Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಉಕ್ರೇನ್ʼನಿಂದ ಬಂದ ವಿದ್ಯಾರ್ಥಿಗಳ...

'ಉಕ್ರೇನ್ʼನಿಂದ ಬಂದ ವಿದ್ಯಾರ್ಥಿಗಳ ಬಗ್ಗೆ ಉಪೇಕ್ಷೆ ಮಾಡಿದರೆ ಸಹಿಸುವ ಪ್ರಶ್ನೆ ಇಲ್ಲ: ಕುಮಾರಸ್ವಾಮಿ

''ನಮ್ಮ ಇಡೀ ಶಿಕ್ಷಣ ವ್ಯವಸ್ಥೆ ಹಣವಂತರು, ರಾಜಕಾರಣಿಗಳ ಕಪಿಮುಷ್ಠಿಯಲ್ಲಿದೆ''

ವಾರ್ತಾಭಾರತಿವಾರ್ತಾಭಾರತಿ25 April 2022 11:54 AM IST
share
ಉಕ್ರೇನ್ʼನಿಂದ ಬಂದ ವಿದ್ಯಾರ್ಥಿಗಳ ಬಗ್ಗೆ ಉಪೇಕ್ಷೆ ಮಾಡಿದರೆ ಸಹಿಸುವ ಪ್ರಶ್ನೆ ಇಲ್ಲ: ಕುಮಾರಸ್ವಾಮಿ

ಬೆಂಗಳೂರು: 'ಯುದ್ಧಪೀಡಿತ ಉಕ್ರೇನ್ʼನಿಂದ ವಾಪಸಾದ ವಿದ್ಯಾರ್ಥಿಗಳ ನೆರವಿಗೆ ನಾವಿದ್ದೇವೆ, ಹೆದರಬೇಕಿಲ್ಲ ಎಂದು ಹೇಳುತ್ತಿದ್ದ ಎರಡೂ ಸರಕಾರಗಳು; ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿಲ್ಲ, ಏಕೆ?' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 

ಈ ಸಂಬಂಧ ಸೋಮವಾರ ಟ್ವೀಟ್ ಮಾಡಿರುವ ಅವರು, ' ಒಂದೆಡೆ ನೀಟ್ ವ್ಯವಸ್ಥೆಯನ್ನು ಇಡೀ ದೇಶದ ಮೇಲೆ ಹೇರಿ, ವೈದ್ಯಶಿಕ್ಷಣವನ್ನು ಶ್ರೀಮಂತರಿಗೆ ಸಮರ್ಪಣೆ ಮಾಡಿದ ಪಾಪದ ಫಲವಷ್ಟೇ ಇದು. ಉಕ್ರೇನ್ ದೇಶದಿಂದ ವಾಪಸ್ ಬಂದ ರಾಜ್ಯದ 700ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವೈದ್ಯಶಿಕ್ಷಣ ಸಚಿವ  ಸುಧಾಕರ್ ಅವರು ಕೊಟ್ಟ ಭರವಸೆ ಏನಾಯಿತು? ರಾಜ್ಯ ಸರಕಾರವು ಕೇಂದ್ರದ ಕಡೆ ಮುಖ ಮಾಡಿ ಕೂತಿದೆ, ಇದು ಸರಿಯಲ್ಲ. ಕೇಂದ್ರದ ಮೇಲೆ ಒತ್ತಡ ಹೇರಬೇಕಿದೆ' ಎಂದು ಆಗ್ರಹಿಸಿದರು.

'ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಕೂಡಲೇ ಮಧ್ಯಪ್ರವೇಶ ಮಾಡಿ ವಿದ್ಯಾರ್ಥಿಗಳ ಹಿತರಕ್ಷಣೆ ಮಾಡಲೇಬೇಕು. ಇತ್ತ ಭಾರತದಲ್ಲೂ ವ್ಯಾಸಂಗ ಮಾಡಲಾಗದೆ, ಅತ್ತ ಉಕ್ರೇನ್ʼಗೂ ಮರಳಿ ಹೋಗಲಾರದೆ ಈ ವಿದ್ಯಾರ್ಥಿಗಳೆಲ್ಲರೂ ಅತಂತ್ರ ಸ್ಥಿತಿಯಲ್ಲಿದ್ದಾರೆ' ಎಂದು ತಿಳಿಸಿದರು. 

