Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಕಾಯ್ದೆಯ...

'ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಕಾಯ್ದೆಯ ಕಲಂ 7ಡಿ ಅನ್ನು ರದ್ದುಗೊಳಿಸಿ'

ಸಿಪಿಐ(ಎಂಎಲ್) ಲಿಬರೇಷನ್ ಕರ್ನಾಟಕ ರಾಜ್ಯ ಸಮಿತಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ25 April 2022 10:50 PM IST
share

ಬೆಂಗಳೂರು, ಎ.25: ಪರಿಶಿಷ್ಟ ಸಮುದಾಯಗಳ ಉನ್ನತಿ ಮತ್ತು ಕಲ್ಯಾಣಕ್ಕೆ ಬಳಸಬೇಕಾಗಿರುವ ಹಣವನ್ನು ದುರುಪಯೋಗ ಪಡಿಸಿಕೊಳ್ಳುವುದಕ್ಕಾಗಿಯೇ ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಕಾಯ್ದೆಯ ಕಲಂ 7ಕ್ಕೆ ‘ಡಿ’ ಉಪಕಲಂನ್ನು ಸೇರಿಸಿ, ಈ ಸಮುದಾಯಗಳಿಗೆ ಸರಕಾರ ವಂಚಿಸುತ್ತಿದೆ ಎಂದು ಸಿಪಿಐ(ಎಂಎಲ್) ಲಿಬರೇಷನ್ ಕರ್ನಾಟಕ ರಾಜ್ಯ ಸಮಿತಿಯು ಆರೋಪಿಸಿದೆ. 

ಈ ಕುರಿತು ಪ್ರಕಟನೆ ಹೊರಡಿಸಿದ್ದು, ರಾಷ್ಟ್ರೀಯ ಯೋಜನಾ ಆಯೋಗದ ಮಾರ್ಗಸೂಚಿಗಳ ಪ್ರಕಾರ, ಕರ್ನಾಟಕ ಸರಕಾರವು ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ-ಹಂಚಿಕೆ ಮತ್ತು ಬುಡಕಟ್ಟು-ಉಪ ಹಂಚಿಕೆ ಕಾಯಿದೆ, 2013 ಮತ್ತು ನಿಯಮಗಳು 2017 ಅನ್ನು ಜಾರಿಗೊಳಿಸಿ, ಪರಿಶಿಷ್ಟ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಜಾರಿಗೊಳಿಸಿದೆ. ಶಾಸಕಾಂಗವು ಅಂಗೀಕರಿಸಿದ ಈ ಕಾನೂನನ್ನು ರಾಜ್ಯ ಬಿಜೆಪಿ ಸರಕಾರ ಉಲ್ಲಂಘಿಸಿ ಪರಿಶಿಷ್ಟ ಸಮುದಾಯಗಳ ಉನ್ನತಿಗಾಗಿ ಬಳಸಬೇಕಾಗಿದ್ದ 7,888 ಕೋಟಿ ರೂ.ಗಳನ್ನು ಕಾಯ್ದೆಯ 7ಡಿ ಅನ್ನು ಬಳಸಿ ರಸ್ತೆ, ಪ್ಲೈ ಒವರ್, ಇತ್ಯಾದಿಗಳ ನಿರ್ಮಾಣಕ್ಕಾಗಿ ಬಳಕೆ ಮಾಡಿದೆ. ಈ ರೀತಿಯ ಯೋಜನೆಗಳಿಗಾಗಿ ಎಸ್‍ಸಿ/ಎಸ್‍ಟಿ ಉಪಯೋಜನೆಯಲ್ಲಿ ಮೀಸಲಿರುವ ಹಣವನ್ನು ಹೆಚ್ಚು ಹೆಚ್ಚು ಬಳಸುವುದರ ಮೂಲಕ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯನ್ನು ಕ್ಷೀಣಿಸಲು ಬಿಜೆಪಿ ಸರಕಾರವು ಪ್ರಯತ್ನಿಸುತ್ತಿದೆ ಎಂದು ತಿಳಿಸಿದೆ.

ಬಿಜೆಪಿ ಸರಕಾರವು ಅನೇಕ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ನೂರಾರು ಕೋಟಿಗಳನ್ನು ಮತ್ತು ಧಾರ್ಮಿಕ ಸಂಸ್ಥೆಗಳಿಗೆ ಅನುದಾನವನ್ನು ಮಂಜೂರು ಮಾಡಿರುವ ಸಮಯದಲ್ಲಿ, ಶತಮಾನಗಳಿಂದ ದಬ್ಬಾಳಿಕೆ ಮತ್ತು ತಾರತಮ್ಯವನ್ನು ಎದುರಿಸುತ್ತಿರುವ ಸಮುದಾಯಗಳನ್ನು ಮೇಲೆತ್ತಲು ಉದ್ದೇಶಿಸಿರುವ ಹಣವನ್ನು ಬೇರೆಡೆಗೆ ತಿರುಗಿಸುವುದು ಸರಿಯಲ್ಲ ಎಂದು ಟೀಕಿಸಿದೆ.

ಉದ್ದೇಶಿತ ಸಮುದಾಯಗಳ ಅಭಿವೃದ್ಧಿಗೆ ಸೂಕ್ತ ಯೋಜನೆಗಳನ್ನು ರೂಪಿಸದೇ ನಿರ್ಲಕ್ಷ್ಯ ವಹಿಸಿರುವ ಎಲ್ಲಾ ಇಲಾಖೆಗಳ ಅಧಿಕಾರಗಳ ವಿರುದ್ಧ ಅಪರಾಧಿಕ ಪ್ರಕರಣ ದಾಖಲು ಮಾಡಿ, ಸೂಕ್ತ ತನಿಖೆಯನ್ನು ಕೈಗೊಳ್ಳಬೇಕು ಹಾಗೂ ಮೀಸಲು ಹಣದ ದುರುಪಯೋಗವನ್ನು ತಡೆಗಟ್ಟುವ ಸಲುವಾಗಿ ಕಾಯ್ದೆಯ ಕಲಂ 7(ಡಿ) ಅನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X