Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ತಿರಂಗಾ ಯಾತ್ರಾ' ನಡೆಸಿ ಕೋಮು...

'ತಿರಂಗಾ ಯಾತ್ರಾ' ನಡೆಸಿ ಕೋಮು ಸೌಹಾರ್ದತೆಯ ಸಂದೇಶ ಸಾರಿದ ಜಹಾಂಗೀರ್​​ಪುರಿ ನಿವಾಸಿಗಳು

ವಾರ್ತಾಭಾರತಿವಾರ್ತಾಭಾರತಿ25 April 2022 10:57 AM IST
share
ತಿರಂಗಾ ಯಾತ್ರಾ ನಡೆಸಿ ಕೋಮು ಸೌಹಾರ್ದತೆಯ ಸಂದೇಶ ಸಾರಿದ ಜಹಾಂಗೀರ್​​ಪುರಿ ನಿವಾಸಿಗಳು

ಹೊಸದಿಲ್ಲಿ: ಹನುಮಾನ್ ಜಯಂತಿ ದಿನ ಮೆರವಣಿಗೆ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾದ ರಾಜಧಾನಿಯ ಜಹಾಂಗೀರ್​​ಪುರಿ ಪ್ರದೇಶದ ಸುಮಾರು 200 ಮಂದಿ ಹಿಂದು ಮತ್ತು ಮುಸ್ಲಿಮ್ ನಿವಾಸಿಗಳು ರವಿವಾರ ಸಂಜೆ 'ತಿರಂಗಾ ಯಾತ್ರಾ' ನಡೆಸಿ ಕೋಮು ಸೌಹಾರ್ದತೆಯ ಸಂದೇಶ ಸಾರಿದ್ದಾರೆ ಎಂದು The Hindu ವರದಿ ಮಾಡಿದೆ.

ಮೆರವಣಿಗೆಯಲ್ಲಿ ಭಾಗವಹಿಸಿದವರೆಲ್ಲರೂ ಭಾರತದ ತ್ರಿವರ್ಣ ಧ್ವಜವನ್ನು ಕೈಯ್ಯಲ್ಲಿ ಹಿಡಿದುಕೊಂಡಿದ್ದರಲ್ಲದೆ 'ಹಿಂದು ಮುಸ್ಲಿಂ ಸಿಖ್ ಇಸಾಯಿ ಆಪಸ್ ಮೇ ಹೇ ಭಾಯಿ ಭಾಯಿ' ( ಹಿಂದುಗಳು, ಮುಸ್ಲಿಮರು, ಸಿಖರು, ಕ್ರೈಸ್ತರು ಎಲ್ಲರೂ ಸಹೋದರರು), ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿದ್ದಾರೆ.

ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತಾದರೂ ಹಲವಾರು ಬ್ಯಾರಿಕೇಡುಗಳನ್ನು ತೆಗೆಯಲಾಗಿತ್ತು.

ಕಳೆದ ವಾರ ಉತ್ತರ ದಿಲ್ಲಿ ಮುನಿಸಿಪಲ್ ಕಾರ್ಪೊರೇಷನ್ ಒತ್ತುವರಿ ತೆರವು ಕಾರ್ಯಾಚರಣೆಯ ಭಾಗವಾಗಿ ಹಲವಾರು ಕಟ್ಟಡಗಳನ್ನು ನೆಲಸಮಗೊಳಿಸಿದ ಸಿ ಬ್ಲಾಕ್‍ನಿಂದ ಆರಂಭಗೊಂಡ ಮೆರವಣಿಗೆ ಹೆಚ್ಚಾಗಿ ಹಿಂದುಗಳೇ ವಾಸಿಸುವ ಸಿ ಬ್ಲಾಕ್‍ನತ್ತ ಸಾಗಿತ್ತಲ್ಲದೆ ಸುಮಾರು 30 ನಿಮಿಷಗಳಲ್ಲಿ ಕೊನೆಗೊಂಡಿದೆ.

ಈ ತಿರಂಗಾ ಯಾತ್ರೆಯ ಸಂದರ್ಭ ಪ್ರದೇಶದ ಹಲವಾರು ಅಂಗಡಿಗಳು ಹಾಗೂ ಮನೆಗಳ ಮುಂದೆ ಭಾರತದ ರಾಷ್ಟ್ರಧ್ವಜ ಹಾರಾಡುತ್ತಿತ್ತು.

ಹನುಮಾನ್ ಜಯಂತಿ ಸಂದರ್ಭ ಹಿಂಸೆಯಲ್ಲಿ ತೊಡಗಿಕೊಂಡವರು ಹೊರಗಿನವರಾಗಿದ್ದಾರೆ ಹಾಗೂ ಈ ಮೆರವಣಿಗೆ ಶಾಂತಿಯತ್ತ ಮೊದಲ ಹೆಜ್ಜೆ ಎಂದು ಅಲ್ಲಿನ ವರ್ತಕರೊಬ್ಬರು ಹೇಳಿದ್ದಾರೆ.

"ಹಲವರು ಸ್ಥಳೀಯ ಮುಸ್ಲಿಮರನ್ನು ಬಾಂಗ್ಲಾದೇಶಿಗಳು ಮತ್ತು ಪತ್ತರ್‍ಬಾಝ್ ಎಂದು ಹೀಗಳೆದಿದ್ದರು ಆದರೆ ಇಂದು ಎಲ್ಲರೂ ಎಲ್ಲವನ್ನೂ ಮರೆತು ನನ್ನನು ಆಲಂಗಿಸಿದ್ದಾರೆ. ನಾವೆಲ್ಲರೂ ಸಹೋದರರಂತೆ ಬಾಳಬೇಕು, ಪರಿಸ್ಥಿತಿ ಸುಧಾರಿಸಬಹುದು,'' ಎಂಬ ಆಶಾವಾದವನ್ನು ಸ್ಥಳೀಯ ನಿವಾಸಿ, ಮೊಬೈಲ್ ಫೋನ್ ಮಾರಾಟಗಾರ ಇಶ್ರಾರ್ ಖಾನ್ ಹೇಳುತ್ತಾರೆ. ಅವರ ಅಂಗಡಿಯ ಒಂದು ಭಾಗವನ್ನು ಇತ್ತೀಚಿಗಿನ ತೆರವು ಕಾರ್ಯಾಚರಣೆ ವೇಳೆ ನೆಲಸಮಗೊಳಿಸಲಾಗಿತ್ತು.

ಈ ತಿರಂಗಾ ಯಾತ್ರಾ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ಉಷಾ ರಂಗ್ನಾನಿ, ತ್ರಿವರ್ಣವು ಎಲ್ಲಕ್ಕಿಂತಲೂ ಮಿಗಿಲು ಎಂದು ಎರಡೂ ಸಮುದಾಯದವರು ತೋರಿಸಿಕೊಟ್ಟಿದ್ದಾರೆ. ದೇಶ ಮೊದಲು ಎಂಬ ಸಂದೇಶವನ್ನೂ ಸಾರಿದ್ದಾರೆ,'' ಎಂದರು.

People from all communities took out a Tiranga yatra in riot-hit #Jahangirpuri, #Delhi on Sunday. (Video by Gajendra Yadav) pic.twitter.com/FrgNWVdMAl

— The Indian Express (@IndianExpress) April 24, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X