Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಯೋತ್ಪಾದನೆ ಎದುರಿಸುವ ಶಕ್ತಿಯನ್ನು...

ಭಯೋತ್ಪಾದನೆ ಎದುರಿಸುವ ಶಕ್ತಿಯನ್ನು ಅಳವಡಿಸಿಕೊಳ್ಳುವುದು ಅವಶ್ಯ: ಸಿಎಂ ಬೊಮ್ಮಾಯಿ

ಗೊ.ರು.ಚನ್ನಬಸಪ್ಪ ಅನುವಾದಿತ ಕೃತಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ26 April 2022 12:23 AM IST
share
ಭಯೋತ್ಪಾದನೆ ಎದುರಿಸುವ ಶಕ್ತಿಯನ್ನು ಅಳವಡಿಸಿಕೊಳ್ಳುವುದು ಅವಶ್ಯ: ಸಿಎಂ ಬೊಮ್ಮಾಯಿ

ಬೆಂಗಳೂರು, ಎ.25: ಭಯೋತ್ಪಾದನೆ ಎಂಬ ಪಿಡುಗು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ, ಜಾಗತಿಕವಾಗಿ ಹರಡಿದೆ. ಇದನ್ನು ಈ ಜಗತ್ತಿನ ಪ್ರತಿಯೊಬ್ಬ ನಾಗರಿಕನೂ ಎದುರಿಸುವ ಶಕ್ತಿಯನ್ನು ಪಡೆದುಕೊಳ್ಳಬೇಕು. ಅಂಥ ಶಕ್ತಿಯನ್ನು ಗೊ.ರು.ಚನ್ನಬಸಪ್ಪ ಅವರು ಬರೆದಿರುವ ಪುಸ್ತಕ ನೀಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಸೋಮವಾರ ಕರ್ನಾಟಕ ಸಾಹಿತ್ಯ ಪರಿಷತ್ತು, ಬೆಂಗಳೂರು ವತಿಯಿಂದ ಆಯೋಜಿಸಿರುವ ಹಿರಿಯ ಸಾಹಿತಿಗಳಾದ ನಾಡೋಜ ಗೊ.ರು.ಚನ್ನಬಸಪ್ಪ ಅವರು ಕನ್ನಡಕ್ಕೆ ಅನುವಾದಿಸಿರುವ ‘ಭಯೋತ್ಪಾದನೆ ಮತ್ತು ಭಯೋತ್ಪಾದಕ ಬೆದರಿಕೆಗೆ ಪ್ರತಿರೋಧ’ ಎಂಬ ಕೃತಿಯನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದರು.

ಗೊ.ರು.ಚ ಅವರು ಅತ್ಯಂತ ಸೂಕ್ಷ್ಮ ಜೀವಿಗಳು. ಜಾಗತೀಕರಣದ ಒಟ್ಟು ಪ್ರಭಾವ, ಗೊ.ರು.ಚ ಅವರಂಥ ಹಿರಿಯರ ಸೂಕ್ಷ್ಮತೆಯನ್ನೂ ಮೀರಿದೆ. ಅಪರೂಪ ಸಾಹಿತಿ ಸಂಶೋಧಕರು,  ಸಾಂಸ್ಕೃತಿಕ ರಾಯಭಾರಿ ರಣಜಿತ್ ಕೆ. ಪಚ್ನಂದ ಅವರು ರಚಿಸಿರುವ ಕೃತಿಯನ್ನು ಅರ್ಥಪೂರ್ಣವಾಗಿ ಸ್ಪಷ್ಟವಾದ ಉದ್ದೇಶವನ್ನಿಟ್ಟುಕೊಂಡು ಬರೆದಿದ್ದಾರೆ. ಭಯೋತ್ಪಾದನೆಯ ಬಗ್ಗೆ ಎಲ್ಲರೂ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಅದನ್ನು ನಿಗ್ರಹಿಸುವ ಶಕ್ತಿಯನ್ನು ಪಡೆದುಕೊಳ್ಳಬೇಕೆಂದು ಅತ್ಯುತ್ತಮವಾಗಿ ಅನುವಾದ ಮಾಡಿದ್ದಾರೆ. ಯಾವುದೇ ವಿಚಾರವಿದ್ದರೂ ಸ್ಪಷ್ಟವಾಗಿ, ಸರಳವಾಗಿ ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡಿದ್ದಾರೆ. ಪ್ರತಿರೋಧ ಇದ್ದಲ್ಲಿ ಸತ್ಯ ಹೊರಗೆ ಬಂದು ಜಯ ಸಿಗುತ್ತದೆ. ಅದಕ್ಕೆ ಈ ಪುಸ್ತಕ ಸ್ಪೂರ್ತಿ ತುಂಬುತ್ತದೆ. ಈ ಪುಸಕ್ತದ ಅನುವಾದ ಮಾಡಿದ್ದಕ್ಕಾಗಿ ಗೊ.ರು.ಚ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 

