Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿಕ್ಷಣದ ಮೂಲಕ ಸಬಲೀಕರಣಕ್ಕೆ ನಾರಾಯಣ...

ಶಿಕ್ಷಣದ ಮೂಲಕ ಸಬಲೀಕರಣಕ್ಕೆ ನಾರಾಯಣ ಗುರು ಹೋರಾಡಿದರು: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ26 April 2022 10:28 PM IST
share
ಶಿಕ್ಷಣದ ಮೂಲಕ ಸಬಲೀಕರಣಕ್ಕೆ ನಾರಾಯಣ ಗುರು ಹೋರಾಡಿದರು: ಪ್ರಧಾನಿ ಮೋದಿ

ಹೊಸದಿಲ್ಲಿ, ಎ 26: ದೇಶದ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ವೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಶಿಕ್ಷಣದ ಮೂಲಕ ಸಮಾಜದ ಅಭಿವೃದ್ಧಿಗೆ ಉಪದೇಶಿಸಿದ ಧಾರ್ಮಿಕ ನಾಯಕ, ಚಿಂತಕ ಶ್ರೀ ನಾರಾಯಣ ಗುರು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಲ್ಲಿ ಹೇಳಿದ್ದಾರೆ.
‌
ಶಿವಗಿರಿ ತೀರ್ಥಯಾತ್ರೆಯ 90ನೇ ವರ್ಷವಾದ ಹಿನ್ನೆಲೆಯಲ್ಲಿ ವರ್ಷಾದ್ಯಂತ ಸಂಭ್ರಮಾಚರಣೆ ಹಾಗೂ ಶಿವಗಿರಿ ಬ್ರಹ್ಮ ವಿದ್ಯಾಲಯದ 50ನೇ ವರ್ಷಾಚರಣೆಯನ್ನು ಉದ್ಘಾಟಿಸಿದ ಮೋದಿ ಅವರು, ವೈಜ್ಞಾನಿಕ ಶಿಕ್ಷಣದ ಮೂಲಕ ಸಮಾಜದ ಸಬಲೀಕರಣ ಕುರಿತು ನಾರಾಯಣಗುರು ಅವರು ಬೋಧಿಸಿದರು. ಆದರೆ, ಸಾಂಸ್ಕೃತಿಕ ವೌಲ್ಯಗಳನ್ನು ಎತ್ತಿ ಹಿಡಿಯುವುದರಲ್ಲಿ ಅವರು ಎಂದೂ ಹಿಂದೆ ಸರಿಯಲಿಲ್ಲ ಎಂದರು. ದಿಲ್ಲಿಯ ಶ್ರೀ ನಾರಾಯಣಗುರು ಧರ್ಮ ಸಂಘಂ ಟ್ರಸ್ಟ್ ಆಯೋಜಿಸಿದ್ದ ಈ ಕಾರ್ಯಕ್ರಮ ಪ್ರಧಾನ ಮಂತ್ರಿಯ ಅಧಿಕೃತ ನಿವಾಸದಲ್ಲಿ ನಡೆಯಿತು.

‘‘ಜಾತಿ ಹೆಸರಿನಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಅವರು ತಾರ್ಕಿಕ ಹಾಗೂ ಪ್ರಾಯೋಗಿಕ ಹೋರಾಟ ನಡೆಸಿದರು. ಬಡವರು, ದುರ್ಬಲರು ಹಾಗೂ ಹಿಂದುಳಿದವರ ಹಕ್ಕುಗಳನ್ನು ರಕ್ಷಿಸುವುದರೊಂದಿಗೆ ಅವರ ಸೇವೆ ಮಾಡುವಲ್ಲಿ ನಾವು ಶ್ರೀನಾರಾಯಣ ಗುರುಗಳಿಂದ ಪ್ರೇರಣೆ ಪಡೆದಿದ್ದೇವೆ’’ ಎಂದು ಅವರು ಹೇಳಿದರು.
 
ನಾರಾಯಣ ಗುರು ಅವರ ‘‘ಒಂದೇ ಜಾತಿ, ಒಂದೇ ಧರ್ಮ ಹಾಗೂ ಒಂದೇ ದೇವರು’’ ತತ್ವ ದೇಶಪ್ರೇಮಕ್ಕೆ ಧಾರ್ಮಿಕ ಆಯಾಮ ನೀಡಿದೆ. ಭಾರತೀಯರು ಅವರ ಬೋಧನೆಗಳನ್ನು ಅನುಸರಿಸಿದರೆ ಹಾಗೂ ಸಂಘಟಿತರಾದರೆ ಜಗತ್ತಿನ ಯಾವುದೇ ಗುರಿ ಅಸಾಧ್ಯವಲ್ಲ ಎಂದು ಪ್ರಧಾನಿ ಅವರು ತಿಳಿಸಿದರು.

ಶಿವಗಿರಿ ಮಠದೊಂದಿಗೆ ತನ್ನ ದೀರ್ಘ ಕಾಲದ ಸಂಬಂಧವನ್ನು ನೆನಪಿಸಿಕೊಂಡ ಅವರು, ಅಲ್ಲಿಗೆ ಭೇಟಿ ನೀಡಿದಾಗ ತನಗೆ ಆಧ್ಯಾತ್ಮಿಕವಾಗಿ ಸಶಸಕ್ತೀಕರಣಗೊಂಡ ಭಾವನೆ ಉಂಟಾಗಿದೆ ಎಂದರು. ಉತ್ತರಾಖಂಡದಲ್ಲಿ 2013ರಲ್ಲಿ ಕೇದಾರನಾಥ್ನಲ್ಲಿ ಸಿಲುಕಿಕೊಂಡ ಸಂತರ ತಂಡವನ್ನು ಪತ್ತೆ ಹಚ್ಚಲು ಹಾಗೂ ರಕ್ಷಿಸಲು ಶಿವಗಿರಿಯಲ್ಲಿದ್ದ ಸಂತರು ಅವಕಾಶ ನೀಡಿರುವುದನ್ನು ಅವರು ನೆನಪಿಸಿಕೊಂಡರು.

‘‘ಆಗ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇತ್ತು. ರಕ್ಷಣಾ ಸಚಿವರು ಕೇರಳಿಗರಾಗಿದ್ದರು. ನಾನು ಕೇವಲ ಗುಜರಾತ್ನ ಮುಖ್ಯಮಂತ್ರಿಯಾಗಿದ್ದರೂ ಸಂತರನ್ನು ರಕ್ಷಿಸುವ ಹೊಣೆಯನ್ನು ಶಿವಗಿರಿ ಮಠ ನನಗೆ ನೀಡಿತು. ಈ ಹೊಣೆಗಾರಿಕೆ ನೀಡಿರುವುದನ್ನು ನಾನು ಎಂದಿಗೂ ಮರೆಯಲಾರೆ’’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X