Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆ್ಯಂಬುಲೆನ್ಸ್ ಗೆ ಅತ್ಯಧಿಕ ಶುಲ್ಕದ...

ಆ್ಯಂಬುಲೆನ್ಸ್ ಗೆ ಅತ್ಯಧಿಕ ಶುಲ್ಕದ ಬೇಡಿಕೆ: ಪುತ್ರನ ಮೃತದೇಹವನ್ನು ಬೈಕ್ ನಲ್ಲಿ ಸಾಗಿಸಿದ ವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ26 April 2022 10:32 PM IST
share
ಆ್ಯಂಬುಲೆನ್ಸ್ ಗೆ ಅತ್ಯಧಿಕ ಶುಲ್ಕದ ಬೇಡಿಕೆ: ಪುತ್ರನ ಮೃತದೇಹವನ್ನು ಬೈಕ್ ನಲ್ಲಿ ಸಾಗಿಸಿದ ವ್ಯಕ್ತಿ

ಹೈದರಾಬಾದ್, ಎ.26: ಆಸ್ಪತ್ರೆಯೊಂದರಲ್ಲಿ ಖಾಸಗಿ ಆ್ಯಂಬುಲೆನ್ಸ್ ಚಾಲಕರು ಅತ್ಯಧಿಕ ಶುಲ್ಕದ ಬೇಡಿಕೆ ಇರಿಸಿದ ಹಾಗೂ ಮತ್ತೊಂದು ಆ್ಯಂಬುಲೆನ್ಸ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ 10 ವರ್ಷದ ಪುತ್ರನ ಮೃತದೇಹವನ್ನು ಊರಿಗೆ ಬೈಕ್ನಲ್ಲಿ ಕೊಂಡೊಯ್ದ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ಮಂಗಳವಾರ ನಡೆದಿದೆ.

ಶ್ರೀ ವೆಂಕಟೇಶ್ವರ ರಾಮನಾರಾಯಣ ಸರಕಾರಿ ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದ ಘಟನೆಗೆ ಸಂಬಂಧಿಸಿ 6 ಮಂದಿ ಆ್ಯಂಬುಲೆನ್ಸ್ ಚಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆಯಲ್ಲಿ ಕಿಡ್ನಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ವೈ. ಜೋಶುವ ಎಂಬ ಬಾಲಕ ಮೃತಪಟ್ಟಿದ್ದ. ಆತನ ತಂದೆ ವೈ. ಮುರಳಿ ಹಾಗೂ ಮಾವ ಬಾಲಕನ ಮೃತದೇಹವನ್ನು ಅನ್ನಮಯ್ಯ ಜಿಲ್ಲೆಯ ತಮ್ಮ ಚಿಟ್ವೆಲ್ ಗ್ರಾಮಕ್ಕೆ ಕೊಂಡೊಯ್ಯಲು ಆಸ್ಪತ್ರೆಯಲ್ಲಿ ನಿಲ್ಲಿಸಿದ್ದ ಖಾಸಗಿ ಆ್ಯಂಬುಲೆನ್ಸ್ ಚಾಲಕರನ್ನು ಸಂಪರ್ಕಿಸಿದ್ದರು. ಆದರೆ, ಆ್ಯಂಬುಲೆನ್ಸ್ ಚಾಲಕರು 90 ಕಿ.ಮೀ. ಪ್ರಯಾಣಕ್ಕೆ 18 ಸಾವಿರ ರೂಪಾಯಿಯಿಂದ 20 ಸಾವಿರ ರೂಪಾಯಿ ವರೆಗೆ ಶುಲ್ಕದ ಬೇಡಿಕೆ ಇರಿಸಿದ್ದರು. ಅದನ್ನು ನೀಡುವ ಪರಿಸ್ಥಿತಿಯಲ್ಲಿ ಮುರಳಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

ಅನಂತರ ಮುರಳಿ ಅವರು ಗ್ರಾಮಸ್ಥರ ನೆರವು ಕೋರಿದರು. ಕೆಲವರು ಆಸ್ಪತ್ರೆಯಿಂದ 80 ಕಿ.ಮೀ. ದೂರದಲ್ಲಿರುವ ರಾಜಮ್ಪೇಟೆಯಿಂದ ಉಚಿತ ಆ್ಯಂಬುಲೆನ್ಸ್ ಒಂದನ್ನು ವ್ಯವಸ್ಥೆ ಮಾಡಿದರು. ಆದರೆ, ಆ್ಯಂಬುಲೆನ್ಸ್ ಆಸ್ಪತ್ರೆಗೆ ತಲುಪುತ್ತಿದ್ದಂತೆ, ಅಲ್ಲಿದ್ದ ಆ್ಯಂಬುಲೆನ್ಸ್ ಚಾಲಕರು ಆ್ಯಂಬುಲೆನ್ಸ್ ಆಸ್ಪತ್ರೆ ಪ್ರವೇಶಿಸದಂತೆ ತಡೆ ಹಿಡಿದರು ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿದರು. ಹಲ್ಲೆಗೊಳಗಾದ ಚಾಲಕ ಆ್ಯಂಬುಲೆನ್ಸ್ ನ ಮಾಲಕನಿಗೆ ಕರೆ ಮಾಡಿ ವಿಷಯ ತಿಳಿಸಿದ. ಆ್ಯಂಬುಲೆನ್ಸ್ ನ ಮಾಲಕ ಇನ್ನೋರ್ವ ಚಾಲಕನನ್ನು ಬೈಕ್ನಲ್ಲಿ ಕಳುಹಿಸಿದರು. ಆದರೆ, ಮುರಳಿ ಪುತ್ರನ ಮೃತದೇಹವನ್ನು ಬೈಕ್ನಲ್ಲಿ ತಿರುಪತಿಯ ಹೊರವಲಯದ ವರೆಗೆ ಸಾಗಿಸಿದರು. ಅಲ್ಲಿಂದ ಆ್ಯಂಬುಲೆನ್ಸ್ ಒಂದನ್ನು ಬಾಡಿಗೆ ಪಡೆದು ತನ್ನೂರಿಗೆ ಕೊಂಡೊಯ್ದರು. ನಾವು ಆರು ಮಂದಿ ಆ್ಯಂಬುಲೆನ್ಸ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಉಪ ಪೊಲೀಸ್ ಅಧೀಕ್ಷಕ (ತಿರುಪತಿ ಪೂರ್ವ) ಟಿ. ಮುರಳಿ ಕೃಷ್ಣ ತಿಳಿಸಿದ್ದಾರೆ.

My heart aches for innocent little Jesava,who died at Tirupati’s RUIA hospital.His father pleaded with authorities to arrange an ambulance which never came.With mortuary vans lying in utter neglect,pvt ambulance providers asked a fortune to take the child home for final rites.1/2 pic.twitter.com/mcW94zrQUt

— N Chandrababu Naidu (@ncbn) April 26, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X