ಜ್ವಲಂತ ಸಮಸ್ಯೆಗೆ ಕನ್ನಡಿ ಹಿಡಿದ ಕೃತಿ: ಗೊ.ರು.ಚನ್ನಬಸಪ್ಪ ಅವರು ತಮ್ಮ ಕೃತಿಯ ಮೂಲಕ ಸಮಕಾಲೀನ, ಪ್ರಚಲಿತ, ಜ್ವಲಂತ ಸಮಸ್ಯೆಗೆ ಕನ್ನಡಿ ಹಿಡಿದು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ನಮ್ಮಲ್ಲಿ ಭಯ ಇದೆ. ಶ್ರೀಮಂತರಿಗೆ ಹಣ ಕಳೆದುಕೊಳ್ಳುವ ಭಯ, ರಾಜಕಾರಣಿಗೆ ಪದವಿ ಕಳೆದುಕೊಳ್ಳುವ ಭಯ. ಈ ನಕಾರಾತ್ಮಕ ಭಾವನೆ ಭಯಕ್ಕೆ ನಾಂದಿಯಾಗುತ್ತದೆ. ಭಯದಿಂದ ಭಯೋತ್ಪಾದನೆ ಹುಟ್ಟುತ್ತದೆ. ಭಯೋತ್ಪಾದನೆ ಜಗತ್ತನ್ನು ವಿನಾಶದತ್ತ ತೆಗೆದುಕೊಂಡು ಹೋಗುವ ಭಯ. ಹಿಂಸೆಯಿಂದ ಸಾಧನೆ ಮಾಡಬಹುದು ಎಂಬ ಭಾವನೆ ದೊಡ್ಡ ದುರಂತ. ಮನುಷ್ಯನಿಗೆ ಜೀವ ಕೊಡುವ ಅಧಿಕಾರವಿಲ್ಲವೆಂದ ಮೇಲೆ ಜೀವ ತೆಗೆಯುವ ಅಧಿಕಾರವೂ ಇರುವುದಿಲ್ಲ. ಆದರೆ ಇದನ್ನು ಮೀರಿ ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ. ಒಂದಷ್ಟು ಜನರನ್ನು ಕೊಲ್ಲುವ ಮೂಲಕ ಸ್ವರ್ಗ ಪ್ರಾಪ್ತಿಯಾಗುತ್ತದೆ ಎನ್ನುವ ಕಲ್ಪನೆಯಿಂದ ದುರಂತಗಳು ಸಂಭವಿಸುತ್ತವೆ ಎಂದರು.  ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಬೇಕು: ಸಹಜವಾದ ಸಾಮಾಜಿಕ ವ್ಯವಸ್ಥೆಯಡಿ ಭಯೋತ್ಪಾದಕರು ಬರುವುದಿಲ್ಲ. ವೈಯಕ್ತಿಕವಾಗಿ, ಸಾಮಾಜಿಕವಾಗಿ ವೈಚಾರಿಕವಾಗಿ ಭಯೋತ್ಪಾದನೆಯನ್ನು ಎದುರಿಸಬೇಕಾಗುತ್ತದೆ. ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಿ ತಮ್ಮ ಕರ್ತವ್ಯ ನಿಭಾಯಿಸಬೇಕು. ಜನರು ಸ್ಪಂದನಾಶೀಲರಾಗಬೇಕು ಹಾಗೂ ಇಂತಹ ಚಟುವಟಿಕೆಗಳನ್ನು ಸಾಮೂಹಿಕವಾಗಿ ಎದುರಿಸಬೇಕು. ಭಯೋತ್ಪಾದನೆಯನ್ನು ವಿಜೃಂಭಿಸಬಾರದು. ಎಲ್ಲಿವರೆಗೆ ಸಮಾಜದಲ್ಲಿ ಹಿಂಸೆ ಇರುತ್ತದೋ ಅಲ್ಲಿವರೆಗೆ ಭಯೋತ್ಪಾದನೆಗೆ ಅವಕಾಶವಾಗುತ್ತದೆ. ಸರಕಾರವೂ ಇಂತಹ ಚಟುವಟಿಕೆಗಳಿಗೆ ತಕ್ಷಣ ಹಾಗೂ ತೀಕ್ಷ್ಣ ಪ್ರತಿಕ್ರಿಯೆಯನ್ನು ನೀಡಲು ಸಾಧ್ಯ ಎಂದರು.

ಜಾನಪದಕ್ಕೆ ಶಾಶ್ವತ ಸ್ವರೂಪ ನೀಡಿದ ಗೊ.ರು.ಚ: ಗೊ.ರು.ಚ ಅವರು ಜಾನಪದಕ್ಕೆ ಶಾಶ್ವತ ಸ್ವರೂಪವನ್ನು ಕೊಟ್ಟು ಕೆಲಸ ಮಾಡಿರುವ ಗೊ.ರು.ಚ ಅವರು ಶರಣ ಸಾಹಿತ್ಯ ಮತ್ತು ಪರಿಷತ್ತಿನ ಅಧ್ಯಕ್ಷರಾಗಿ ಅವರು ಮಾಡಿರುವ ಕೆಲಸ ಅಮೋಘವಾಗಿರುವಂಥದ್ದು ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X