Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧರ್ಮಸಂಸದ್‌ನಲ್ಲಿ ದ್ವೇಷಭಾಷಣ...

ಧರ್ಮಸಂಸದ್‌ನಲ್ಲಿ ದ್ವೇಷಭಾಷಣ ಮಾಡುವುದಿಲ್ಲವೆಂದು ಖಚಿತಪಡಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ತಾಕೀತು

ವಾರ್ತಾಭಾರತಿವಾರ್ತಾಭಾರತಿ26 April 2022 3:30 PM IST
share
ಧರ್ಮಸಂಸದ್‌ನಲ್ಲಿ ದ್ವೇಷಭಾಷಣ ಮಾಡುವುದಿಲ್ಲವೆಂದು ಖಚಿತಪಡಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ತಾಕೀತು

ಹೊಸದಿಲ್ಲಿ,ಎ.26: ರೂರ್ಕಿಯಲ್ಲಿ ಆಯೋಜಿಸಲಾಗಿರುವ ಧರ್ಮ ಸಂಸದ್ ಕುರಿತು ಮಂಗಳವಾರ ಉತ್ತರಾಖಂಡ ಸರಕಾರವನ್ನು ತರಾಟೆಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯವು,ಈ ಸಂಬಂಧ ತೆಗೆದುಕೊಳ್ಳಲಾಗುತ್ತಿರುವ ಮುನ್ನೆಚ್ಚರಿಕೆ ಮತ್ತು ಪರಿಹಾರಕ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿತು.

ಈಗಾಗಲೇ ಪ್ರಕಟಣೆಯನ್ನು ಮಾಡಲಾಗಿದ್ದರೆ ನೀವು ಕ್ರಮವನ್ನು ಕೈಗೊಳ್ಳಲೇಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳಂತೆ ಕ್ರಮವನ್ನು ಕೈಗೊಳ್ಳುವುದಷ್ಟೇ ನಿಮ್ಮ ಕೆಲಸ ಎಂದು ನ್ಯಾ.ಎ.ಎಂ.ಖನ್ವಿಲ್ಕರ್ ನೇತೃತ್ವದ ಪೀಠವು ಉತ್ತರಾಖಂಡ ಸರಕಾರದ ಪರವಾಗಿ ಹಾಜರಾಗಿದ್ದ ವಕೀಲರಿಗೆ ತಿಳಿಸಿತು.

ಭಾಷಣಕಾರರು ಏನು ಮಾತನಾಡಲಿದ್ದಾರೆ ಎನ್ನುವುದು ಗೊತ್ತಿಲ್ಲ,ಹೀಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಸಮಸ್ಯೆಯಾಗಿದೆ ಎಂದು ರಾಜ್ಯವು ತಿಳಿಸಿದಾಗ ಪೀಠವು,‘ಅದೇ ಹಿಂದಿನ ಭಾಷಣಕಾರರಾಗಿದ್ದರೆ ನೀವು ತಕ್ಷಣ ಕ್ರಮವನ್ನು ತೆಗೆದುಕೊಳ್ಳಬೇಕು. ದಯವಿಟ್ಟು ಅರ್ಥ ಮಾಡಿಕೊಳ್ಳಿ,ನಾವು ಏನಾದರೂ ಹೇಳುವಂತೆ ಮಾಡಬೇಡಿ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಇತರ ವಿಧಾನಗಳೂ ಇವೆ ಮತ್ತು ಅದನ್ನು ಹೇಗೆ ಮಾಡಬೇಕು ಎನ್ನುವುದು ನಿಮಗೆ ತಿಳಿದಿದೆ ’ಎಂದು ಪ್ರತಿಕ್ರಿಯಿಸಿತು. ಏನಾದರೂ ಸಂಭವಿಸಿದರೆ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸುವುದಾಗಿಯೂ ನ್ಯಾಯಾಲಯವು ಖಡಕ್ಕಾಗಿ ತಿಳಿಸಿತು.

