Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಗನಿಗೆ ನ್ಯಾಯ ಕೇಳಲು ಇರುವ ಮಗನ ಬಲಿ...

ಮಗನಿಗೆ ನ್ಯಾಯ ಕೇಳಲು ಇರುವ ಮಗನ ಬಲಿ ಕೊಡಬೇಕೇ?: ಮೃತನ ತಾಯಿಯ ಅಳಲು

ಪೆದ್ದನಹಳ್ಳಿ ದಲಿತ ಯುವಕರ ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ26 April 2022 10:56 PM IST
share
ಮಗನಿಗೆ ನ್ಯಾಯ ಕೇಳಲು ಇರುವ ಮಗನ ಬಲಿ ಕೊಡಬೇಕೇ?: ಮೃತನ ತಾಯಿಯ ಅಳಲು

ತುಮಕೂರು, ಎ.26: ಕೊಲೆಯಾದ ಮಗನಿಗೆ ನ್ಯಾಯ ದೊರಕಿಸಲು ಹೋಗಿ, ಇರುವ ಮಗನನ್ನು ಕಳೆದುಕೊಳ್ಳಬೇಕಾ? ಎಂದು ಇತ್ತೀಚಿಗೆ ಗುಬ್ಬಿ ತಾಲೂಕು ಪೆದ್ದನಹಳ್ಳಿಯಲ್ಲಿ ಕೊಲೆಗೀಡಾದ ದಲಿತ ಯುವಕ ಗಿರೀಶ್ ಅವರ ತಾಯಿ ಗೌರಮ್ಮ ವಿವಿಧ ಸಂಘಟನೆಗಳ ಮುಖಂಡರ ಎದುರು ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತ ಕುಟುಂಬದ ಜೊತೆ ನಿಲ್ಲಬೇಕಾದ ಪೆದ್ದನಹಳ್ಳಿಯ ದಲಿತ ಕುಟುಂಬಗಳು ಮೃತ ಗಿರೀಶ್ ಕುಟುಂಬದೊಂದಿಗೆ ಸಾಮಾಜಿಕ ಬಹಿಷ್ಕಾರ ಹಾಕಿದಂತೆ ವರ್ತಿಸುತ್ತಿದೆ. ಸಾಂತ್ವನ ಹೇಳಬೇಕಾದ ಗ್ರಾಮದ ಜನತೆ, ಆತನ ಸಾವಿನಿಂದ ನಮ್ಮ ಮಕ್ಕಳು ಜೈಲು ಸೇರುವಂತಾಯಿತು ಎಂದು ಹಿಡಿ ಶಾಪ ಹಾಕುತ್ತಿರುವುದಲ್ಲದೇ, ಕನಿಷ್ಠ ಸೌಜನ್ಯಕ್ಕೆ ಮಾತನಾಡಿಸುವ ಕೆಲಸ ಮಾಡುತ್ತಿಲ್ಲ. ಇದು ಗಿರೀಶ್ ಅವರ ತಾಯಿಯ ಆತಂಕ ಹೆಚ್ಚಾಗಲು ಕಾರಣವಾಗಿದೆ.

ಕಳ್ಳ ಎಂಬುದು ಕೊಲೆಗೆ ಮಾನದಂಡವಲ್ಲ: ಇಡೀ ಪ್ರಕರಣದಲ್ಲಿ ಕೇಳಿ ಬರುತ್ತಿರುವುದು ಕೊಲೆಯಾದ ಇಬ್ಬರು ಕಳ್ಳರು ಎಂದು. ಇವರಿಂದ ರೋಸಿ ಹೋದವರು ಹೀಗೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದು ನಿಜ ಎಂಬುದಾದರೆ ಕಳ್ಳತನದ ಬಗ್ಗೆ ಸಂಬಂಧಪಟ್ಟ ಠಾಣೆಗೆ ದೂರು ನೀಡಬೇಕಿತ್ತು. ತಪ್ಪು ಸಾಬೀತಾಗಿದ್ದರೆ ಶಿಕ್ಷೆಯೂ ಆಗುತ್ತಿತ್ತು. ಆದರೆ, ಇವರ ಕಳ್ಳತನವನ್ನು ತಡೆಯಲು ಕೊಲೆ ಮಾಡುವುದು ನ್ಯಾಯವೇ ಎಂಬುದು ಮೃತ ಗಿರೀಶ್‌ನ ತಾಯಿಯ ಪ್ರಶ್ನೆ.

