ಎ. 27, 28: ವಿದ್ಯುತ್ ವ್ಯತ್ಯಯ
ಮಂಗಳೂರು : ನಗರದ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಓಎಸ್ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದೆ ಎ.೨೭ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಬಂದರ್ ಪೊಲೀಸ್ ಸ್ಟೇಷನ್, ಗಾಂಧಿ ಸನ್ಸ್, ನೂರ್ ಮುಹಮ್ಮದ್, ಅಝೀಝುದ್ದೀನ್ ರಸ್ತೆ, ಜೆ.ಎಂ.ರಸ್ತೆ, ಕೆಸಿಸಿಐ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
ಪಾಂಡೇಶ್ವರ: ಎ.೨೮ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಎ.ಬಿ ಶೆಟ್ಟಿ ಸರ್ಕಲ್, ಭಾರತೀಯ ವಿದ್ಯಾಭವನ, ಎಸ್.ಪಿ. ಆಫೀಸ್, ಪಾಂಡೇಶ್ವರ ಕಟ್ಟೆ, ಪಾಂಡೇಶ್ವರ ನ್ಯೂ ರಸ್ತೆ, ಮಹಾಲಿಂಗೇಶ್ವರ ಟೆಂಪಲ್, ಅಮೃತನಗರ, ರೋಸಾರಿಯೊ ಚರ್ಚ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.
Next Story