Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪಠ್ಯಪುಸ್ತಕ ಪರಿಷ್ಕರಣೆ: ಸರಕಾರಕ್ಕೆ2.5...

ಪಠ್ಯಪುಸ್ತಕ ಪರಿಷ್ಕರಣೆ: ಸರಕಾರಕ್ಕೆ2.5 ಕೋಟಿ ರೂ. ನಷ್ಟ

ಜಿ.ಮಹಾಂತೇಶ್ಜಿ.ಮಹಾಂತೇಶ್26 April 2022 11:39 AM IST
share
ಪಠ್ಯಪುಸ್ತಕ ಪರಿಷ್ಕರಣೆ: ಸರಕಾರಕ್ಕೆ2.5 ಕೋಟಿ ರೂ. ನಷ್ಟ

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಡಾ ಎಸ್. ಸೆಲ್ವಕುಮಾರ್ ಅವರು 2.5 ಕೋಟಿ ರೂ. ನಷ್ಟವಾಗುತ್ತಿರುವ ಬಗ್ಗೆ ಆರ್ಥಿಕ ಇಲಾಖೆ ಜತೆ ‘ನಂತರ ವ್ಯವಹರಿಸಬಹುದಾಗಿದೆ’ ಎಂದು ಅಭಿಪ್ರಾಯಿಸಿದ್ದರು ಎಂಬುದು ಟಿಪ್ಪಣಿ ಹಾಳೆಯಿಂಂದ ಗೊತ್ತಾಗಿದೆ. ಆ ನಂತರ ಇದಕ್ಕೆ ಸಚಿವ ಬಿ.ಸಿ. ನಾಗೇಶ್ ಅವರು ಅನುಮೋದಿಸಿರುವುದು ತಿಳಿದು ಬಂದಿದೆ.

 ಬೆಂಗಳೂರು: ಆರರಿಂದ ಹತ್ತನೇ ತರಗತಿ ಸಮಾಜ ವಿಜ್ಞಾನದ ವಿಷಯದ ಪಠ್ಯಪುಸ್ತಕಗಳನ್ನು ಹಠಕ್ಕೆ ಬಿದ್ದು ಪರಿಷ್ಕರಿಸಿರುವುದರ ಪರಿಣಾಮ 2.5 ಕೋಟಿ ರೂ. ನಷ್ಟವಾಗಿದೆ. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಸಮಾಲೋಚಿಸಬೇಕು ಎಂದು ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ನೀಡಿದ್ದ ಅಭಿಪ್ರಾಯವನ್ನೂ ಸರಕಾರವು ಬದಿಗೆ ಸರಿಸಿದೆ. 2.5 ಕೋಟಿ ರೂ. ನಷ್ಟವಾಗಿರುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಇದುವರೆಗೂ ಸಮಾಲೋಚಿಸಿಲ್ಲ.

ಹೊಸಧರ್ಮಗಳ ಉದಯಕ್ಕೆ ಕಾರಣಗಳು ಮತ್ತು ಟಿಪ್ಪು ಸುಲ್ತಾನ್ ಸಾಧನೆ ಮತ್ತು ಕೊಡುಗೆಗಳನ್ನು ವಿವರಿಸುವ ಪಾಠಾಂಶಗಳನ್ನು ಪಠ್ಯದಿಂದ ತೆಗೆದುಹಾಕುವ ಮುನ್ನವೇ 2021-22ನೇ ಸಾಲಿಗೆ ಒಟ್ಟು 83 ಶೀರ್ಷಿಕೆಗಳ ಒಟ್ಟು 6,76,997 ಪಠ್ಯಪುಸ್ತಕಗಳನ್ನು ಮುದ್ರಿಸಲಾಗಿತ್ತು. ಇಷ್ಟೊಂದು ಸಂಖ್ಯೆಯಲ್ಲಿರುವ ಪಠ್ಯಪುಸ್ತಕಗಳು 2022-23ನೇ ಸಾಲಿಗೆ ಅನುಪಯುಕ್ತವಾಗಿವೆ.

ಈ ಸಮಿತಿಯು ಸರಕಾರಕ್ಕೆ ಸಲ್ಲಿಸಿರುವ ವರದಿಗೆ ಸಂಬಂಧಿಸಿದಂತೆ 'the-file.in' ಆರ್‌ಟಿಐ ಅಡಿಯಲ್ಲಿ ಸಮಗ್ರ ಕಡತವನ್ನು ಪಡೆದುಕೊಂಡಿದೆ.

