂದಿವೆ. ಅಲ್ಲದೆ 50.00 ಕೋಟಿ ರೂ. ಮೊತ್ತ ಮೀರಿದ ಕಾಮಗಾರಿಗಳ ಟೆಂಡರ್‌ನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಟೆಂಡರ್ ಪರಿಶೀಲನಾ ಸಮಿತಿಯ ಪರಿಶೀಲನೆ ವ್ಯಾಪ್ತಿಗೆ ಒಳಪಡಬೇಕು ಎಂದು ಆರ್ಥಿಕ ಇಲಾಖೆಯು 2021ರ ಡಿಸೆಂಬರ್ 21ರಂದು ಹೊರಡಿಸಿದ್ದ ಸುತ್ತೋಲೆಯ ಉಲ್ಲಂಘನೆಯಾ ಗಿದೆ ಎಂಬ ಆಪಾದನೆ ಕೇಳಿ ಬಂದಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಉಲ್ಲಂಘನೆ, ಅಕ್ರಮಗಳಿಗೆ ಸಂಬಂಧಿಸಿದಂತೆ ಕೆಲ ದಾಖಲೆಗಳು ‘The-file.in’ಗೆ ಲಭ್ಯವಾಗಿವೆ.

40 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಈ ಟೆಂಡರ್ ಪ್ರಕ್ರಿಯೆ ನಡೆದಿದೆ. ಇದರಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ, ಶಿವಮೊಗ್ಗ ನಗರ ಮತ್ತು ಗೋಪಿಶೆಟ್ಟಿಕೊಪ್ಪ, ಯಾದಗಿರಿ, ರಾಯಚೂರು ಜಿಲ್ಲೆಯ ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿನ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರು ಯೋಜನೆಗೆ 6,500 ಕೋಟಿ ರೂ. ಮೊತ್ತದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ 2022ರ ಎಪ್ರಿಲ್ 5 ಮ್ತು 8ರಂದು ಟೆಂಡರ್ ಆಹ್ವಾನಿಸಿತ್ತು. (RWSSD/2022-23/WS/WORK_INDENT40057,RWSSD/2021 22/WS/WORK_INDENT39829,RWSSD/2021-22/WS/WORK_INDENT39816,RWSSD/2021-22/WS/WORK_INDENT39811,RWSSD/2022-23/WS/WORK_INDENT40015,RWSSD/2022-23/WS/WORK_INDENT40048,RWSSD/2022-23/WS/WORK_INDENT40037) ಈ ಟೆಂಡರ್‌ನಲ್ಲಿ ನಿರ್ದಿಷ್ಟ ಗುತ್ತಿಗೆದಾರರು ಮತ್ತು ಕಂಪೆನಿಗಳಷ್ಟೇ ಭಾಗವಹಿಸಲು ಅನುಕೂಲ ಮಾಡಿಕೊಟ್ಟಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕೆಟಿಪಿಪಿ ಕಾಯ್ದೆ 5ನೇ ಅಧ್ಯಾಯದ ಪ್ರಕಾರ 2 ಕೋಟಿ ರೂ. ಮೊತ್ತಕ್ಕೂ ಮೀರಿದ ಕಾಮಗಾರಿಗಳ ಟೆಂಡರ್‌ನಲ್ಲಿ ಬಿಡ್ ಮಾಡಲು ಮತ್ತು ಟೆಂಡರ್‌ಗೆ ಲಗತ್ತಿಸಬೇಕಾದ ದಾಖಲೆಗಳನ್ನು ಒದಗಿಸಲು ಕನಿಷ್ಠ 30 ದಿನಗಳ ಕಾಲಾವಕಾಶ ನೀಡಬೇಕು. ಆದರೆ ಇಲಾಖೆಯು ತರಾತುರಿಯಲ್ಲಿ ಟೆಂಡರ್ ಆಹ್ವಾನಿಸಿ ಕೇವಲ 5-8 ದಿನಗಳ ಕಾಲಾವಕಾಶ ಮಾತ್ರ ನೀಡಿದೆ ಎಂಬ ಆಪಾದನೆ ಕೇಳಿ ಬಂದಿದೆ.