ಪೆದ್ದನಹಳ್ಳಿ ಗಿರೀಶನ ಜೊತೆಯೇ ಕೊಲೆಯಾದ ಮಂಚಲದೊರೆ ಗಿರೀಶ್ ಅವರ ತಾಯಿ ಚಿಕ್ಕತಾಯಮ್ಮ ಅವರ ನೋವು ಮತ್ತೊಂದು ರೀತಿಯದ್ದು, ತಂದೆಯೂ ಇಲ್ಲ, ಇದ್ದೊಬ್ಬ ತಮ್ಮ ಇಲ್ಲ. ಗಂಡನೂ ಇಲ್ಲ. ಇಡೀ ಕುಟುಂಬಕ್ಕೆ ಗಂಡು ದಿಕ್ಕಿಲ್ಲದಂತಾಗಿದೆ. ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುತ್ತಿದ್ದ ನನ್ನ ತಮ್ಮನನ್ನು ಇಷ್ಟು ಕ್ರೂರವಾಗಿ ಕೊಲೆ ಮಾಡಲು, ಆತ ಮಾಡಿದ ತಪ್ಪೇನು? ನನಗೆ ದಿಕ್ಕು ಯಾರು ಎಂಬುದು ಅವರ ಪ್ರಶ್ನೆ.

ಸೌಜನ್ಯಕ್ಕೂ ಭೇಟಿ ನೀಡದ ಜನಪ್ರತಿನಿಧಿಗಳು: ಶಿವಮೊಗ್ಗದ ಹರ್ಷ ಕೊಲೆ, ಬೆಂಗಳೂರಿನ ಚಂದ್ರು ಕೊಲೆಗೆ ಸಂಬಂಧಿಸಿ ಮುಖ್ಯಮಂತ್ರಿಯೇ ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೇ, 25 ಲಕ್ಷ ರೂ. ಪರಿಹಾರ ನೀಡಿದರು. ಆದರೆ, ಘಟನೆ ನಡೆದು 5 ದಿನ ಕಳೆದರೂ ಓರ್ವ ಗ್ರಾಪಂ ಸದಸ್ಯನೂ ಇಲ್ಲಿಯವರೆಗೂ ಕುಟುಂಬಸ್ಥರನ್ನು ಭೇಟಿ ನೀಡಿ ಸಾಂತ್ವನ ಹೇಳಿಲ್ಲ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷವೂ ಧ್ವನಿ ಎತ್ತಿಲ್ಲ. ಹಾಗಾದರೆ ದಲಿತ ಯುವಕರ ಪ್ರಾಣಗಳಿಗೆ ಬೆಲೆ ಇಲ್ಲವೇ ಎಂಬುದು ದಲಿತ ಮುಖಂಡರ ಪ್ರಶ್ನೆಯಾಗಿದೆ.

ನನ್ನ ತಮ್ಮನ ಸಾವಿಗೆ ನ್ಯಾಯ ದೊರೆಯಬೇಕು. ಆತ ಮ್ಯಾನುವೆಲ್ ಸ್ಕಾವೆಂಜರ್ ಕೆಲಸ ಮಾಡುತ್ತಿದ್ದ. ತಮ್ಮ ಊರಿನ ಯಾವುದೇ ಕೆಲಸಗಳಿಗೆ ಮುಂದೆ ನಿಲ್ಲುತಿದ್ದ, ಇಂತಹ ವ್ಯಕ್ತಿಯನ್ನು ಅಷ್ಟೊಂದು ಅಮಾನುಷವಾಗಿ ಕೊಲೆ ಮಾಡಲು ಮನಸ್ಸಾದರೂ ಹೇಗೆ ಬಂತು. ಹಾಗಾಗಿ ನಾವು ಎಂದಿಗೂ ಯಾರೊಂದಿಗೂ ರಾಜಿಯಾಗುವುದಿಲ್ಲ. ನ್ಯಾಯ ಸಿಗುವವರೆಗೂ ಹೋರಾಟ ನಡೆಸುತ್ತೇವೆ*.

-ಶ್ರೀಧರ್, ಪೆದ್ದನಹಳ್ಳಿ ಗಿರೀಶ್ ಸಹೋದರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X