 ‘2021-22ನೇ ಸಾಲಿಗೆ ಮುದ್ರಿಸಿ ಸರಬರಾಜು ಮಾಡಿರುವ 83 ಶೀರ್ಷಿಕೆಗಳ ಒಟ್ಟು 6,76,997 ಪಠ್ಯಪುಸ್ತಕಗಳು ಬ್ಲಾಕ್ ಹಂತದಲ್ಲಿ ಉಳಿದು 2022- 23ನೇ ಸಾಲಿಗೆ ಅನುಪಯುಕ್ತ ಗೊಂಡಿವೆ. ಇದರ ಅಂದಾಜು ಮೌಲ್ಯ 2.5 ಕೋಟಿ ರೂ. ನಷ್ಟವಾಗುವ ಹಿನ್ನೆಲೆಯಲ್ಲಿ ಈ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಬಹುದು. 2022-23ನೇ ಸಾಲಿಗೆ ಇಷ್ಟು ಪ್ರಮಾಣದ ಪಠ್ಯಪುಸ್ತಕಗಳನ್ನು ಮುದ್ರಣ ಮಾಡಿ ವಿದ್ಯಾರ್ಥಿಗಳಿಗೆ ಹಂಚಿಕೆಯಾಗುವ ಹೊತ್ತಿಗೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವುದರಿಂದ ಪಠ್ಯಪುಸ್ತಕ ವಿತರಣೆ ಕಾರ್ಯ ವಿಳಂಬವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಲಿದೆ’ ಎಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆ ಅಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ. ಇಲಾಖೆ ಅಧಿಕಾರಿಗಳು ನೀಡಿದ್ದ ಅಭಿಪ್ರಾ ಯಕ್ಕೆ ಸರಕಾರದ ಉಪ ಕಾರ್ಯದರ್ಶಿ ಕೆ ಏಕೇಶ್‌ಬಾಬು ಅವರು, ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಸಲ್ಲಿಸಿರುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಮತ್ತು 2.3 ಕೋಟಿ ರೂ. ನಷ್ಟವಾಗುವ ಕುರಿತು ಪ್ರತ್ಯೇಕವಾಗಿ ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ಪಡೆದು ಪರಿಶೀಲಿಸಬಹುದಾಗಿರುತ್ತದೆ’ ಎಂದು ಅಭಿಪ್ರಾಯಿಸಿದ್ದರು.

ಭಾರತದ ನಾಗರೀಕತೆಗಳು ಎಂಬ ಅಧ್ಯಾಯದಲ್ಲಿ ಸಿಂಧೂ ನಾಗರೀಕತೆ ಶೀರ್ಷಿಕೆಗೆ ಸರಸ್ವತಿ ಹೆಸರನ್ನೂ ಸೇರಿಸಿ ಸಿಂಧೂ-ಸರಸ್ವತಿ ನಾಗರೀಕತೆ ಎಂದು 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಪರಿಷ್ಕರಿಸಲಾಗಿದೆ. ಅಲ್ಲದೆ ಬೌದ್ಧ, ಜೈನ ದರ್ಶನಗಳು ಹೊಸ ಮತಗಳ ಉದಯಕ್ಕೆ ಕಾರಣಗಳು ಎಂಬುದಕ್ಕೆ ನಿರಾಧಾರ ಎಂದಿದ್ದ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯು ಈ ಭಾಗ ವನ್ನು ಕೈ ಬಿಟ್ಟಿದೆ. ಅದೇ ರೀತಿ ಪಠ್ಯಪುಸ್ತಕದಲ್ಲಿ ಸಿಂಧೂ-ಸರಸ್ವತಿ ಎಂದು ಹೊಸ ಸೇರ್ಪಡೆ ಮಾಡಿದೆ. ಅಲ್ಲದೇ ಶೃಂಗೇರಿ ಮಠ, ಹಿಂದೂ ದೇವಾಲಯಗಳಿಗೆ ಟಿಪ್ಪು ಸುಲ್ತಾನ್ ನೀಡಿದ್ದ ದಾನದತ್ತಿ, ರಾಕೆಟ್ ತಂತ್ರಜ್ಞಾನ, ರೇಷ್ಮೆ ವ್ಯವಸಾಯವನ್ನು ಪರಿಚಯಿಸಿದ್ದನ್ನೂ ಇದೇ ಸಮಿತಿಯು ಪಠ್ಯದಿಂದ ತೆಗೆದು ಹಾಕಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X