ಅಲ್ಲದೆ ಕಾಮಗಾರಿ ವಿನ್ಯಾಸ ಮತ್ತು ಈ ಸಂಬಂಧದ ವರದಿಯನ್ನು 5-8 ದಿನದಲ್ಲಿ ಸಿದ್ಧಪಡಿಸಲು ಗುತ್ತಿಗೆದಾರರಿಗೆ ಅಸಾಧ್ಯವಾಗಿದೆ. ಇದೊಂದು ಸಿವಿಲ್ ಕಾಮಗಾರಿಯಾಗಿದ್ದು, ಇದನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಕನಿಷ್ಠ 30 ತಿಂಗಳು ಬೇಕಾಗಲಿದೆ. ಹೀಗಾಗಿ ವರದಿ ಸಿದ್ಧಪಡಿಸಲು ಕಾಲಾವಕಾಶ ಬೇಕಿದೆ. ಆದರೆ 5-8 ದಿನಗಳು ಮಾತ್ರ ಕಾಲಾವಕಾಶ ನೀಡುವ ಮೂಲಕ ಆಯ್ದ ಮತ್ತು ನಿರ್ದಿಷ್ಟ ಗುತ್ತಿಗೆದಾರರು, ಕಂಪೆನಿಗಳು ಮಾತ್ರ ಭಾಗವಹಿಸಲು ಅವಕಾಶ ನೀಡಿರುವುದರ ಹಿಂದೆ ದೊಡ್ಡಮಟ್ಟದ ಕಮಿಷನ್ ವ್ಯವಹಾರ ನಡೆದಿದೆ ಎಂದು ಕೆಲ ಗುತ್ತಿಗೆದಾರರು ‘ದಿ ಫೈಲ್’ಗೆ ಪ್ರತಿಕ್ರಿಯಿಸಿದ್ದಾರೆ. ಇನ್ನು, ಅನರ್ಹ ಗುತ್ತಿಗೆದಾರರು, ಕಂಪೆನಿಗಳೂ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಕೂಲ ಮಾಡಿಕೊಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿ ನಿರ್ವಹಿಸಲು ಜಂಟಿ ಸಹಭಾಗಿತ್ವದಡಿಯಲ್ಲಿ ಶೇ.25ರಷ್ಟು ಕಾಮಗಾರಿ ನಡೆಸಿ ಪ್ರಗತಿ ಸಾಧಿಸಿ ರಬೇಕು. ಅಲ್ಲದೆ ಹಣಕಾಸು ಮತ್ತು ತಾಂತ್ರಿಕ ಸಾಮರ್ಥ್ಯ ಹೊಂದಿರಬೇಕು. ನಿಗದಿತ ಕಾಲಾವಧಿ ಮತ್ತು ಗುರಿಯೊಳಗೆ ಕಾಮಗಾರಿ ನಿರ್ವಹಿಸಿರುವ ಅನುಭವ ಇರಬೇಕು. ಆದರೆ ಟೆಂಡರ್‌ನಲ್ಲಿ ಈಗ ಬಿಡ್ ಮಾಡಿರುವ ಕಂಪೆನಿ, ಗುತ್ತಿಗೆದಾರರ ಪೈಕಿ ಬಹುತೇಕರಿಗೆ ಅನುಭವ, ಅರ್ಹತೆ, ತಾಂತ್ರಿಕ ಮತ್ತು ಹಣಕಾಸು ಸಾಮರ್ಥ್ಯವೇ ಇಲ್ಲ ಎಂದು ಗೊತ್ತಾಗಿದೆ.

ಜಲಜೀವನ್ ಮಿಷನ್, ಬಹು ಗ್ರಾಮ ಕುಡಿಯುವ ನೀರು ಸರಬರಾಜು ಕಾಮಗಾರಿ ಟೆಂಡರ್‌ನಲ್ಲಿ ವಿಧಿಸಿರುವ ನಿಯಮಗಳ ಪ್ರಕಾರ ಯಾರು ಬೇಕಾದರೂ ಬಿಡ್ ಮಾಡಲು ಅವಕಾಶ ಕಲ್ಪಿಸಿರುವುದು ಅಕ್ರಮಕ್ಕೆ ದಾರಿಮಾಡಿಕೊಡಲಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ.

 ತಕ್ಷಣವೇ ಟೆಂಡರನ್ನು ರದ್ದುಗೊಳಿಸಬೇಕು. ಜಂಟಿ ಸಹಭಾಗಿತ್ವದಡಿಯಲ್ಲಿ ಭಾಗವಹಿಸಿರುವ ಕಂಪೆನಿ, ಗುತ್ತಿಗೆದಾರರಿಗೆ ತಾಂತ್ರಿಕ, ಅನುಭವ ಹೊಂದಿರಬೇಕು ಎಂಬ ಷರತ್ತು ವಿಧಿಸಬೇಕು. 2021ರ ಡಿಸೆಂಬರ್21ರಂದು ಆರ್ಥಿಕ ಇಲಾಖೆ ಹೊರಡಿಸಿರುವ ಸುತ್ತೋಲೆ ಪ್ರಕಾರ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಟೆಂಡರ್ ಪರಿಶೀಲನಾ ಸಮಿತಿಯು ಪರಿಶೀಲಿಸಬೇಕು. ಬಿಡ್ ಮಾಡಲು ಕನಿಷ್ಠ 30 ದಿನಗಳ ಕಾಲಾವಕಾಶ ನೀಡಬೇಕು. ಅಲ್ಲದೆ ಈ ಅಕ್ರಮದಲ್ಲಿ ಭಾಗಿಯಾಗಿರುವ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಸಾರ್ವಜನಿಕರ ಹಣವನ್ನು ರಕ್ಷಿಸಬೇಕು ಎನ್ನುತ್ತಾರೆ ಗುತ್ತಿಗೆದಾರರೊಬ್ಬರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X