'ನಮ್ಮ ದೇಶದಲ್ಲಿ ಉನ್ನತ ಶಿಕ್ಷಣ & ವೈದ್ಯಶಿಕ್ಷಣ ಹೆಚ್ಚು ದುಬಾರಿ ಎನ್ನುವ ಕಾರಣಕ್ಕೆ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗುತ್ತಿದ್ದಾರೆ.
ನಮ್ಮಲ್ಲಿ ಇಡೀ ಶಿಕ್ಷಣ ವ್ಯವಸ್ಥೆಯು ಹಣವಂತರು, ರಾಜಕಾರಣಿಗಳ ಕಪಿಮುಷ್ಠಿಯಲ್ಲಿದೆ. ಶಿಕ್ಷಣ ಲಾಭದಾಯಕ ಉದ್ಯಮವಾಗಿ ಬಡ-ಮಧ್ಯಮ ವರ್ಗದ ಮಕ್ಕಳಿಗೆ ವೈದ್ಯಶಿಕ್ಷಣ ಗಗನಕುಸುಮವಾಗಿದೆ' ಎಂದರು.  

ನೀಟ್ ಅನ್ನು ಬಲವಂತವಾಗಿ ಹೇರಿ, ಟ್ಯೂಷನ್‌ ಅಂಗಡಿಗಳಿಗೆ ಬಿಸಿನೆಸ್‌ ಮಾಡಿಕೊಟ್ಟು, ವೈದ್ಯ ಶಿಕ್ಷಣವನ್ನು ಬಡ-ಮಧ್ಯಮ ವರ್ಗದ ಮಕ್ಕಳಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ. ಇದು ಶೈಕ್ಷಣಿಕ ಅನ್ಯಾಯ-ಅಸಮಾನತೆ ಹೆಚ್ಚಿಸುತ್ತಿದೆಯಷ್ಟೇ ಅಲ್ಲ, ಸಂವಿಧಾನದ ಆಶಯಕ್ಕೂ ವಿರುದ್ಧವಾಗಿದೆ. ಉಕ್ರೇನ್ʼನಿಂದ ಬಂದ ವಿದ್ಯಾರ್ಥಿಗಳ ಬಗ್ಗೆ ಉಪೇಕ್ಷೆ ಮಾಡಿದರೆ ಸಹಿಸುವ ಪ್ರಶ್ನೆ ಇಲ್ಲ. ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಕೇಂದ್ರ-ರಾಜ್ಯ ಸರಕಾರಗಳ ಹೊಣೆ ಎಂದು ಹೇಳಿದರು.

'ಇನ್ನಾದರೂ ನೀಟ್‌ ವಿರುದ್ಧ ಎಲ್ಲಾ ರಾಜ್ಯಗಳು ಸಂಘಟಿತವಾಗಿ ದನಿ ಎತ್ತಬೇಕಿದೆ' ಎಂದು ಕುಮಾರಸ್ವಾಮಿ ತಿಳಿಸಿದರು.

ನೀಟ್ ಅನ್ನು ಬಲವಂತವಾಗಿ ಹೇರಿ, ಟ್ಯೂಷನ್‌ ಅಂಗಡಿಗಳಿಗೆ ಬಿಸಿನೆಸ್‌ ಮಾಡಿಕೊಟ್ಟು, ವೈದ್ಯ ಶಿಕ್ಷಣವನ್ನು ಬಡ-ಮಧ್ಯಮ ವರ್ಗದ ಮಕ್ಕಳಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ. ಇದು ಶೈಕ್ಷಣಿಕ ಅನ್ಯಾಯ-ಅಸಮಾನತೆ ಹೆಚ್ಚಿಸುತ್ತಿದೆಯಷ್ಟೇ ಅಲ್ಲ, ಸಂವಿಧಾನದ ಆಶಯಕ್ಕೂ ವಿರುದ್ಧವಾಗಿದೆ. 6/7

— H D Kumaraswamy (@hd_kumaraswamy) April 25, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X