ಹಿಮಾಚಲ ಪ್ರದೇಶದಲ್ಲಿ ನಡೆದಿದ್ದ ಧರ್ಮ ಸಂಸದ್ ವಿರುದ್ಧ ಅರ್ಜಿಯೊಂದರ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸರ್ವೋಚ್ಚ ನ್ಯಾಯಾಲಯವು,ಕಾರ್ಯಕ್ರಮವನ್ನು ತಡೆಯಲು ಮತ್ತು ನಂತರ ತೆಗೆದುಕೊಳ್ಳಲಾಗಿದ್ದ ಕ್ರಮಗಳನ್ನು ವಿವರಿಸಿ ಅಫಿಡವಿಟ್ ಸಲ್ಲಿಸುವಂತೆ ರಾಜ್ಯದ ಪರ ವಕೀಲರಿಗೆ ಸೂಚಿಸಿತು.

ಇಂತಹ ಸಂದರ್ಭಗಳಲ್ಲಿ ಏನು ಮಾಡಬೇಕು ಎನ್ನುವ ಬಗ್ಗೆ ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳಿವೆ ಮತ್ತು ಸರಕಾರವು ಕೇವಲ ಅವುಗಳನ್ನು ಅನುಷ್ಠಾನಿಸುವ ಅಗತ್ಯವಿದೆ ಎಂದು ಹಿಮಾಚಲ ಪ್ರದೇಶ ಪರ ವಕೀಲರಿಗೆ ತಿಳಿಸಿದ ಪೀಠವು,ಈಗಾಗಲೇ ಇರುವ ಮಾರ್ಗಸೂಚಿಗಳನ್ನೂ ನೀವು ಅನುಸರಿಸಬೇಕು ಅಷ್ಟೇ. ನೀವು ಅದನ್ನು ಪಾಲಿಸುತ್ತೀರೋ ಇಲ್ಲವೋ ಎಂಬ ಬಗ್ಗೆ ನೀವು ನಮಗೆ ಉತ್ತರಿಸಬೇಕು. ಪಾಲನೆಯ ಬಳಿಕವೂ ಅಹಿತಕರ ಘಟನೆಗಳು ನಡೆದರೆ ನೀವು ಪರಿಹಾರಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿತು.

ತಾನು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡಿದ್ದೆ ಮತ್ತು ಹಿಂದೆ ಸಂಭವಿಸಿದ್ದ ಇಂತಹುದೇ ಘಟನೆಗಳ ಬಗ್ಗೆ ತನಿಖೆ ನಡೆಸಿದ್ದೆ ಎಂದು ರಾಜ್ಯವು ತಿಳಿಸಿದಾಗ,ತನಿಖೆ ಮಾತ್ರವಲ್ಲ,ನೀವು ಚಟುವಟಿಕೆಯನ್ನು ನಿಲ್ಲಿಸಬೇಕು ಎಂದು ನ್ಯಾ.ಖನ್ವಿಲ್ಕರ್ ಹೇಳಿದರು.
ಇಂತಹ ಯಾವುದೇ ಸಮಸ್ಯೆಗಳು ಉಂಟಾಗದಿರುವುದನ್ನು ಖಚಿತಪಡಿಸಿಕೊಳ್ಳಲು ಸರಕಾರವು ಪೊಲೀಸ್ ಕಾಯ್ದೆಯಡಿ ನೋಟಿಸನ್ನು ಹೊರಡಿಸಿತ್ತು. ಬಳಿಕ ಅಹವಾಲೊಂದು ಸಲ್ಲಿಕೆಯಾದಾಗ ಕ್ರಮವನ್ನೂ ತೆಗೆದುಕೊಂಡಿತ್ತು ಎಂದು ಹಿಮಾಚಲ ಪ್ರದೇಶದ ಪರ ವಕೀಲರು ತಿಳಿಸಿದರು.

ಇಂತಹ ಕಾರ್ಯಕ್ರಮಗಳು ದಿಢೀರಾಗಿ,ರಾತ್ರೋರಾತ್ರಿ ನಡೆಯುವುದಿಲ್ಲ. ಅವುಗಳ ಬಗ್ಗೆ ಸಾಕಷ್ಟು ಮೊದಲೇ ಪ್ರಕಟಿಸಲಾಗುತ್ತದೆ. ಅಹಿತಕರ ಘಟನೆಗಳು ಸಂಭವಿಸಿದಂತೆ ನೋಡಿಕೊಳ್ಳಲು ಸ್ಥಳೀಯ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಬೇಕು. ಅಂತಹ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯೇ ಎನ್ನುವುದನ್ನು ನೀವು ವಿವರಿಸಬೇಕು ಎಂದು ನ್ಯಾ.ಖನ್ವಿಲ್ಕರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X